Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏರೋ ಇಂಡಿಯಾ ಶೋ: ಲೋಹದ ಹಕ್ಕಿಗಳನ್ನು...

ಏರೋ ಇಂಡಿಯಾ ಶೋ: ಲೋಹದ ಹಕ್ಕಿಗಳನ್ನು ಚಲಾಯಿಸಿದ ಮಹಿಳಾ ಪೈಲಟ್ ಗಳು

ವಾರ್ತಾಭಾರತಿವಾರ್ತಾಭಾರತಿ23 Feb 2019 7:43 PM IST
share
ಏರೋ ಇಂಡಿಯಾ ಶೋ: ಲೋಹದ ಹಕ್ಕಿಗಳನ್ನು ಚಲಾಯಿಸಿದ ಮಹಿಳಾ ಪೈಲಟ್ ಗಳು

ಬೆಂಗಳೂರು, ಫೆ. 23: ಅಂತರ್‌ರಾಷ್ಟ್ರೀಯ ವೈಮಾನಿಕ ಪ್ರದರ್ಶನದಲ್ಲಿ ಶನಿವಾರ ಮಹಿಳಾ ಪೈಲೆಟ್‌ಗಳು ಸಾವಿರಾರು ಅಡಿಗಳಿಂದ ಜಿಗಿಯುವ ಮೂಲಕ ಮಹಿಳೆಯರು ಕಡಿಮೆ ಏನಿಲ್ಲ ಎಂಬುದನ್ನು ಸಾಬೀತುಪಡಿಸಿದರು.

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋದಲ್ಲಿ ನಾಲ್ಕನೇ ದಿನ ಮಹಿಳಾ ಪೈಲೆಟ್‌ಗಳು ಲೋಹದ ಹಕ್ಕಿಗಳನ್ನು ಚಲಾಯಿಸಿದರು. ಅಲ್ಲದೆ, ಸಾವಿರಾರು ಅಡಿಗಳಿಂದ ಪ್ಯಾರಾಚೂಟ್ ಮೂಲಕ ನೆಲಕ್ಕೆ ಜಿಗಿದು ಅಚ್ಚರಿ ಮೂಡಿಸಿದರು.

ಆರಂಭದಲ್ಲಿಯೇ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಯುದ್ಧ ವಿಮಾನ ತೇಜಸ್‌ನಲ್ಲಿ ಹಾರಾಟ ನಡೆಸಿದರು. ಇಂದಿನ ಏರ್ ಶೋನಲ್ಲಿ ಮಹಿಳೆಯರದ್ದೇ ಅಬ್ಬರ ಹಾಗೂ ಕಾರುಬಾರು ಕಂಡುಬಂತು. ಬೆಳಗ್ಗೆಯೇ ಸೇನಾ ಪಡೆಯ ಪ್ಯಾರಾ ಜಂಪರ್ಸ್‌ ತಂಡದ ಐದು ಮಹಿಳಾ ಸದಸ್ಯರು ಯುದ್ದ ವಿಮಾನವನ್ನೇರಿ ನಾಲ್ಕು ಸಾವಿರ ಅಡಿಗಳ ಅಂತರದಿಂದ ಜಿಗಿದು ಭೂ ಸ್ಪರ್ಶ ಮಾಡಿದರು.

ಭಯ, ಆತಂಕವಿಲ್ಲದೆ ವಿಮಾನದಿಂದ ಜಿಗಿದ ಸೇನಾ ಪಡೆಯ ಮಹಿಳಾ ಪ್ಯಾರಾ ಜಂಪರ್ಸ್‌ ನೀಡಿದ ಪ್ರದರ್ಶನಕ್ಕೆ ಜನರಿಂದ ಭಾರೀ ಪ್ರಮಾಣದಲ್ಲಿ ಮೆಚ್ಚುಗೆ ವ್ಯಕ್ತವಾಯಿತು. ಸೇನಾ ಪಡೆಯ 12 ಜನರ ಪ್ಯಾರಾ ಜಂಪರ್ಸ್‌ ತಂಡದಲ್ಲಿ ಆರು ಮಹಿಳೆಯರು, ಆರು ಪುರುಷರಿದ್ದು, ಇವರಲ್ಲಿ ಐದು ಮಹಿಳೆಯರು ಇಂದು ಪಾಲ್ಗೊಂಡಿದ್ದರು. ಇಲ್ಲಿ ಬಳಸಿದ್ದ ಪ್ಯಾರಾಚೂಟ್‌ಗಳು ಬಣ್ಣ ಬಣ್ಣದಿಂದ ಕೂಡಿದ್ದು, ಒಂದು ಪ್ಯಾರಾಚೂಟ್ ತ್ರಿವರ್ಣ ಧ್ವಜ ಬಣ್ಣ ಹೊಂದಿದ್ದರೆ, ಎರಡು ಪ್ಯಾರಾಚೂಟ್‌ಗಳು ಪಿಂಕ್ ಬಣ್ಣದ್ದಾಗಿದ್ದು, ಮಹಿಳಾ ದಿನಾಚರಣೆಯನ್ನು ಸಂಕೇತಿಸಿದವು. ಮುಂದಿನ ಮಾ.8 ರಂದು ವಿಶ್ವ ಮಹಿಳಾ ದಿನಾಚರಣೆಯಾಗಿದ್ದು, ಅದಕ್ಕೂ ಮೊದಲೇ ಏರ್ ಶೋನಲ್ಲಿ ತಮ್ಮ ಪ್ರದರ್ಶನ ನೀಡುವ ಮೂಲಕ ಮಹಿಳಾ ದಿನಾಚರಣೆಗೂ ಮೊದಲೇ ಸಾರ್ಥಕತೆ ಪಡೆದುಕೊಂಡರು. ಸೇನಾ ಪ್ಯಾರಾ ಜಂಪರ್ಸ್‌ನಲ್ಲಿ ಬೆಂಗಳೂರು ಮೂಲಕ ಕನ್ನಡದ ಮಹಿಳೆಯೂ ಇದ್ದಾರೆ. ಕಳೆದ 9 ವರ್ಷಗಳಿಂದ ಕರ್ನಾಟಕದ ಸಂಗೀತ ಪಾಲ್‌ರಾಜ್ ಸೇನಾ ಪ್ಯಾರಾ ಜಂಪರ್ಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡತಿ ಸಂಗೀತಾ ಪಾಲ್‌ರಾಜ್, ಭಾರತದ ಸೇನಾಪಡೆಯ ಪ್ಯಾರಾಜಂಪಿಂಗ್ ತಂಡದಲ್ಲಿ ಅವಕಾಶ ಪಡೆದಿರುವುದು ನನಗೆ ಹೆಮ್ಮೆ ಎನಿಸಿದೆ. ವಿದ್ಯಾಭ್ಯಾಸ ಪೂರ್ಣಗೊಂಡ ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತಮಗೆ ಸೇನೆಗೆ ಸೇರಬೇಕು ಎಂಬ ಆಸೆ ಮೊಳಕೆಯೊಡೆದು ಅದರಂತೆ ಸೇನಾಪಡೆಯ ಪ್ಯಾರಾ ಜಂಪಿಂಗ್ ತಂಡ ಸೇರಿಕೊಂಡೆ. 9 ವರ್ಷದಿಂದ ಪ್ಯಾರಾಜಂಪಿಂಗ್ ನಡೆಸುತ್ತಿದ್ದೇನೆ. ಸಾವಿರಾರು ಅಡಿಗಳಿಂದ ಜಿಗಿದು ಪ್ಯಾರಾಚೂಟ್ ಮೂಲಕ ನೆಲವನ್ನು ಸ್ಪರ್ಶಿಸುವುದು ನಿಜಕ್ಕೂ ರೋಮಾಂಚನ ಉಂಟು ಮಾಡುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X