Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾವು ಪಾಕಿಸ್ತಾನದಲ್ಲಿಲ್ಲ, ನಮ್ಮ...

"ನಾವು ಪಾಕಿಸ್ತಾನದಲ್ಲಿಲ್ಲ, ನಮ್ಮ ಮಾಲಕರು ಹಿಂದೂ"

ಸಂಘಪರಿವಾರದ ಪ್ರತಿಭಟನೆ ಎದುರಿಸಿದ ‘ಕರಾಚಿ ಬೇಕರಿ’ಯ ವ್ಯವಸ್ಥಾಪಕ

ವಾರ್ತಾಭಾರತಿವಾರ್ತಾಭಾರತಿ23 Feb 2019 4:29 PM IST
share
ನಾವು ಪಾಕಿಸ್ತಾನದಲ್ಲಿಲ್ಲ, ನಮ್ಮ ಮಾಲಕರು ಹಿಂದೂ

ಹೊಸದಿಲ್ಲಿ, ಫೆ.23: ಪುಲ್ವಾಮ ದಾಳಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಕರಾಚಿ ಬೇಕರಿಯ ನಾಮಫಲಕದಲ್ಲಿರುವ ‘ಕರಾಚಿ’ ಹೆಸರನ್ನು ಸಂಘ ಪರಿವಾರ ಕಾರ್ಯಕರ್ತರ ತಂಡವೊಂದು ಮುಚ್ಚಿಸಿರುವ ಘಟನೆ ನಡೆದಿದೆ.

ಬೇಕರಿಗೆ ಪಾಕಿಸ್ತಾನದ ನಗರದ ಹೆಸರು ಇರುವುದಕ್ಕೆ ಸುಮಾರು 20-25 ಮಂದಿ ಸಂಘ ಪರಿವಾರ ಕಾರ್ಯಕರ್ತರು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇಂದಿರಾನಗರದಲ್ಲಿರುವ ಬೇಕರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಈ ಬೇಕರಿಯ ಹೆಸರು ಬದಲಿಸುವಂತೆ ಆಗ್ರಹಿಸಿದರು. ಬೇಕರಿ ಆವರಣದಿಂದ ತೆರಳಲು ಸಂಘ ಪರಿವಾರ ಕಾರ್ಯಕರ್ತರ ಗುಂಪು ನಿರಾಕರಿಸಿದ್ದು, ರಾತ್ರಿ 8:30ರವರೆಗೂ ಪ್ರತಿಭಟನೆ ಮುಂದುವರಿಸಿತ್ತು. ಗುಂಪನ್ನು ಸಮಾಧಾನಿಸುವ ಸಲುವಾಗಿ ಸಂಸ್ಥೆಯ ಸಿಬ್ಬಂದಿ ಕೊನೆಗೆ ನಾಮಫಲಕದಲ್ಲಿ ‘ಕರಾಚಿ’ ಎಂಬ ಪದವನ್ನು ಮುಚ್ಚಲು ಕ್ರಮ ಕೈಗೊಂಡು ಭಾರತದ ಧ್ವಜವನ್ನು ಇರಿಸಿದರು. ಆದರೆ ಘಟನೆಯಲ್ಲಿ ಯಾವುದೇ ಹಿಂಸಾಚಾರ ಅಥವಾ ಆಸ್ತಿಪಾಸ್ತಿ ನಷ್ಟದ ವರದಿಯಾಗಿಲ್ಲ.

"ನಮಗೆ ಸೇನೆಯಲ್ಲಿ ಇರುವವರ ಪರಿಚಯ ಇದೆ" ಎಂದು ಪ್ರತಿಭಟನಾಕಾರರು ಹೇಳಿಕೊಂಡಿದ್ದಾರೆ ಎಂದು ಬೇಕರಿಯ ವ್ಯವಸ್ಥಾಪಕರು ನ್ಯೂಸ್ ಮಿನಿಟ್‍ ಗೆ ತಿಳಿಸಿದ್ದಾರೆ. "ನಾವು ಪಾಕಿಸ್ತಾನದಲ್ಲಿದ್ದೇವೆ ಎನ್ನುವುದು ಅವರ ಭಾವನೆ. ಆದರೆ ನಾವು 53 ವರ್ಷಗಳಿಂದ ಈ ಹೆಸರು ಬಳಸುತ್ತಿದ್ದೇವೆ. ಇದರ ಮಾಲಕರು ಹಿಂದೂಗಳು. ಹೆಸರು ಮಾತ್ರ ಕರಾಚಿ ಬೇಕರಿ. ಅವರನ್ನು ಸಮಾಧಾನಿಸುವ ಸಲುವಾಗಿ ನಾವು ಭಾರತೀಯ ಧ್ವಜ ಹಾಕಿದೆವು" ಎಂದು ಅವರು ವಿವರಿಸಿದ್ದಾರೆ.

ಖಣಚಂದ್ ರಾಮನಾನಿ ಎಂಬವರು 1953ರಲ್ಲಿ ಕರಾಚಿ ಬೇಕರಿಯನ್ನು ಹೈದರಾಬಾದ್‍ನಲ್ಲಿ ಆರಂಭಿಸಿದ್ದರು. ಇವರು ದೇಶ ವಿಭಜನೆ ಸಂದರ್ಭದಲ್ಲಿ ಕರಾಚಿಯಿಂದ ವಲಸೆ ಬಂದವರು. ಆ ಬಳಿಕ ಇದು ದೇಶವ್ಯಾಪಿ ಫ್ರಾಂಚೈಸಿಯಾಗಿ ಬೆಳೆದಿದೆ.

ಈಗಾಗಲೇ ಸಿನಿಮಾ ಕಾರ್ಮಿಕರ ಸಂಘ ಪಾಕಿಸ್ತಾನದ ಎಲ್ಲ ಕಲಾವಿದರನ್ನು ನಿಷೇಧಿಸಿದ್ದು, ಪಾಕಿಸ್ತಾನದ ಜತೆಗಿನ ಕ್ರೀಡಾ ಸಂಬಂಧವನ್ನು ಕಡಿದುಕೊಳ್ಳಲು ಬಿಸಿಸಿಐ ಮುಂದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X