Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನನ್ನ ಸಾವಿಗೆ ಮಮತಾ ಬ್ಯಾನರ್ಜಿಯವರೇ...

‘ನನ್ನ ಸಾವಿಗೆ ಮಮತಾ ಬ್ಯಾನರ್ಜಿಯವರೇ ಕಾರಣ’

ನಿವೃತ್ತ ಐಪಿಎಸ್ ಅಧಿಕಾರಿಯ ಆತ್ಮಹತ್ಯಾ ಪತ್ರ

ವಾರ್ತಾಭಾರತಿವಾರ್ತಾಭಾರತಿ23 Feb 2019 11:32 PM IST
share
‘ನನ್ನ ಸಾವಿಗೆ ಮಮತಾ ಬ್ಯಾನರ್ಜಿಯವರೇ ಕಾರಣ’

ಕೋಲ್ಕತಾ,ಫೆ.23: ಕಳೆದ ಮಂಗಳವಾರ ಇಲ್ಲಿಯ ತನ್ನ ನಿವಾಸದಲ್ಲಿ ಮಣಿಗಂಟನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಗೌರವ ದತ್ ಅವರು ತನ್ನ ಸಾವಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೇ ಕಾರಣ ಎಂದು ಆತ್ಮಹತ್ಯಾ ಪತ್ರದಲ್ಲಿ ಬರೆದಿಟ್ಟಿದ್ದಾರೆ ಎಂದು  ವರದಿಯಾಗಿದೆ.

1986ರ ತಂಡದ ಐಪಿಎಸ್ ಅಧಿಕಾರಿಯಾಗಿದ್ದ ದತ್ ಕಳೆದ ವರ್ಷ ಸ್ವಯಂ ನಿವೃತ್ತಿ ಪಡೆದಿದ್ದರು. ಅವರ ತಂದೆ ಗೋಪಾಲ ದತ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಭದ್ರತಾ ಅಧಿಕಾರಿಯಾಗಿದ್ದರು.

ಆತ್ಮಹತ್ಯೆಗೆ ಪ್ರಚೋದನೆಯ ಮೂಲಕ ಮುಖ್ಯಮಂತ್ರಿಗಳೇ ನೇರವಾಗಿ ತನ್ನ ಸಾವಿಗೆ ಹೊಣೆಗಾರರಾಗಿದ್ದಾರೆ ಎಂದು ದತ್ ಪತ್ರದಲ್ಲಿ ಬರೆದಿದ್ದಾರೆ.

 ಮಮತಾ ತನಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿರುವ ಅವರು, ತನ್ನ ವಿರುದ್ಧ ವಿಚಾರಣೆ ಬಾಕಿಯಿರುವ ಎರಡು ಪ್ರಕರಣಗಳನ್ನು ಮುಚ್ಚಲು ಮುಖ್ಯಮಂತ್ರಿ ನಿರಾಕರಿಸುತ್ತಿದ್ದಾರೆ. ಒಂದು ಪ್ರಕರಣದ ಕಡತವನ್ನು ಸರಕಾರವು ಉದ್ದೇಶಪೂರ್ವಕವಾಗಿ ಕಳೆದುಹಾಕಿದೆ. ಇನ್ನೊಂದು ಪ್ರಕರಣದಲ್ಲಿ ತನ್ನ ವಿರುದ್ಧದ ಭ್ರಷ್ಟಾಚಾರದ ಆರೋಪವನ್ನು ದೃಢಪಡಿಸಲು ಸಾಧ್ಯವಾಗಿಲ್ಲ. ಸ್ವತಃ ಡಿಜಿಯವರೇ ಕೋರಿಕೊಂಡರೂ ಪ್ರಕರಣಗಳನ್ನು ಮುಚ್ಚಲು ಮುಖ್ಯಮಂತ್ರಿಗಳು ನಿರಾಕರಿಸಿದ್ದಾರೆ ಎಂದಿದ್ದಾರೆ.

ಮಮತಾ 10 ವರ್ಷಗಳ ಕಾಲ ತನ್ನನ್ನು ಬಲಿಪಶುವಾಗಿಸಿದ್ದರು ಮತ್ತು ತನ್ನ ವಿರುದ್ಧ ಪ್ರತೀಕಾರದ ಏಕಮಾತ್ರ ಉದ್ದೇಶದಿಂದ ತನ್ನ ನೈತಿಕ ಸ್ಥೈರ್ಯವನ್ನು ಕುಂದಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಿದ್ದರು. ಅವರ ಪ್ರತೀಕಾರಕ್ಕೆ ಕಾರಣ ಅವರಿಗೇ ಗೊತ್ತು ಎಂದಿರುವ ದತ್,ತಾನು ಪ್ರಾಮಾಣಿಕವಾಗಿ ದುಡಿದಿದ್ದ ಉಳಿತಾಯದ ಹಣವನ್ನೂ ಅವರು ತಡೆಹಿಡಿದಿದ್ದಾರೆ. ಅವರ ದ್ವೇಷಕ್ಕೇ ಸರಿಸಾಟಿ ಯಾರೂ ಇಲ್ಲ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ತಾನು ಸತ್ತ ಮೇಲೆ ಸರಕಾರವು ತನ್ನ ಉಳಿತಾಯದ ಹಣವನ್ನು ತನ್ನ ಕುಟುಂಬಕ್ಕೆ ಬಿಡುಗಡೆ ಮಾಡಲೇಬೇಕಾಗುತ್ತದೆ ಎಂದಿದ್ದಾರೆ.

ಬಂಗಾಳದಲ್ಲಿಯ ಪ್ರಾಮಾಣಿಕ ಅಧಿಕಾರಿಗಳ ಸಮಸ್ಯೆಗಳನ್ನು ಮುಖ್ಯವಾಗಿ ಬಿಂಬಿಸಲು ತಾನು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇನೆ. ಗೌರವದೊಂದಿಗೆ ಬದುಕಲು ಸಾಧ್ಯವಿಲ್ಲವಾದರೆ ಗೌರವದಿಂದ ಸಾಯುವುದೇ ಒಳ್ಳೆಯದು ಎಂದು ದತ್ ಪತ್ರದಲ್ಲಿ ಬರೆದಿದ್ದಾರೆ.

ಮಮತಾ ಐಪಿಎಸ್ ಅಧಿಕಾರಿಗಳನ್ನು ಬಳಸಿ ಎಸೆಯುವ ಅತ್ಯಂತ ಅಮಾನವೀಯ ಗುಣವನ್ನು ಹೊಂದಿದ್ದಾರೆ. ಅವರಿಗೆ ಬೇಕಾದವರು ಮಾತ್ರ ಅರಮನೆಯಂತಹ ಬಂಗಲೆಗಳು,ಐಷಾರಾಮಿ ವಾಹನಗಳನ್ನು ಪಡೆಯುತ್ತಾರೆ ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X