Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಈಶಾನ್ಯ ರಾಜ್ಯಗಳು ಸಿನೆಮಾ...

ಈಶಾನ್ಯ ರಾಜ್ಯಗಳು ಸಿನೆಮಾ ಚಿತ್ರೀಕರಣಕ್ಕೆ ಸೂಕ್ತ ಸ್ಥಳ: ನಟಿ ಸುಲಕ್ಯಾನಾ ಬರುಹಾ

ವಾರ್ತಾಭಾರತಿವಾರ್ತಾಭಾರತಿ23 Feb 2019 11:12 PM IST
share

ಬೆಂಗಳೂರು, ಫೆ.23: ಸಿನೆಮಾಗಳ ಚಿತ್ರೀಕರಣಕ್ಕೆ ಈಶಾನ್ಯ ರಾಜ್ಯಗಳ ಪರಿಸರ ಸೂಕ್ತವಾಗಿದೆ. ಆದರೆ, ಮಾಧ್ಯಮಗಳು ಈಶಾನ್ಯ ರಾಜ್ಯಗಳ ಕುರಿತು ಜನರಲ್ಲಿ ಇಲ್ಲಸಲ್ಲದ ಭೀತಿ ಉಂಟು ಮಾಡುತ್ತಿವೆ ಎಂದು ಸಿನೆಮಾ ನಟಿ ಸುಲಕ್ಯಾನಾ ಬರುಹಾ ವಿಷಾದಿಸಿದರು.

ಶನಿವಾರ ನಗರದ ಒರಾಯನ್ ಮಾಲ್‌ನಲ್ಲಿ ನಡೆಯುತ್ತಿರುವ 11ನೆ ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವದಲ್ಲಿ ಆಯೋಜಿಸಿದ್ದ ಸಂವಾದಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶಾನ್ಯ ರಾಜ್ಯಗಳಲ್ಲಿ ಆತಂಕವಾದ ಹೆಚ್ಚಾಗಿದೆ. ಯಾವಾಗಲೂ ಭಯಭೀತ ವಾತಾವರಣವಿದೆ ಎಂಬ ಸುಳ್ಳು ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಹಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಈಶಾನ್ಯ ರಾಜ್ಯಗಳಲ್ಲಿ ಹಚ್ಚ ಹಸುರಿನ ಸ್ವಚ್ಛಂದ ವಾತಾವರಣವಿದೆ. ಬೆಟ್ಟ ಗುಡ್ಡಗಳಿಂದ ಆವೃತವಾದ ಈ ಪ್ರದೇಶವು ಹಾಗೂ ಇಲ್ಲಿನ ವೇಷ-ಭೂಷಣ ಸಿನೆಮಾ ಚಿತ್ರೀಕರಣಕ್ಕೆ ಸೂಕ್ತವಾಗಿದೆ. ಆದರೆ, ಈಶಾನ್ಯ ರಾಜ್ಯಗಳ ಕುರಿತು ಇತರೆ ಭಾಷೆಗಳಲ್ಲಿ ತಯಾರಾಗುವ ಸಿನೆಮಾಗಳಲ್ಲಿ ಕೇವಲ ಉಗ್ರರು, ಪೊಲೀಸರು, ಬಾಂಬು ಇವುಗಳನ್ನಷ್ಟೆ ತೋರಿಸಲಾಗುತ್ತಿದೆ. ಇದು ಬದಲಾಗಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಹಿಂದಿ ಹೇರಿಕೆ: ಈಶಾನ್ಯ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಹೆಚ್ಚಾಗುತ್ತಿದೆ. ಇದರಿಂದ ಸಿನೆಮಾ ಕ್ಷೇತ್ರಗಳ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದೆ. ಈಶಾನ್ಯ ರಾಜ್ಯಗಳಲ್ಲಿ ಮಣಿಪುರ, ಮಂಗೋಲಿಯಾ ಸೇರಿದಂತೆ ಹಲವಾರು ಭಾಷೆಗಳ ವೈವಿಧ್ಯವಿದೆ. ಇವು ಮುಖ್ಯಧಾರೆಗೆ ಬರಬೇಕಾದರೆ ಹಲವಾರು ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಅವರು ಹೇಳಿದರು.

ಬಿಹಾರಿ ಸಿನೆಮಾ ನಿರ್ದೇಶಕ ನಾರಾಯಣ ಸಿಂಗ್ ಮಾತನಾಡಿ, ಬಿಹಾರದಲ್ಲಿ ಮುಶಾಹಾರ್ ಎಂಬ ಅಸ್ಪಶ್ಯ ಜಾತಿಯಿದೆ. ಇದು ಬಿಹಾರದಲ್ಲಿ ಶೇ.6ರಷ್ಟು ಸಂಖ್ಯೆಯನ್ನು ಹೊಂದಿದೆ. ಇಂದಿಗೂ ಶೇ.80ರಷ್ಟು ಅನಕ್ಷರಸ್ಥರಾಗಿಯೆ ಉಳಿದುಕೊಂಡಿದ್ದಾರೆ. ಇವತ್ತಿನ ಆಧುನಿಕ, ತಂತ್ರಜ್ಞಾನ ಯುಗದ ಯಾವುದೆ ಸೌಕರ್ಯಗಳು ಇವರಿಗೆ ತಲುಪಿಲ್ಲ. ಹೀಗಾಗಿ ಇವರ ಕುರಿತು ಭೋರ್ ಎಂಬ ಸಿನೆಮಾವನ್ನು ನಿರ್ದೇಶಿಸಿದ್ದೇನೆ ಎಂದರು.

ಮುಶಾಹಾರ್ ಸಮುದಾಯದ ಕುರಿತು ಸಿನೆಮಾ ತಯಾರಿಸುವುದಷ್ಟೆ ನಮ್ಮ ಕೆಲಸವಲ್ಲ. ಆ ಸಿನೆಮಾವನ್ನು ಜನಪ್ರತಿನಿಧಿಗಳು ಹಾಗೂ ಆಡಳಿತಾಧಿಕಾರಿಗಳು ವೀಕ್ಷಿಸಬೇಕು. ಆ ಮೂಲಕ ಸಮುದಾಯದ ಬೆಳವಣಿಗೆಗೆ ಸಹಕಾರಿಯಾಗಬೇಕೆಂಬುದು ನನ್ನ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಈ ವೇಳೆ ಸಿನೆಮೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಉಪಸ್ಥಿತರಿದ್ದರು.

ಪಾಕ್ ಕಲಾವಿದರಿಗೆ ಬಹಿಷ್ಕಾರ ಅನಿವಾರ್ಯ

ಕಲೆಗಳಿಗೆ ಯಾವುದೇ ದೇಶ, ಭಾಷೆಯ ಗಡಿಯಿಲ್ಲ. ಆದರೂ ದೇಶದ ಭದ್ರತೆಯ ಹಿತದೃಷ್ಟಿಯಿಂದ ಪಾಕಿಸ್ತಾನದ ಕಲಾವಿದರಿಗೆ ಬಹಿಷ್ಕಾರ ಹೇರುವುದು ಅನಿವಾರ್ಯ. ಕಲಾವಿದರಿಂದ ದೇಶಕ್ಕೆ ಯಾವುದೇ ಹಾನಿಯಾಗದಿದ್ದರೂ ಪಾಕಿಸ್ತಾನ ನಡೆಸುತ್ತಿರುವ ದಾಳಿಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲೇಬೇಕಿದೆ. ಹೀಗಾಗಿ ಪಾಕ್ ಕಲಾವಿದರನ್ನು ಸಂಪೂರ್ಣವಾಗಿ ಭಾರತಿಯ ಚಿತ್ರಗಳಲ್ಲಿ ಬಹಿಷ್ಕರಿಸುವ ಮೂಲಕ ಉಗ್ರರ ದಾಳಿ ಖಂಡಿಸಲಿದ್ದೇವೆ. ನಮಗೆ ದೇಶ ಮೊದಲು. ಆಮೇಲೆ ಕಲೆ ಹಾಗೂ ಕಲಾವಿದರು.

-ರಾಹುಲ್ ರವೈಲ್ ಬಾಲಿವುಡ್ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X