Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ...

ಅಸ್ಸಾಂ ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ 93ಕ್ಕೆ ಏರಿಕೆ; ತನಿಖೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ23 Feb 2019 10:18 PM IST
share
ಅಸ್ಸಾಂ ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ 93ಕ್ಕೆ ಏರಿಕೆ; ತನಿಖೆಗೆ ಆದೇಶ

ಗುವಾಹತಿ, ಫೆ. 23: ಅಸ್ಸಾಂನ ಗೋಲಾಘಾಟ್ ಹಾಗೂ ಜೊರ್ಹಾತ್ ಜಿಲ್ಲೆಗಳಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ. ಗೋಲಾಘಾಟ್ ಜಿಲ್ಲೆಯೊಂದರಲ್ಲೇ 39 ಮಂದಿ ಮೃತಪಟ್ಟಿದ್ದಾರೆ ಎಂದು ಅಸ್ಸಾಂನ ಆರೋಗ್ಯ ಇಲಾಖೆ ತಿಳಿಸಿದೆ.

ಕಳ್ಳಭಟ್ಟಿ ಸೇವನೆಯಿಂದ ಗಂಭೀರವಾಗಿರುವ ಕನಿಷ್ಠ 200 ಮಂದಿಯನ್ನು ಜೊರ್ಹಾತ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಗೋಲಾಘಾಟ್ ಸಿವಿಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಉತ್ತರಭಾರತದಲ್ಲಿ ಕಳ್ಳಭಟ್ಟಿ ಸೇವಿಸಿ 100ಕ್ಕೂ ಅಧಿಕ ಜನರು ಮೃತಪಟ್ಟ ಎರಡು ವಾರಗಳ ಒಳಗೆ ಈ ಘಟನೆ ನಡೆದಿದೆ.

ಸಾಲ್ಮರಾ ಚಹಾ ತೋಟದ ಕಾರ್ಮಿಕರು ಗುರುವಾರ ಸಂಜೆ ಕಳ್ಳಭಟ್ಟಿ ಸೇವಿಸಿದರು. ಕೂಡಲೇ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟರು. ಮುಂದಿನ 12 ಗಂಟೆಗಳಲ್ಲಿ 8 ಮಂದಿ ಮೃತಪಟ್ಟರು. ಈಗ ಒಟ್ಟು ಮೃತಪಟ್ಟವರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

 ಚಹಾತೋಟದ ಸಮೀಪದ ಜುಗಿಬಾರಿ ಪ್ರದೇಶದಲ್ಲಿರುವ ಕಳ್ಳಭಟ್ಟಿ ತಯಾರಿಸುವ ಘಟಕದ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಇಂದುಕಲ್ಪ ಬೋರ್ಡೋಲೋಯಿ ಹಾಗೂ ದೇಬಾ ಬೋರಾ ಎಂದು ಗುರುತಿಸಲಾಗಿದೆ. ಕಳ್ಳಭಟ್ಟಿ ದಂಧೆಯಲ್ಲಿ ಪಾಲ್ಗೊಂಡ ಇತರ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

‘‘ನಾವು ಈಗಾಗಲೇ ಇಬ್ಬರನ್ನು ಬಂಧಿಸಿದ್ದೇವೆ. ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದೇವೆ.’’ ಎಂದು ಪೊಲೀಸ್ ಉಪ ಅಧೀಕ್ಷಕ ಪಾರ್ಥಾ ಪ್ರತೀಮ್ ಸೈಕಿಯಾ ಅವರು ತಿಳಿಸಿದ್ದಾರೆ.

 ಈ ಪ್ರದೇಶದಲ್ಲಿ ಒಂದು ಗ್ಲಾಸ್ ಸಾರಾಯಿಗೆ 10 ರೂಪಾಯಿಯಿಂದ 20 ರೂಪಾಯಿ ವಿಧಿಸಲಾಗುತ್ತಿದೆ. ಈ ಕಳ್ಳಭಟ್ಟಿ ಸೇವನೆಯಿಂದ ಕಳ್ಳಭಟ್ಟಿ ಮಾರಾಟ ಮಾಡುತ್ತಿದ್ದ ಸಂಜು ಒರಾಂಗ್ ಹಾಗೂ ಅವರ ತಾಯಿ ದ್ರುಪದಿ ಒರಾಂಗ್ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆಗೆ ಅಸ್ಸಾಂನ ಅಬಕಾರಿ ಸಚಿವ ಪರಿಮಳ್ ಶುಕ್ಲಬೈದ್ಯ ಅವರು ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಲ್ಮಾರ ಪ್ರದೇಶದ ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

‘‘ನಾವು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ.’’ ಎಂದು ಗೋಲಾಘಾಟ್ ಉಪ ಆಯುಕ್ತ ಧಿರೇನ್ ಹಝಾರಿಕಾ ತಿಳಿಸಿದ್ದಾರೆ. ಈ ನಡುವೆ ಕಳ್ಳಭಟ್ಟಿ ತಯಾರಿ ಬಗ್ಗೆ ಪರಿಶೀಲನೆ ನಡೆಸದ ರಾಜ್ಯ ಅಬಕಾರಿ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿರುವ ಸಾರಾಯಿ ನಿಷೇಧ ಹೋರಾಟ ಸಮಿತಿ ಅಧ್ಯಕ್ಷ ಪ್ರಬಿನ್ ದಾಸ್ ಮೇಲೆ ಬಿಜೆಪಿ ಕಾರ್ಯಕರ್ತರು ಗೋಲಾಘಾಟ್‌ನಲ್ಲಿ ಹಲ್ಲೆ ನಡೆಸಿದ್ದಾರೆ.

ಇದೆಲ್ಲ ನಡೆದಿರುವುದು ಅಬಕಾರಿ ಇಲಾಖೆ ಹಾಗೂ ಕಳ್ಳಭಟ್ಟಿ ತಯಾರಿಸುವವರ ನಡುವಿನ ನಂಟಿನಿಂದ ಎಂದು ದಾಸ್ ಹೇಳಿದ್ದರು.

ಇನ್ನೊಂದೆಡೆ ಅಸ್ಸಾಂ ಗಣ ಪರಿಷದ್‌ನ ಅಧ್ಯಕ್ಷರು, ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಾಕಷ್ಟು ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X