Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈಮಾನಿಕ ಪ್ರದರ್ಶನ ಮನರಂಜನೆಯಲ್ಲ, ದೇಶದ...

ವೈಮಾನಿಕ ಪ್ರದರ್ಶನ ಮನರಂಜನೆಯಲ್ಲ, ದೇಶದ ಶಕ್ತಿ ಪ್ರದರ್ಶನ: ರಾಜ್ಯಪಾಲ ವಜುಭಾಯಿ ವಾಲಾ

ವಾರ್ತಾಭಾರತಿವಾರ್ತಾಭಾರತಿ24 Feb 2019 8:17 PM IST
share
ವೈಮಾನಿಕ ಪ್ರದರ್ಶನ ಮನರಂಜನೆಯಲ್ಲ, ದೇಶದ ಶಕ್ತಿ ಪ್ರದರ್ಶನ: ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು, ಫೆ.24: ಕಳೆದ ನಾಲ್ಕು ದಿನಗಳಿಂದ ನಗರದ ಯಲಹಂಕ ವಾಯುನೆಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನ ದೇಶದ ಶಕ್ತಿ ಸಾಮರ್ಥ್ಯದ ಧ್ಯೋತಕವಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.

ವೈಮಾನಿಕ ಪ್ರದರ್ಶನದ ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಮಾನ, ಹೆಲಿಕಾಪ್ಟರ್‌ಗಳ ಪ್ರದರ್ಶನ ಕೇವಲ ಮನರಂಜನೆಯಲ್ಲ. ದೇಶದ ಶಕ್ತಿ ವಿಶ್ವಕ್ಕೆ ಪರಿಚಯ ಮಾಡುವ ಪ್ರದರ್ಶನವಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಬುದ್ದಿವಂತಿಕೆ ಇದೆ ಹಾಗೂ ತಂತ್ರಜ್ಞರು, ಒಳ್ಳೆಯ ವಿಜ್ಞಾನಿಗಳಿದ್ದಾರೆ. ಆದರೆ ಅವಕಾಶಗಳ ಕೊರತೆ ಇದೆ. ಸರಿಯಾದ ಅವಕಾಶ ಸಿಕ್ಕಿದ್ದರೆ ನಾವು ಯಾರಿಗೂ ಕಡಿಮೆ ಇಲ್ಲ ಎಂದು ವಾಲಾ ಅಭಿಪ್ರಾಯಪಟ್ಟರು.

ವಿಶ್ವದಲ್ಲಿ ಭಾರತವು ಯುವ ಭಾರತ ಎಂದು ಗುರುತಿಸಿಕೊಂಡಿದೆ. ಸುಖೋಯ್ ವಿಮಾನಕ್ಕೆ ಸಾಟಿಯಾಗುವ ತೇಜಸ್ ವಿಮಾನ ನಿರ್ಮಾಣ ಮಾಡಿರುವ ನಮ್ಮ ದೇಶ ಯಾವುದರಲ್ಲಿಯೂ ಕಡಿಮೆಯಿಲ್ಲ. ನಮ್ಮಲ್ಲಿ ಹಣಕಾಸಿನ ಕೊರತೆ ಇರಬಹುದು. ಆದರೆ, ಜಗತ್ತಿನಲ್ಲಿ ಶಕ್ತಿಶಾಲಿ ರಾಷ್ಟ್ರವಾಗಿದ್ದೇವೆ. ದೇಶದ ರಕ್ಷಣೆಗೆ ಎಲ್ಲರೂ ಬದ್ಧರಾಗಿ ಕೆಲಸ ಮಾಡಬೇಕು. ಅಗತ್ಯವಿದ್ದರೆ ಬಲಿದಾನಕ್ಕೂ ಸಿದ್ಧರಾಗಬೇಕು ಎಂದು ಅವರು ನುಡಿದರು.

ಜಗತ್ತಿನ ಅತ್ಯಂತ ಚಿಕ್ಕ ದೇಶವಾದ ಇಸ್ರೇಲ್ ತಂತ್ರಜ್ಞಾನ ಬಳಕೆಯಿಂದ ಉನ್ನತಿ ಸಾಧಿಸಿದೆ. ಭಾರತವೂ ಆ ದಿಕ್ಕಿನಲ್ಲಿ ಕಾರ್ಯ ಪ್ರವೃತ್ತವಾಗಬೇಕು. ಮುಂದಿನ ದಿನಗಳಲ್ಲಿ ಭಾರತದ ತಂತ್ರಜ್ಞರು ಎಂ-22 ವಿಮಾನವನ್ನು ನಿರ್ಮಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮಾತನಾಡಿ, ಬೆಂಗಳೂರು ದೇಶದ ಶಾಶ್ವತ ಏರೋ ಇಂಡಿಯಾ ಪ್ರದರ್ಶನದ ಸ್ಥಳ ಎಂದು ಘೋಷಣೆಯಾಗಬೇಕು. ಕಳೆದ 12 ಏರೋ ಇಂಡಿಯಾ ಪ್ರದರ್ಶನಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರಾಜ್ಯಪಾಲರು ಏರೋ ಇಂಡಿಯಾ ಪ್ರದರ್ಶನದ ಫೋಟೋಗ್ರಫಿ, ಇನ್ಸ್‌ಸ್ಟಾಗ್ರಾಂ ಮತ್ತಿತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು. ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತ್ ದಹಾಯ್, ವಾಯುಪಡೆಯ ತರಬೇತಿ ಮುಖ್ಯಸ್ಥ ಏರ್‌ಮಾರ್ಷಲ್ ಆರ್.ಕೆ.ಬಡೇರಿಯಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X