Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭೆಯ 2019-20ನೇ ಸಾಲಿನ...

ಪುತ್ತೂರು ನಗರಸಭೆಯ 2019-20ನೇ ಸಾಲಿನ ಬಜೆಟ್ ಮಂಡನೆ

ವಾರ್ತಾಭಾರತಿವಾರ್ತಾಭಾರತಿ22 Feb 2019 10:26 PM IST
share
ಪುತ್ತೂರು ನಗರಸಭೆಯ 2019-20ನೇ ಸಾಲಿನ ಬಜೆಟ್ ಮಂಡನೆ

ಪುತ್ತೂರು, ಫೆ. 22: ನಗರಸಭೆಗೆ ಚುನಾವಣೆ ನಡೆದು ಹಲವು ತಿಂಗಳುಗಳು ಕಳೆದರೂ ಇನ್ನೂ ಆಡಳಿತ ಮಂಡಳಿ ರಚನೆಯಾಗದಿರುವ ಹಿನ್ನಲೆಯಲ್ಲಿ ಆಡಳಿತಾಧಿಕಾರಿಯಾದ ಜಿಲ್ಲಾಧಿಕಾರಿಯವರ ಅನುಮೋದನೆಯಂತೆ ಶುಕ್ರವಾರ ಪುತ್ತೂರು ನಗರಸಭೆಯ 2019-20ನೇ ಸಾಲಿನ ಬಜೆಟನ್ನು ಪೌರಾಯುಕ್ತೆ ರೂಪಾ ಶೆಟ್ಟಿ ಮಂಡಿಸಿದರು. ಒಟ್ಟು ರೂ.41.87 ಕೋಟಿ ಆದಾಯ, ರೂ.41.29 ಕೋಟಿ ರೂ. ವ್ಯಯ ಹಾಗೂ 58.87 ಲಕ್ಷ ರೂ. ಮಿಗತೆ ಬಜೆಟ್‍ನ್ನು ಸಭೆಯಲ್ಲಿ ಮಂಡಿಸಲಾಯಿತು.

12.48 ಕೋಟಿ ರೂ. ಸ್ವಂತ ಆದಾಯ ನಿರೀಕ್ಷಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದಿಂದ 17.30 ಕೋಟಿ ಅನುದಾನ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು. 2019-20ನೇ ಸಾಲಿನಲ್ಲಿ ಸ್ವಂತ ಆದಾಯದಲ್ಲಿ ಕೆಲವೊಂದು ಪ್ರಮುಖ ನಿರೀಕ್ಷಿತ ಆದಾಯಗಳ ವಿವರಗಳನ್ನು ಪೌರಾಯುಕ್ತರು ಈ ಸಂದರ್ಭದಲ್ಲಿ ನೀಡಿದರು.

ಈ ವರ್ಷದಲ್ಲಿ 3.50 ಕೋಟಿ ಆಸ್ತಿ ತೆರಿಗೆಯಿಂದ ಅದಾಯ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿನ ಶುಲ್ಕದಲ್ಲಿ 3.10 ಕೋಟಿ, ನೀರಿನ ನಳ್ಳಿ ಸಂಪರ್ಕದಲ್ಲಿ 15 ಲಕ್ಷ, ಕಟ್ಟಡ ಹಾಗೂ ಉದ್ಯಮ ಪರವಾನಿಗೆಯಿಂದ 15 ಲಕ್ಷ, ಕರ ಸಂಗ್ರಹಣೆಯಿಂದ 9.10 ಲಕ್ಷ, ಖಾತೆ ಬದಲಾವಣೆ, ಜನನ ಮರಣ ಪ್ರತಿ ನೀಡಿಕೆ ಯಿಂದ 25 ಲಕ್ಷ, ಆಸ್ತಿ ತೆರಿಗೆ ಹಾಗೂ ಉದ್ಯಮ ಪರವಾನಿಗೆಗಳಿಗೆ ವಿಧಿಸುವ ದಂಡನೆಯಿಂದ 45.25 ಲಕ್ಷ, ನವೀಕರಣಗೊಂಡ ಪುರಭವನದಿಂದ 10 ಲಕ್ಷ ಸೇರಿದಂತೆ ಇನ್ನಿತರಗಳಿಂದ ಆದಾಯವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಒಟ್ಟು ನಿರೀಕ್ಷಿತ ಆದಾಯದಿಂದ ಕೆಲವೊಂದು ಮೂಲಭೂತ ಸೌಕರ್ಯಗಳಿಗೆ ಹಂಚಿಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳಿಗಾಗಿ ನಗರಸಭೆಯ ಪ್ರತೀ ವಾರ್ಡ್‍ಗಳಿಗೆ ತಲಾ 10 ಲಕ್ಷ ರೂ., ಪ.ಜಾತಿ, ಪಂಗಡದವರಿಗೆ ಶೇ.24.10ರ ನಿಧಿಯಡಿ 3.10 ಲಕ್ಷ, ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕುಟುಂಬಗಳಿಗೆ ಶೇ.7.25 ರ ನಿಧಿಯಡಿ ಸಹಾಯಧನ ಒದಗಿಸಲು 33.54 ಲಕ್ಷ, ಭಿನ್ನ ಸಾಮಥ್ರ್ಯ ಹೊಂದಿದವರಿಗೆ ಶೇ.5 ನಿಧಿಯಲ್ಲಿ 23.13 ಲಕ್ಷ, ಕಚೇರಿ ಆಡಳಿತ ವ್ಯವಸ್ಥೆ ಸಾರ್ವಜನಿಕರಿಗೆ ತ್ವರಿತಗೊಳಿಸುವ ನಿಟ್ಟಿನಲ್ಲಿ ತಂತ್ರಾಂಶ ಅಭಿವೃದ್ಧಿಗಾಗಿ 15 ಲಕ್ಷ ರೂ., ದಾರಿದೀಪ, ಪ್ರತೀ ವಾರ್ಡಿಗೆ ನೀರು ಸರಬ ರಾಜು, ಹೊರಗುತ್ತಿಗೆ ನಿರ್ವಹಣೆಗೆ, ನಲ್ಮ್ ಯೋಜನೆಯಡಿ ಸಾಲ ಹಾಗೂ ಸಹಾಯಧನ, ಹೊಸ ವಾಹನ ಖರೀದಿಗೆ ಇನ್ನಿತರ ಸೌಲಭ್ಯಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ ನಗರೊತ್ಥಾನದ ಯೋಜನೆಯ 25 ಕೋಟಿ ಅನುದಾನದಲ್ಲಿ ಸುಮಾರು 22 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಆರು ಬೆದ್ರಾಳ-ಸಾಲ್ಮರ, ಬಲ್ನಾಡು ರಸ್ತೆ ಸೇರಿದಂತೆ ಆರು ಕಾಮಗಾರಿಗಳು ಸಂಪೂರ್ಣಗೊಂಡಿದೆ. ಕೋರ್ಟ್ ರಸ್ತೆಯಲ್ಲಿರುವ ಚಿಣ್ಣರ ಪಾರ್ಕ್‍ನ್ನು ನಿರ್ವಹಣೆಗಾಗಿ ಎನ್‍ಜಿಒ ಒಪ್ಪಿಸುವ ಯೋಜನೆಯಿದೆ ಎಂದು ತಿಳಿಸಿದರು.

ನಗರಸಭೆ ತೆರಿಗೆಯನ್ನು ಏ.31 ರೊಳಗೆ ಸಲ್ಲಿಸಿದೆ ಶೇ.5 ರಿಯಾಯಿತಿ ನೀಡಲಾಗುವುದು. ಮೇ-ಜೂನ್ ತಿಂಗಳ ಒಳಗೆ ಸಲ್ಲಿಸಿದರೆ ಯಾವುದೇ ದಂಡ ಇಲ್ಲ. ಜುಲೈ ನಂತರ ಪಾವತಿಸಿದರೆ ಶೇ.2 ದಂಡ ವಿಧಿಸಲಾಗುವುದು. ಆದ್ದರಿಂದ ತೆರಿಗೆಯನ್ನು ಕ್ಲಪ್ತ ಸಮಯದಲ್ಲಿ ಜನತೆ ಪಾವತಿಸಬೇಕು ಎಂದು ಈ ಸಂದರ್ಭ ಆಯುಕ್ತೆ ರೂಪಾ ಶೆಟ್ಟಿ ವಿನಂತಿಸಿದರು.

ವೇದಿಕೆಯಲ್ಲಿ ನಗರ ಸಭೆಯ ಲೆಕ್ಕಾಧಿಕಾರಿ ಪಿ.ಆರ್.ದೇವಾಡಿಗ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X