Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಣಿ ಹಂತಕ ಸೈನೈಡ್ ಮೋಹನ್‌ಗೆ...

ಸರಣಿ ಹಂತಕ ಸೈನೈಡ್ ಮೋಹನ್‌ಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆ

7ನೇ ಪ್ರಕರಣದಲ್ಲೂ ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ23 Feb 2019 7:14 PM IST
share
ಸರಣಿ ಹಂತಕ ಸೈನೈಡ್ ಮೋಹನ್‌ಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆ

ಮಂಗಳೂರು, ಫೆ. 23: ರಾಷ್ಟ್ರಾದ್ಯಂತ ಸಂಚಲನ ಮೂಡಿಸಿದ ಸರಣಿ ಹಂತಕ ಸೈನೈಡ್ ಮೋಹನ್ ಕುಮಾರ್‌ನ 7ನೇ ಪ್ರಕರಣದ ಆರೋಪವು ಸಾಬೀತಾಗಿದ್ದು, ಅಪರಾಧಿಗೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿಕ್ಷೆಯ ವಿವರ

ಐಪಿಸಿ ಸೆಕ್ಷನ್ 366 (ಅಪಹರಣ)ರಡಿ ಆರು ವರ್ಷ ಕಠಿಣ ಸಜೆ, ಮೂರು ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಜೆ, ಸೆಕ್ಷನ್ 302 (ಕೊಲೆ)ರಡಿ ಜೀವನಪರ್ಯಂತ ಜೀವಾವಧಿ ಶಿಕ್ಷೆ, ಸೆಕ್ಷನ್ 376 (ಅತ್ಯಾಚಾರ)ರಡಿ ಏಳು ವರ್ಷ ಕಠಿಣ ಸಜೆ, ಮೂರು ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಸಜೆ, ಸೆಕ್ಷನ್ 328 (ವಿಷ ಉಣಿಸಿದ್ದು)ರಡಿ ಏಳು ವರ್ಷ ಸಜೆ ಮೂರು ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಜೆ, ಸೆಕ್ಷನ್ 201 (ಸಾಕ್ಷಿನಾಶ) ಐದು ವರ್ಷ ಕಠಿಣ ಸಜೆ, ಮೂರು ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಜೆ, ಸೆಕ್ಷನ್ 392 (ಚಿನ್ನಾಭರಣ ಸುಲಿಗೆ) ಐದು ವರ್ಷ ಕಠಿಣ ಸಜೆ, ಮೂರು ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಜೆ, ಸೆಕ್ಷನ್ 417 (ವಂಚನೆ)ರಡಿ ಆರು ತಿಂಗಳ ಸಜೆ ನೀಡಿ ತೀರ್ಪು ನೀಡಿದೆ.

ಕೊಲೆಯಾದ ಯುವತಿಯ ಕುಟುಂಬಸ್ಥರು ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಪಡೆದುಕೊಳ್ಳಲು ಅರ್ಹರೆಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಪ್ರಕರಣ ವಿವರ

ಬಂಟ್ವಾಳ ಮಾಣಿ ಗ್ರಾಮ ಪಂಚಾಯತ್‌ನ 25 ವರ್ಷದ ಯುವತಿಯೊಬ್ಬರನ್ನು ಸೈನೈಡ್ ಕಿಲ್ಲರ್ ಮೋಹನ್‌ ಕುಮಾರ್ ವೆನ್ಲಾಕ್ ಆಸ್ಪತ್ರೆಯಲ್ಲಿ ಪರಿಚಯಿಸಿಕೊಂಡಿದ್ದ. ಈ ಸಂದರ್ಭ ತನ್ನನ್ನು ಸದಾನಂದ ನಾಯ್ಕ ಎಂದು ಪರಿಚಯಿಸಿಕೊಂಡಿದ್ದ ಆತ, ಯುವತಿ ಕೈಯಲ್ಲಿ ಮೊಬೈಲ್ ಇಲ್ಲದ ಕಾರಣ ಆಕೆಯ ನೆರೆಮನೆಯ ವ್ಯಕ್ತಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ.

ಆ ನಂತರ ಆಕೆಯ ಜತೆ ‘ನಾನು ನಿಮ್ಮ ಜಾತಿಯವನೇ, ನಿನ್ನನ್ನು ಮದುವೆಯಾಗುತ್ತೇನೆ’ ಎಂದು ನಂಬಿಸಿದ್ದ. ಬಳಿಕ ಆಕೆಯ ಬಳಿ 2008ರ ಜ. 2ರಂದು ಪುತ್ತೂರು ಬಸ್ ನಿಲ್ದಾಣಕ್ಕೆ ಚಿನ್ನಾಭರಣ ಧರಿಸಿ ಬರಲು ಹೇಳಿದ್ದ. ಅದರಂತೆ ಯುವತಿ ಬಂದ ಬಳಿಕ ಇಬ್ಬರೂ ಮಡಿಕೇರಿಗೆ ತೆರಳಿ ಅಲ್ಲಿನ ಖಾಸಗಿ ವಸತಿ ಗೃಹದಲ್ಲಿ ರೂಮ್ ಪಡೆದುಕೊಂಡಿದ್ದಾರೆ. ಲಾಡ್ಜ್‌ನಲ್ಲಿ ಮೋಹನ ತನ್ನನ್ನು ಆನಂದ ನಾಯ್ಕ ಎಂದು ಪರಿಚಯಿಸಿ ರಿಜಿಸ್ಟ್ರಿ ಬರೆದಿದ್ದ. ಬಳಿಕ ಯುವತಿಯ ವಿರೋಧದ ಮಧ್ಯೆಯೂ ರಾತ್ರಿ ಅತ್ಯಾಚಾರ ಮಾಡಿದ್ದಾನೆ.

ಕೊಲೆಗೆ ಸ್ಕೆಚ್

ಜ.3ರಂದು ಬೆಳಗ್ಗೆ ಮೋಹನ ಯುವತಿಯ ಬಳಿ ‘ನಿನ್ನ ಚಿನ್ನಾಭರಣ, ಹಣ ರೂಮಿನಲ್ಲಿಡು, ನಾವು ಹೊರಗೆ ಹೋಗಿ ಬರೋಣ’ ಎಂದು ನಂಬಿಸಿ, ಮಡಿಕೇರಿ ಬಸ್ ನಿಲ್ದಾಣ ಬಳಿ ಕರೆದೊಯ್ದಿದ್ದಾನೆ. ಬಳಿಕ ಯುವತಿಯ ಬಳಿ ‘ನಿನ್ನೆ ಲೈಂಗಿಕ ಸಂಪರ್ಕ ಮಾಡಿದ ಕಾರಣ ಗರ್ಭಿಣಿಯಾಗದಂತೆ ತಡೆಯಲು ಶೌಚಾಲಯಕ್ಕೆ ಹೋಗಿ ಈ ಮಾತ್ರೆ ಸೇವಿಸು’ ಎಂದು ಸೈನೈಡ್ ನೀಡಿದ್ದಾನೆ. ಇದನ್ನು ನಂಬಿದ ಯುವತಿ ಮಾತ್ರೆ ಸೇವಿಸಿ ಅಲ್ಲೇ ಕುಸಿದು ಬಿದ್ದಿದ್ದಾಳೆ. ಇದಾದ ಕೂಡಲೇ ಮೋಹನ್ ರೂಮಿಗೆ ತೆರಳಿ ಚಿನ್ನಾಭರಣ ಸಹಿತ ಅಲ್ಲಿಂದ ಪರಾರಿಯಾಗಿದ್ದ.

ಶೌಚಾಲಯದ ಸ್ವಚ್ಛತೆ ಮಾಡಲು ಹೋದ ಕಾರ್ಮಿಕರು ಹಾಗೂ ಟ್ರಾಫಿಕ್ ಕಂಟ್ರೋಲರ್ ವಿಷಯ ತಿಳಿದು ಯುವತಿಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಾಗ ಯುವತಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಜ. 4ರಂದು ಮರಣೋತ್ತರ ಪರೀಕ್ಷೆ ನಡೆಸಿ ಇದೊಂದು ಅಸಹಜ ಸಾವು ಎಂದು ಮಡಿಕೇರಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕೊಲೆ ಘಟನೆ ನಡೆದ ಕೆಲವು ದಿನದ ಬಳಿಕ ಯುವತಿಯ ನೆರೆಮನೆಯ ಯುವಕನ ಮೊಬೈಲ್‌ಗೆ ಕರೆ ಮಾಡಿದ ಮೋಹನ, ಯುವತಿಯ ತಂಗಿಯ ಜತೆ ಮಾತನಾಡಿ ‘ನಾನು ಆಕೆಯನ್ನು ವಿವಾಹವಾಗಿದ್ದು, ಕ್ಷೇಮವಾಗಿದ್ದೇವೆ. ಒಂದು ವಾರದೊಳಗೆ ಊರಿಗೆ ಮರಳಿ ಬರುತ್ತೇವೆ. ನಮ್ಮನ್ನು ಹುಡುಕುವ ಪ್ರಯತ್ನ ಮಾಡಬೇಡಿ’ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

2009 ಅ. 26ರಂದು ಬರಿಮಾರು ಯುವತಿಯೊಬ್ಬಳ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಆರೋಪಿ ಮೋಹನ ಮಾಣಿಯ ಯುವತಿಯ ಕೊಲೆ ಮಾಡಿದ ಬಗ್ಗೆ ಬಾಯ್ಬಿಟ್ಟಿದ್ದಾನೆ. ಎಎಸ್ಪಿ ಚಂದ್ರಗುಪ್ತಾ ಈ ಹೇಳಿಕೆಗಳನ್ನು ದಾಖಲಿಸಿದ್ದರು.

ಪ್ರಕರಣವನ್ನು ಇನ್‌ಸ್ಪೆಕ್ಟರ್ ನಂಜುಂಡೇಗೌಡ ಅವರು ಬಾಡಿ ವಾರಂಟ್ ಪಡೆದು ವಿಚಾರಣೆ ನಡೆಸಿ, ಸಿಒಡಿಗೆ ಹಸ್ತಾಂತರಿಸಿದ್ದಾರೆ. ಸಿಒಡಿಯವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮೋಹನ ಮತ್ತು ಯುವತಿ ಮಡಿಕೇರಿಯಲ್ಲಿ ಉಳಿದುಕೊಂಡಿದ ವಸತಿಗೃಹ, ಅಲ್ಲಿ ಆನಂದ ನಾಯ್ಕ ಹೆಸರಿನಲ್ಲಿ ಕೊಠಡಿ ಪಡೆದುಕೊಂಡಿರುವುದು, ಮೋಹನ್ ಹಸ್ತಾಕ್ಷರ ಎಲ್ಲವೂ ದೃಢಪಟ್ಟಿತ್ತು. ಯುವತಿಯ ಚಿನ್ನಾಭರಣವನ್ನೂ ಮಾರಾಟ ಮಾಡಿದ ಅಂಗಡಿಯಿಂದ ಮುಟ್ಟುಗೋಲು ಹಾಕಲಾಗಿತ್ತು.

40 ಸಾಕ್ಷಿ ವಿಚಾರಣೆ

ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಡಿ.ಟಿ. ಪುಟ್ಟರಂಗಸ್ವಾಮಿ 40 ಸಾಕ್ಷಿಗಳನ್ನು ವಿಚಾರಣೆ ನಡೆಸಿ, 64 ದಾಖಲೆ, 38 ಸಾಕ್ಷ್ಯಗಳನ್ನು ಪರಿಗಣಿಸಿ ಅಪರಾಧಿಗೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ತೀರ್ಪು ನೀಡಿದ್ದಾರೆ. ಈ ಅವಧಿಯಲ್ಲಿ ಅಪರಾಧಿ ಪರೋಲ್ ಹೋಗುವಂತಿಲ್ಲ.

ಸರಕಾರದ ಪರವಾಗಿ ಜುಡಿತ್ ಎಂ.ಕ್ರಾಸ್ತಾ ವಾದಿಸಿದ್ದರು.

ಪ್ರೀತಿಯ ಬಲೆಗೆ ಬೀಳಿಸಿದ್ದ

ಮಾಣಿಯ ಯುವತಿ ತನ್ನ ತಾಯಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ದಾಖಲಾಗಿದ್ದ ಸಂದರ್ಭ ಮೋಹನ ಆಕೆಯನ್ನು ಪರಿಚಯಿಸಿಕೊಂಡಿದ್ದ. ಯುವತಿ ಜತೆ ತಾನು ನಾಯ್ಕ ಸಮುದಾಯದವನೇ ಎಂದು ನಂಬಿಸಿ, ಪ್ರೀತಿಯ ಬಲೆಗೆ ಬೀಳಿಸಿದ್ದ. ಇದು ಮಾತ್ರವಲ್ಲದೆ, ಒಂದು ದಿನ ಯುವತಿಯ ತಾಯಿಯ ಬಳಿ ‘ನಾನು ಕಾರ್ಕಳದಲ್ಲಿ ಕೃಷಿ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದು, ನಿಮ್ಮ ಮಗಳನ್ನು ಮದುವೆಯಾಗಲು ಸಿದ್ಧನಿದ್ದೇನೆ’ ಎಂದು ಹೇಳಿದ್ದ. ಅದಕ್ಕೆ ಯುವತಿಯ ತಾಯಿ ‘ಮನೆಗೆ ಬಂದು ಮಾತನಾಡು’ ಎಂದು ಹೇಳಿದ್ದರು. ಈ ಕೊಲೆ ಪ್ರಕರಣದ ಬಗ್ಗೆ ಯುವತಿಯ ತಾಯಿಯೂ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X