Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಮಿನಿ ವಿಧಾನಸೌಧ...

ಮೂಡುಬಿದಿರೆ: ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು- ಯು.ಟಿ.ಖಾದರ್

ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ23 Feb 2019 11:45 PM IST
share
ಮೂಡುಬಿದಿರೆ: ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು- ಯು.ಟಿ.ಖಾದರ್

ಮೂಡುಬಿದಿರೆ, ಫೆ. 23:  ಮಾ .1ರಂದು ಮೂಡುಬಿದಿರೆ ತಾಲೂಕು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಅವರಿಂದ ಉದ್ಘಾಟನೆಗೊಳ್ಳಲಿದ್ದು  ಮಿನಿ ವಿಧಾನಸೌಧ ನಿರ್ಮಾಣಕ್ಕೆ ರೂ. 10 ಕೋಟಿ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದರು.

ಅವರು ಶನಿವಾರ ಸಂಜೆ ಮೂಡುಬಿದಿರೆ ಸಮಾಜಮಂದಿರದಲ್ಲಿ  ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ ಅಕ್ರಮ ಸಕ್ರಮದಲ್ಲಿ  ಬಡವರು ಹಲವು ವರ್ಷಗಳಿಂದ ಹೊಂದಿರುವ ಜಾಗದಲ್ಲಿ  ಯಾವುದೇ ಕಾರಣಕ್ಕೂ ಕಡಿತ ಮಾಡಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕೆಲವೆಡೆ ಭ್ರಷ್ಟಾಚಾರ ನಡೆಯುತ್ತಿದೆ, ಉಳ್ಳವರ ಅಕ್ರಮ ಸಕ್ರಮದ ಬಗ್ಗೆ ಯಾವುದೇ ಕ್ರಮ ಜರಗಿಸದ ಅಧಿಕಾರಿಗಳು ಬಡವರಿಗೆ ತೊಂದರೆ ಕೊಡುತ್ತಿದ್ದಾರೆ ಎಂಬ ದೂರಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ  ಮಾಜಿ ಸಚಿವ ಕೆ. ಅಭಯಚಂದ್ರ ಅವರೂ ದನಿಗೂಡಿಸಿ `ಹಾಗೆ ಮಾಡಬೇಡಿ' ಎಂದರು.  ಈ ಹಂತದಲ್ಲಿ  ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ತಾಂತ್ರಿಕ ಸಮಸ್ಯೆಗಳನ್ನು ಸಚಿವರ ಮುಂದಿಟ್ಟರು.

ಮೂಡುಬಿದಿರೆ ಕೊಡಂಗಲ್ಲಿನಲ್ಲಿ ಬಡವರಿಗಾಗಿ ನಿರ್ಮಾಣವಾಗಲಿರುವ ವಸತಿ ಸಮುಚ್ಛಯದಲ್ಲಿ ತಲಾ 368 ಚದರಡಿಯ ಅವಕಾಶ ಮಾತ್ರ ಇದೆ; ಇದನ್ನು ಕನಿಷ್ಟ 600 ಅಡಿಗೇರಿಸಬೇಕು ಎಂದು ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪಿ.ಕೆ. ಥಾಮಸ್ ವಿನಂತಿಸಿದಾಗ, ಸಚಿವರು ` ಬಡವರಿಗೆ ಅಷ್ಟು ಸಾಕು, ಅವರಿಗೆ ಮಾತ್ರ ಸಬ್ಸಿಡಿಯ ವ್ಯವಸ್ಥೆ ಇದೆ. ಆ ನಿಯಮ ಬದಲಾಯಿಸಲಾಗದು. ನೀವು ದೊಡ್ಡದು ಕಟ್ಟಿ ಇಡ್ತೀರಿ ಎಂದಾದರೆ ಅದನ್ನು ಪಡೆಯುವವರಿಗೆ ಸಬ್ಸಿಡಿಗೆ ಅವಕಾಶ ಇಲ್ಲ ' ಎಂದು ಸ್ಪಷ್ಟಪಡಿಸಿದರು.

ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ  ಉಳ್ಳವರ ಹಡಿಲು ಭೂಮಿಯನ್ನು  ಲೀಸ್‍ಗೆ ಪಡೆದು  ಕೃಷಿ ನಡೆಸುತ್ತ ಬಂದಿರುವ ಸಾಧಕ ಪುತ್ತಿಗೆ ಜನಾರ್ದನ ಗೌಡ ಅವರು ತೋಡಿನ ಮಧ್ಯೆ ಇರುವ ಪರಂಬೋಕು ಬಾವಿಯಿಂದ ನೀರು ಸೆಳೆಯುವುದಕ್ಕೆ  ಅಡ್ಡಿ ಪಡಿಸಲಾಗಿರುವ ಬಗ್ಗೆ  ಸಚಿವರ ಗಮನ ಸೆಳೆದಾಗ  ಈ ಬಗ್ಗೆ ತಹಶೀಲ್ದಾರರು ಸೂಕ್ತ ಕ್ರಮ ಜರಗಿಸಿ ಗೌಡ ಅವರಿಗೆ ನ್ಯಾಯ ಒದಗಿಸುವಂತೆ ಸೂಚಿಸಿದರು.

ಜಾತಿ -ಆದಾಯ ದೃಢ ಪತ್ರಗಳಿಗಾಗಿ ಅಟಲ್‍ಜೀ ಜನಸ್ನೇಹಿ ಅಥವಾ ಗ್ರಾಮಾಂತರದಲ್ಲಿ  ಬಾಪೂಜಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸಿ, ಬಳಿಕ ಪರಿಶೀಲನೆಗೆ ಆಯಾ ಗ್ರಾಮ ಕರಣಿಕರಿಗೆ ಕಳುಹಿಸಿ ಕೊಡಬೇಕು. ನೇರವಾಗಿ ಗ್ರಾಮಕರಣಿಕರಿಗೆ ಕೊಡುವ ಕ್ರಮ ನಿಲ್ಲಿಸದಿದ್ದರೆ ಜನರಿಗೆ ತೊಂದರೆ ಆಗುತ್ತದೆ ಎಂಬ ದೂರಿಗೆ ಸ್ಪಂದಿಸಿದ ಸಚಿವರು ತಹಶೀಲ್ದಾರರಿಗೆ ಸೂಚಿಸಿದರು.

ಉಚಿತ ವಿದ್ಯುತ್ ಸೌಲಭ್ಯದಿಂದಾಗಿ ಸ್ಪ್ರಿಂಕ್ಲರ್ ಬಳಸುವವರು ಬೇಕಾಬಿಟ್ಟಿಯಾಗಿ ನೀರು ಬಿಡುತ್ತಿರುವುದರಿಂದ ಅಂತರ್ಜಲಮಟ್ಟ ಕುಸಿಯುವ ಭೀತಿ ವ್ಯಕ್ತಪಡಿಸಿದ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ  ಪಿ. ಕೆ. ಥಾಮಸ್ ಅವರು `ಹನಿ ನೀರಾವರಿಗೇ ಹೆಚ್ಚು ಒತ್ತು ಕೊಡಬೇಕು' ಎಂದು ಆಗ್ರಹಿಸಿದರು ಹಾಗೂ ಈ ಬಗ್ಗೆ   ರೈತರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಾಗಿದೆ' ಎಂದು ವಿನಂತಿಸಿದರು. ಈ ಬಗ್ಗೆ  ಸಚಿವರು ಸೂಕ್ತ ಕ್ರಮ ಜರಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಜಿಎಸ್‍ಟಿ ಶೇ. 135 ಗುರಿ ಸಾಧನೆ:

ಮೂಡುಬಿದಿರೆ ತಾಲೂಕಿನಲ್ಲಿ   ಕಳೆದ ಜನವರಿ ಮುಕ್ತಾಯಕ್ಕೆ ರೂ. 20.5 ಕೋಟಿಯಷ್ಟು  ಮೊತ್ತದ ಜಿಎಸ್‍ಟಿ ಸಂಗ್ರಹವಾಗಿದ್ದು ಇದರಿಂದ 135 ಶೇ. ಗುರಿ ಸಾಧಿಸಿದಂತಾಗಿದೆ ಎಂದು ವಾಣಿಜ್ಯ ತೆರಿಗೆ ಅಧಿಕಾರಿಗಳು ತಿಳಿಸಿದರು. ಸರ್ಕಲ್ ಇನ್ಸ್‍ಫೆಕ್ಟರ್ ರಾಮಚಂದ್ರ ನಾಯಕ್ ಅವರು `ಮೂಡುಬಿದಿರೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ   ಕಮಿಷನರೇಟ್ ವ್ಯಾಪ್ತಿಯಲ್ಲಿ  ಮೊದಲ ಸ್ಥಾನದಲ್ಲಿದ್ದು  ಟ್ರಾಫಿಕ್ ಕ್ರೈಮ್ಸ್‍ನಲ್ಲಿ  ದ್ವಿತೀಯ ಸ್ಥಾನದಲ್ಲಿದೆ; ಇಲ್ಲಿಗೆ ಟ್ರಾಫಿಕ್ ಪೆÇಲೀಸ್ ಸ್ಟೇಶನ್ ಸ್ಥಾಪನೆಯ ಬಗ್ಗೆ  ಪ್ರಸ್ತಾವನೆ ಹೋಗಿದೆ, ಇನ್ನೂ  ಹಾಗೇ ಉಳಿದುಕೊಂಡಿದೆ' ಎಂದು ಸಚಿವರ ಗಮನ ಸೆಳೆದಾಗ, ಈ ಬಗ್ಗೆ  ಕೂಡಲೇ ಕ್ರಮ ಜರಗಿಸುವುದಾಗಿ ಖಾದರ್ ತಿಳಿಸಿದರು. 

ಪುರಸಭಾ ಮುಖ್ಯಾಧಿಕಾರಿ ಇಂದು,  ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ಕೆ. ಪಿ.ಸುಜಾತಾ, ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು , ಸ್ಥಾಯಿ ಸಮಿತಿ ಅಧ್ಯಕ್ಷೆ ರೀಟಾ ಕುಟಿನ್ಹಾ, ತಾ.ಪಂ.ಸದಸ್ಯರಾದ ಪ್ರಕಾಶ್ ಗೌಡ, ಪ್ರಶಾಂತ ಅಮೀನ್,  ಎಪಿಎಂಸಿ ಅಧ್ಯಕ್ಷ  ಪ್ರವೀಣ್ ಕುಮಾರ್ ಜೈನ್ ಮೊದಲಾದವರಿದ್ದರು.

ತಹಶೀಲ್ದಾರ್ ಸುದರ್ಶನ ಕೆ. ಸಹಿತ  ವಿವಿಧ ಇಲಾಖಾ„ಕಾರಿಗಳು ಪಾಲ್ಗೊಂಡಿದ್ದರು. ಉಪತಹಶೀಲ್ದಾರ್ ನಿತ್ಯಾನಂದ ದಾಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅನುಪಸ್ಥಿತಿ ಗಮನ ಸೆಳೆದರೆ ಮಾಜಿ ಸಚಿವ ಕೆ. ಅಭಯಚಂದ್ರ ವೇದಿಕೆಯಲ್ಲಿ ಸಚಿವರೊಂದಿಗೆ ಸಕ್ರಿಯರಾಗಿ ತೊಡಗಿಕೊಂಡದ್ದು ವಿಶೇಷವಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X