Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ್ಞಾನ ವಿಸ್ತರಣೆಗೆ ಗ್ರಂಥಾಲಯಗಳು...

ಜ್ಞಾನ ವಿಸ್ತರಣೆಗೆ ಗ್ರಂಥಾಲಯಗಳು ಸಹಕಾರಿ: ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ24 Feb 2019 8:19 PM IST
share
ಜ್ಞಾನ ವಿಸ್ತರಣೆಗೆ ಗ್ರಂಥಾಲಯಗಳು ಸಹಕಾರಿ: ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.24: ಬಸವನಗುಡಿಯ ಎಮ್.ಎನ್.ಕೃಷ್ಣರಾವ್ ಉದ್ಯಾನದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ನವೀಕೃತಗೊಂಡಿರುವ ಪಾರಂಪರಿಕ ಕಟ್ಟಡದಲ್ಲಿ ದಕ್ಷಿಣ ವಲಯ ನಗರ ಕೇಂದ್ರ ಗ್ರಂಥಾಲಯದ ‘ಸರ್.ಎಮ್.ಎನ್.ಕೃಷ್ಣರಾವ್ 37ನೇ ಶಾಖಾ ಗ್ರಂಥಾಲಯ’ದ ಲೋಕಾರ್ಪಣೆ ರವಿವಾರ ನೆರವೇರಿತು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ದಕ್ಷಿಣ ವಲಯ ನಗರ ಕೇಂದ್ರ ಗ್ರಂಥಾಲಯ ಎಮ್.ಎನ್.ಕೃಷ್ಣರಾವ್ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಖಾ ಗ್ರಂಥಾಲಯವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು, ಜ್ಞಾನ ವಿಸ್ತರಣೆಗೆ ಗ್ರಂಥಾಲಯಗಳು ಸಹಕಾರಿ ಎಂದು ಹೇಳಿದರು.

ಇದೇ ವೇಳೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಅವರು, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಪ್ರಮಾಣ ಪತ್ರ, ಬೃಹತ್ ಬೆಂಗಳೂರು ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಆಟೋ ಚಾಲಕರಿಗೆ ಕೀ ವಿತರಿಸಿದರು.

ನಂತರ ಮಾತನಾಡಿದ ಅವರು, ಇಲ್ಲಿನ ನಿವಾಸಿಗಳ ಹಲವು ದಿನಗಳ ಕನಸು ಇಂದು ನನಸಾಗಿದೆ. ಸಂಪೂರ್ಣವಾಗಿ ಪಾಳುಬಿದ್ದ ಕಟ್ಟಡಕ್ಕೆ ಹೊಸ ರೂಪ ನೀಡಿ ಗ್ರಂಥಾಲಯವನ್ನಾಗಿ ಮಾರ್ಪಾಡು ಮಾಡಲಾಗಿದೆ. ಉತ್ತಮ ಶೌಚಾಲಯ ವ್ಯವಸ್ಥೆಯೊಂದಿಗೆ ಸಾರ್ವಜನಿಕರ ಅನುಕೂಲಕ್ಕೆ ಅಗತ್ಯವಿರುವ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಕ್ಕಳು, ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರೂ ಇದರ ಉಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಶೆಟಲ್ ಬ್ಯಾಡ್ಮಿಂಟನ್ ಕೋರ್ಟ್ ಸಹ ನಿರ್ಮಿಸಲಾಗುವುದು ಎಂದು ಹೇಳಿದರು.

ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ವಾಹನ ನಿಲುಗಡೆ ಪ್ರದೇಶಗಳಲ್ಲಿ ಟೆಂಡರ್ ಕರೆದು ನಿರ್ವಹಣೆ ಮಾಡಲಾಗುತ್ತಿದೆ. ಕೆಲವೊಂದು ಕಡೆಗಳಲ್ಲಿ ಉತ್ತಮ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಯಾರೋ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವಂಥ ಪರಿಸ್ಥಿತಿ ಇದೆ. ಇಂತಹ ಕಡೆಗಳಲ್ಲಿ ಸೂಕ್ತ ಭದ್ರತೆಯೂ ಇಲ್ಲದಂತಾಗಿದೆ. ಹಾಗಾಗಿ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಟೆಂಡರ್ ಕರೆಯದಿರುವ ಪ್ರದೇಶಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಎಲ್ಲಾ ಪ್ರದೇಶಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್ ಎಸ್.ಹೊಸಮನಿ ಮಾತನಾಡಿ, ಮಕ್ಕಳು ಪಠ್ಯೇತರ ಚಟುವಟಿಕೆ ಜತೆಗೆ ತಮಗಿಷ್ಟವಾದ ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಗ್ರಂಥಾಲಯದಲ್ಲಿ ಮಕ್ಕಳು, ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗ ತೆರೆಯಲಾಗಿದೆ. ಜ್ಞಾನ ಭಂಡಾರದ ಪ್ರಯೋಜನವನ್ನು ಮಕ್ಕಳು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.

ಈ ವೇಳೆ ಪಾಲಿಕೆ ಸದಸ್ಯ ಉದಯ ಬಿ.ಗರುಡಾಚಾರ್, ನಗರ ಕೇಂದ್ರ ಗ್ರಂಥಾಲಯ ದಕ್ಷಿಣ ವಲಯ ಉಪ ನಿರ್ದೇಶಕಿ ಸರಸ್ವತಿ, ಬಿಬಿಎಂಪಿ ಜಂಟಿ ಆಯುಕ್ತ ವಿಶ್ವನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X