Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೈಬ್ರಿಡ್ ಕಾರ್ ಅನ್ವೇಷಣೆ: ಎಂಐಟಿಇಗೆ...

ಹೈಬ್ರಿಡ್ ಕಾರ್ ಅನ್ವೇಷಣೆ: ಎಂಐಟಿಇಗೆ ಸಮಗ್ರ ಚಾಂಪಿಯನ್ಸ್ ಟ್ರೋಫಿ

ರಾಷ್ಟ್ರ ಮಟ್ಟದ ಫಾರ್ಮುಲಾ ಇಂಪೀರಿಯಲ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ22 Feb 2019 10:58 PM IST
share
ಹೈಬ್ರಿಡ್ ಕಾರ್ ಅನ್ವೇಷಣೆ: ಎಂಐಟಿಇಗೆ ಸಮಗ್ರ ಚಾಂಪಿಯನ್ಸ್ ಟ್ರೋಫಿ

ಮಂಗಳೂರು, ಫೆ. 22: ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂಎನ್‌ಆರ್‌ಇ)ದ ಸಹಯೋಗದಲ್ಲಿ ಇಂಪೆರಿಯಲ್ ಸೊಸೈಟಿ ಆಫ್ ಇನ್ನೋವೆಟಿವ್ ಇಂಜಿನಿಯರ್ಸ್ (ಐಎಸ್‌ಐಇ)ಯಿಂದ ಇತ್ತೀಚೆಗೆ ಉತ್ತರಪ್ರದೇಶದ ನೊಯ್ಡೋದಲ್ಲಿರುವ ಬುದ್ಧ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ‘ಫಾರ್ಮುಲಾ ಇಂಪೆರಿಯಲ್-ಎಚ್‌ವಿಸಿ’ ಸ್ಪರ್ಧೆಯಲ್ಲಿ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಇಂಜಿನಿಯರಿಂಗ್ (ಎಂಐಟಿಇ)ಸಂಸ್ಥೆಯು ಸಮಗ್ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಮೂಡುಬಿದಿರೆಯ ಎಂಐಟಿಇ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಐಟಿಇ ಚೇರ್‌ಮನ್ ರಾಜೇಶ್ ಚೌಟ, ರಾಷ್ಟ್ರ ಮಟ್ಟದಲ್ಲಿ ನಡೆದ ಫಾರ್ಮುಲಾ ಇಂಪೀರಿಯಲ್ ಸ್ಪರ್ಧೆಯಲ್ಲಿ ಎಂಐಟಿಇಯ ‘ಟೀಮ್ ಅರವನ್ಸ್’ ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿಗಳ ಸರಮಾಲೆಯನ್ನೇ ತನ್ನದಾಗಿಸಿಕೊಂಡಿದೆ ಎಂದರು.

ಎಂಐಟಿಇಯ ‘ಟೀಮ್ ಅರವನ್ಸ್’ ತಂಡವು ಒಟ್ಟು ಆರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ‘ಜನರ ಆಯ್ಕೆಯ ಕಾರ್ ಪ್ರಶಸ್ತಿ’, ‘ಅತ್ಯುತ್ತಮ ಆಕ್ಸಲರೇಷನ್’, ಅತ್ಯುತ್ತಮ ಕ್ರಾಸ್ ಪ್ಯಾಡ್’, ‘ಅತ್ಯುತ್ತಮ ಚಾಲಕ’, ಅತ್ಯುತ್ತಮ ಒತ್ತಡ ಸಹಿಷ್ಣುತೆ’ ಪ್ರಶಸ್ತಿ ಸೇರಿದಂತೆ ಸಮಗ್ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡು ಬಂದಿದೆ. ಎಲ್ಲ ಪ್ರಶಸ್ತಿಗಳ ಮೊತ್ತವು 1.5 ಲಕ್ಷ ರೂ. ಆಗಿದ್ದು, ಮೊತ್ತಕ್ಕಿಂತ ವಿದ್ಯಾರ್ಥಿಗಳ ಪ್ರತಿಭೆಗೆ ದೊರೆತ ಪ್ರಶಸ್ತಿಯು ಸಂಸ್ಥೆಗೆ ಭೂಷಣವಾಗಿದೆ ಎಂದರು.

ವಿದ್ಯುಚ್ಛಕ್ತಿ ಚಾಲಿತ ಹೈಬ್ರಿಡ್ ವಾಹನವನ್ನು ಸಂಸ್ಥೆಯ ವಿದ್ಯಾರ್ಥಿಗಳೇ ವಿನ್ಯಾಸಗೊಳಿಸಿ, ನಿರ್ಮಿಸುವ ಹಲವು ಹಂತದ ಕಠಿಣ ಸವಾಲುಗಳನ್ನು ಒಳಗೊಂಡ ಈ ಪ್ರತಿಷ್ಠಿತ ಸ್ಪರ್ಧೆಯು ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಇಂಜಿನಿಯರಿಂಗ್ ಕೌಶಲಗಳನ್ನು ಪರೀಕ್ಷೆಗೆ ಒಡ್ಡುತ್ತದೆ. ಸಾಂಪ್ರದಾಯಿಕ ಇಂಧನ ಚಾಲಿತ ಐಸಿ ಇಂಜಿನ್ ಮತ್ತು ವಿದ್ಯುಚ್ಛಕ್ತಿ ಚಾಲಿತ ಮೋಟಾರ್ ಎರಡನ್ನೂ ಬಳಸಿ ವಿದ್ಯಾರ್ಥಿ ತಂಡಗಳು ನಿರ್ಮಿಸುವ ಹೈಬ್ರಿಡ್ ವಾಹನಗಳು ಈ ಸ್ಪರ್ಧೆಯ ಹಲವು ವಿಭಾಗಗಳಲ್ಲಿ ಸ್ಪರ್ಧಿಸುತ್ತವೆ ಎಂದರು.

ಫಾರ್ಮುಲಾ ಇಂಪೀರಿಯಲ್-ಎಚ್‌ವಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆಂದೇ ಮೀಸಲಾಗಿರುವ ರಾಷ್ಟ್ರೀಯ ಮಟ್ಟದ ಫಾರ್ಮುಲಾ ವಾಹನಗಳ ವಿನ್ಯಾಸ ಮತ್ತು ನಿರ್ಮಾಣದ ವಾರ್ಷಿಕ ಸ್ಪರ್ಧೆಯಾಗಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಇಂಜಿನಿಯರಿಂಗ್ ಕಾಲೇಜುಗಳ 30,000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಈ ವರ್ಷದ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು ಎಂದರು.

ಎಂಐಟಿಇಯ ‘ಟೀಮ್ ಅರವನ್ಸ್’ ತಂಡವು ವಿವಿಧ ವಿಭಾಗಗಳ 42 ಉತ್ಸಾಹಿ ವಿದ್ಯಾರ್ಥಿಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳಾದ ಮಂಜುನಾಥ್ ಎಸ್. ಮತ್ತು ರೋಹನ್ ಈ ತಂಡದ ನೇತೃತ್ವ ವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಸಿ.ಆರ್. ರಾಜಶೇಖರ್ ಮಾರ್ಗದರ್ಶನದಲ್ಲಿ 2018ರ ಜನವರಿಯಿಂದ ಕಾರ್ಯಾರಂಭ ಮಾಡಿದ ಈ ತಂಡವು ಒಂದು ವರ್ಷದ ನಿರಂತರ ಪ್ರಯತ್ನದ ಮೂಲಕ ಹೈಬ್ರಿಡ್ ವಾಹನವನ್ನು ಅಭಿವೃದ್ಧಿಪಡಿಸುವಲ್ಲಿ ಸಫಲವಾಗಿದೆ ಎಂದು ಹರ್ಷ ವ್ಯಕ್ತಯಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂಐಟಿಇ ಸಂಸ್ಥೆಯ ಪ್ರಾಂಶುಪಾಲ ಈಶ್ವರ ಪ್ರಸಾದ್, ಉಪ ಪ್ರಾಂಶುಪಾಲ ಡಾ.ಸಿ.ಆರ್. ರಾಜಶೇಖರ್ ಉಪಸ್ಥಿತರಿದ್ದರು.

ಹೈಬ್ರಿಡ್ ಕಾರಿನ ವಿಶೇಷತೆ

ಕಾರಿನ ವಿನ್ಯಾಸವನ್ನು ಮೌಲ್ಯಮಾಪನ ಮಾಡುವ ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನಂತರ, ಈ ಹೈಬ್ರಿಡ್ ವಾಹನವನ್ನು ಎಂಐಟಿಇ ಸಂಸ್ಥೆಯ ಆವರಣದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಕೆಟಿಎಂ-390 ಇಂಜಿನ್ ಮತ್ತು 6 ಕಿ.ವ್ಯಾ. ಸಾಮರ್ಥ್ಯದ ಬಿಎಲ್‌ಡಿಸಿ ಮೋಟಾರ್‌ಗಳನ್ನು ಈ ವಾಹನದಲ್ಲಿ ಅಳವಡಿಸಲಾಗಿದೆ. ಇಂಜಿನ್ ಮತ್ತು ಮೋಟಾರ್‌ಗಳನ್ನು ಪ್ರತ್ಯೇಕವಾಗಿ ಅಥವಾ ಒಟ್ಟಿಗೆ ಬಳಸಿ ವಾಹನವನ್ನು ಚಾಲನೆ ಮಾಡುವ ಹೈಬ್ರಿಡ್ ವ್ಯವಸ್ಥೆ ಈ ವಾಹನದ ವಿಶೇಷತೆಯಾಗಿದೆ.

ಕ್ಷಮತೆ ಮತ್ತು ಸುರಕ್ಷತೆ ಗಮನದಲ್ಲಿರಿಸಿಕೊಂಡು ಉತ್ಕೃಷ್ಟ ಗುಣಮಟ್ಟದ ಬಿಡಿ ಭಾಗಗಳನ್ನು ಬಳಸಿ ಈ ವಾಹನವನ್ನು ತಯಾರಿಸಲಾಗಿದೆ. ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾರಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅತ್ಯಂತ ವೇಗದ ಕಾರ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X