Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬರವಣಿಗೆಯು ಶೋಷಕ ಜಾತಿವಾದಿ ಶಕ್ತಿಗಳಲ್ಲಿ...

ಬರವಣಿಗೆಯು ಶೋಷಕ ಜಾತಿವಾದಿ ಶಕ್ತಿಗಳಲ್ಲಿ ಭೀತಿ ಹುಟ್ಟಿಸುತ್ತದೆ: ಕಾಂಚ ಐಲಯ್ಯ

ವಾರ್ತಾಭಾರತಿವಾರ್ತಾಭಾರತಿ24 Feb 2019 9:57 PM IST
share
ಬರವಣಿಗೆಯು ಶೋಷಕ ಜಾತಿವಾದಿ ಶಕ್ತಿಗಳಲ್ಲಿ ಭೀತಿ ಹುಟ್ಟಿಸುತ್ತದೆ: ಕಾಂಚ ಐಲಯ್ಯ

ಹೊಸದಿಲ್ಲಿ,ಫೆ.24: ಬರವಣಿಗೆಯು ಶೋಷಕ ಜಾತಿವಾದಿ ಶಕ್ತಿಗಳಲ್ಲಿ ಭೀತಿಯನ್ನು ಹುಟ್ಟಿಸುವ ಏಕೈಕ ಮಾಧ್ಯಮವಾಗಿದೆ ಮತ್ತು ಅದು ಶೋಷಿತ ದಲಿತ ಬಹುಜನರ ಸ್ಥಿತಿಗಳನ್ನು ಬದಲಿಸಬಲ್ಲುದು ಎನ್ನುವುದು ಸಾಮಾಜಿಕ ಹೋರಾಟಗಾರ ಕಾಂಚ ಐಲಯ್ಯ ಶೆಪರ್ಡ್ ಅವರ ನಂಬಿಕೆಯಾಗಿದೆ.

ಸೇಜ್ ಪಬ್ಲಿಕೇಷನ್ಸ್ ಪ್ರಕಟಿಸಿರುವ ತನ್ನ ಆತ್ಮಕತೆ ‘ಫ್ರಮ್ ಎ ಶೆಪರ್ಡ್ ಬಾಯ್ ಟು ಆ್ಯನ್ ಇಂಟಲೆಕ್ಚುವಲ್(ಕುರಿಗಾಹಿ ಬಾಲಕನಿಂದ ಬುದ್ಧಿಜೀವಿಯವರೆಗೆ)’ನಲ್ಲಿ ಈ ದಲಿತ ಲೇಖಕ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪುಸ್ತಕವು ಭಾರತದ ಹೆಚ್ಚಿನ ಜನರು ಶಿಕ್ಷಣ ಮತ್ತು ಘನತೆಗಾಗಿ ನಡೆಸುತ್ತಿರುವ ಹೋರಾಟಗಳ ಕುರಿತೂ ಚರ್ಚಿಸಿದೆ.

ಬ್ರಾಹ್ಮಣ-ಬನಿಯಾ ಜಾತಿಗಳ ಹಲವರು ತಮ್ಮ ಆತ್ಮಕಥೆಗಳಲ್ಲಿ ಇಂಗ್ಲೀಷ್ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ತಮ್ಮ ದೊಡ್ಡತನದ ಬಗ್ಗೆ ಬರೆದುಕೊಂಡಿದ್ದಾರೆ. ಆದರೆ ಕುರುಬ ಸಮುದಾಯದಲ್ಲಿ ಹುಟ್ಟಿ ಬೆಳೆದ ಒಬ್ಬನೇ ಒಬ್ಬ ವ್ಯಕ್ತಿ ಆತ್ಮಕಥೆಯನ್ನು ಬರೆದಿರುವುದನ್ನು ತಾನು ನೋಡಿಲ್ಲ ಎಂದಿರುವ ಐಲಯ್ಯ,ಬರವಣಿಗೆಯು ಶೋಷಿತ ದಲಿತ ಬಹುಜನರ ಸ್ಥಿತಿಗಳನ್ನು ಸುಧಾರಿಸಬಲ್ಲ ಏಕೈಕ ಮಾಧ್ಯಮವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಬಳಿಕ ತಾನು ಈ ಕೆಲಸವನ್ನು ಕೈಗೆತ್ತಿಕೊಂಡಿದ್ದು,ಪೀಳಿಗೆಯ ನಂತರ ಪೀಳಿಗೆಯಂತೆ ನಿರಂತರ ನೆಲೆಯಲ್ಲಿ ಈ ಬರವಣಿಗೆ ನಡೆಯಬೇಕಿದೆ ಎಂದಿದ್ದಾರೆ.

ಇಂತಹ ಬರವಣಿಗೆಯು ಶೋಷಕ ಜಾತಿವಾದಿ ಶಕ್ತಿಗಳಲ್ಲಿ ಭೀತಿಯನ್ನು ಹುಟ್ಟಿಸುತ್ತದೆ ಎನ್ನುವುದರಲ್ಲಿ ಶಂಕೆಯಿಲ್ಲ. ವರ್ಗ ಕೇಂದ್ರಿತ ಬದಲಾವಣೆಗಿಂತ ಜಾತಿ ಕೇಂದ್ರಿತ ಬದಲಾವಣೆಗೆ ಹೆಚ್ಚು ಪ್ರತಿರೋಧ ವ್ಯಕ್ತವಾಗುತ್ತದೆ ಎನ್ನುವುದು ತನ್ನ ಜೀವನದ ಅನುಭವವಾಗಿದೆ. ಜಾತಿ ಪ್ರಾಬಲ್ಯವು ಆ ಜಾತಿಗಳಲ್ಲಿ ಹುಟ್ಟಿದವರ ರಕ್ತದಲ್ಲಿ ಹರಿಯುತ್ತಿರುವುದು ಇದಕ್ಕೆ ಕಾರಣ. ಅದರಂತೆ ಜಾತಿ ಕೀಳರಿಮೆಯು ಶೋಷಿತ ಜಾತಿಗಳ ರಕ್ತದಲ್ಲಿ ಹರಿಯುತ್ತಿರುತ್ತದೆ. ವರ್ಗ ಕೀಳರಿಮೆಯನ್ನು ಸುಲಭವಾಗಿ ಮೀರಬಹುದು,ಆದರ ಜಾತಿ ಕೀಳರಿಮೆಯನ್ನಲ್ಲ. ಇದೇ ಕಾರಣದಿಂದ ಜಾತಿ ಸಂಘರ್ಷವು ವರ್ಗ ಸಂಘರ್ಷಕ್ಕಿಂತ ಹೆಚ್ಚು ಕಠಿಣವಾಗಿದೆ ಎಂದು ಅವರು ಹೇಳಿದ್ದಾರೆ.

ಐಲಯ್ಯ ಇತ್ತೀಚಿಗೆ ಮೌಲಾನಾ ಆಝಾದ್ ನ್ಯಾಷನಲ್ ಉರ್ದು ವಿವಿಯ ಸಾಮಾಜಿಕ ನೀತಿ ಕುರಿತ ಅಧ್ಯಯನ ಕೇಂದ್ರದ ನಿರ್ದೇಶಕ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಹಲವಾರು ಚಿಂತನಶೀಲ ಕೃತಿಗಳನ್ನು ಅವರು ರಚಿಸಿದ್ದಾರೆ.

ಐಲಯ್ಯ ಇತ್ತೀಚಿಗಷ್ಟೇ ಶೆಪರ್ಡ್ ಅನ್ನು ತನ್ನ ಹೆಸರಿಗೆ ಸೇರಿಸಿಕೊಂಡಿದ್ದಾರೆ. 2016,ಮೇ ತಿಂಗಳಲ್ಲಿ ಎರಡು ತೆಲುಗು ಭಾಷಿಕ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಬ್ರಾಹ್ಮಣ ಸಂಘಟನೆಗಳು ತನ್ನ ಮೇಲೆ ದಾಳಿ ನಡೆಸುವ ಬೆದರಿಕೆಯೊಡ್ಡಿದ ಬಳಿಕ ತಾನು ಈ ನಿರ್ಣಯ ತೆಗೆದುಕೊಂಡೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X