Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಹಿತ್ಯ ವಿಮರ್ಶೆ ಅಳಿವಿನಂಚಿಗೆ:...

ಸಾಹಿತ್ಯ ವಿಮರ್ಶೆ ಅಳಿವಿನಂಚಿಗೆ: ಬಿ.ಜನಾರ್ದನ ಭಟ್

ವಿ.ಎಂ.ಇನಾಂದಾರ್ ವಿಮರ್ಶಾ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ23 Feb 2019 8:29 PM IST
share
ಸಾಹಿತ್ಯ ವಿಮರ್ಶೆ ಅಳಿವಿನಂಚಿಗೆ: ಬಿ.ಜನಾರ್ದನ ಭಟ್

ಉಡುಪಿ, ಫೆ.23: ಸಾಹಿತ್ಯ ವಿಮರ್ಶೆ ಎಂಬುದು ಇಂದು ಅಳಿವಿನಂಚಿ ನಲ್ಲಿದೆ. ವಿಮರ್ಶೆಗೆ ಸರಿಯಾದ ಅವಕಾಶ ಹಾಗೂ ವೇದಿಕೆ ದೊರೆಯದಿ ರುವುದೇ ಇದಕ್ಕೆ ಕಾರಣ ಎಂದು ವಿಮರ್ಶಕ, ಕಾದಂಬರಿಕಾರ, ಸಾಹಿತಿ ಡಾ. ಬಿ.ಜನಾರ್ದನ ಭಟ್ ಅಭಿಪ್ರಾಯ ಪಟ್ಟಿದ್ದಾರೆ.

ಎಂಜಿಎಂ ಕಾಲೇಜು ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ವತಿಯಿಂದ ನೀಡಲಾಗುವ ವಿ.ಎಂ.ಇನಾಂದಾರ್ ವಿಮರ್ಶಾ ಪ್ರಶಸ್ತಿ ಯನ್ನು ತನ್ನ ‘ನಾಲ್ಕು ಪ್ರಸ್ತಾವನೆಗಳು; ಕರಾವಳಿ ಸಾಹಿತ್ಯ ಕಥನ’ ಕೃತಿಗೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

‘ವಿಮರ್ಶೆ ಎಂಬುದು ಅಳಿವಿನಂಚಿಲ್ಲಿರುವ ಸಾಹಿತ್ಯ ಪ್ರಬೇಧ’ ಎಂಬ ವಿಮರ್ಶಕ ಓ.ಎಲ್.ನಾಗಭೂಷಣ್ ಅವರ ಅಭಿಪ್ರಾಯ ಸರಿಯಾಗಿದೆ. ವಿಮರ್ಶೆ ಇಂದು ಮುಂಚೂಣಿಯಲ್ಲಿ ಕಾಣಿಸುತ್ತಿಲ್ಲ. ಇಂದು ಯಾರೂ ಸಾಹಿತ್ಯವನ್ನು ನೇರವಾಗಿ ವಿಮರ್ಶೆ ಮಾಡುತ್ತಿಲ್ಲ ಎಂದರು.

ಸಾಮಾಜಿಕ ಜಾಲತಾಣ ಎಂಬುದು ಇಂದು ಹೊಲಸುಗೆಟ್ಟು ಹೋಗಿದೆ. ಟ್ರೋಲಿಂಗ್ ಅಸಹ್ಯ ಮಟ್ಟದಲ್ಲಿದೆ. ಜಾಲತಾಣಗಳಲ್ಲಿ ಬರೆಯುವವರು ರಾಜಕೀಯ ಹಾಗೂ ಸಮಾಜ ಶಾಸ್ತ್ರದ ಕುರಿತು ಮಾತನಾಡುತ್ತಾರೆಯೇ ವಿನ:ಹ ಸಾಹಿತ್ಯ, ವಿಮರ್ಶೆಯ ಬಗ್ಗೆ ಯಾರೂ ಬರೆಯುತ್ತಿಲ್ಲ ಎಂದರು.

ವಿಮರ್ಶಕರು ಹೊಸ ಬರವಣಿಗೆಯನ್ನು ಗಮನಿಸುತ್ತಿಲ್ಲ ಎಂಬುದು ಇನ್ನೊಂದು ಟೀಕೆ. ವಿಮರ್ಶೆಗೆ ಅವಕಾಶ ಬೇಕು, ವೇದಿಕೆ ಬೇಕು. ಈ ನಿಟ್ಟಿನಲ್ಲಿ ಅಕಾಡೆಮಿ ಹಾಗೂ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಾಹಿತ್ಯ ವಿಮರ್ಶೆ ಎಂಬ ಪ್ರಬೇಧವನ್ನು ಉಳಿಸಬೇಕು ಎಂದು ಡಾ.ಭಟ್ ಮನವಿ ಮಾಡಿದರು.

ಅಕಾಡೆಮಿ ಹಾಗೂ ಸಾಹಿತ್ಯ ಪರಿಷತ್‌ಗಳು ಇಂದು ಪ್ರಶಸ್ತಿ ವಿತರಣೆಗೆಂದು ಕೋಟ್ಯಂತರ ರೂ.ಗಳನ್ನು ವ್ಯಯಿಸುತ್ತಿವೆ. ಇದಕ್ಕೆ ಬದಲು ವಿಮರ್ಶೆಗೆ ಆದ್ಯತೆ ನೀಡಿ, ಒಂದೊಂದು ಪ್ರಕಾರದ ವಿಮರ್ಶೆಗಳನ್ನು ಬರೆಸಿದರೆ ಅದರಿಂದ ಈ ಪ್ರಬೇಧ ಉಳಿಯಲು ಸಾಧ್ಯವಾಗಬಹುದು ಎಂದರು.

ಇದರೊಂದಿಗೆ ನಡೆದ ಮುದ್ದಣ ಸಾಹಿತ್ಯೋತ್ಸವದಲ್ಲಿ ಮುದ್ದಣನ ಕುರಿತು ಮಾತನಾಡಿದ ಲೇಖಕ ಹಾಗೂ ಚಿಂತಕ ಡಾ.ಎಂ.ಪ್ರಭಾಕರ ಜೋಶಿ, ಮುದ್ದಣ ಸಣ್ಣ ಪ್ರಾಯದಲ್ಲೇ ನಿಧನರಾದರೂ, ಆ ಬಳಿಕ ಅವರಿಗೆ ಸಾಹಿತ್ಯ ಲೋಕದಲ್ಲಿ ಸಿಗಬೇಕಾದ ಎಲ್ಲಾ ಮಾನ್ಯತೆ ಹಾಗೂ ಗೌರವಗಳು ಕನ್ನಡದಲ್ಲಿ ದೊರಕಿವೆ ಎಂದರು. ಆ ಬಳಿಕ ಅವರಿಗೆ ಸಾಹಿತ್ಯ ಲೋಕದಲ್ಲಿ ಸಿಗಬೇಕಾದ ಎಲ್ಲಾ ಮಾನ್ಯತೆ ಹಾಗೂ ಗೌರವಗಳು ಕನ್ನಡದಲ್ಲಿ ದೊರಕಿವೆ ಎಂದರು. ಯಕ್ಷಗಾನ ಕವಿಯಾಗಿ ಮುದ್ದಣ ಕ್ರಾಂತಿಕಾರಿ. ನೂತನ ಪ್ರಸಂಗದ ಪರಂಪರೆ ಯನ್ನು ಪ್ರಾರಂಭಿಸಿದ್ದೆ ಮುದ್ದಣ. ಆತನ ‘ರತ್ನಾವರಿ ಕಲ್ಯಾಣ’ ಹಾಗೂ ‘ಕುಮಾರ ವಿಜಯ’ ಈ ಸಾಲಿಗೆ ಸೇರುತ್ತದೆ. ಅದೇ ರೀತಿ ‘ಅದ್ಭುತ ರಾಮಾಯಣ’ ಹಾಗೂ ‘ರಾಮಾಶ್ವಮೇಧ’ಗಳ ಮೂಲಕ ಕಾದಂಬರಿಯ ಅಂಧವನ್ನು ಮಹಾಕಾವ್ಯಗಳ ಮೂಲಕ ನೀಡಿದ್ದಾನೆ ಎಂದು ಡಾ.ಜೋಶಿ ನುಡಿದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಜಿ.ವಿಜಯ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಮಾಲತಿದೇವಿ ಉಪಸ್ಥಿತರಿದ್ದರು.

ಎಂಜಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪುತ್ತಿ ವಸಂತ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಪ್ರಶಸ್ತಿ ಪುರಸ್ಕೃತರು ಹಾಗೂ ಕೃತಿ ಪರಿಚಯ ಮಾಡಿದರು.

ಉಪನ್ಯಾಸಕಿ ಶೀಲಾ ಅತಿಥಿಗಳನ್ನು ಪರಿಚಯಿಸಿ ವಂದಿಸಿದರೆ, ಶಮಂತ್ ಕುಮಾರ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಂದ ‘ಮಾಯಾಪುರಿ’ ಯಕ್ಷಗಾನ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X