Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರವಾದದ ಮೂಲೋಚ್ಛಾಟನೆಗೆ ಸೇನೆಯಿಂದ...

ಉಗ್ರವಾದದ ಮೂಲೋಚ್ಛಾಟನೆಗೆ ಸೇನೆಯಿಂದ ಸ್ಫೂರ್ತಿ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ24 Feb 2019 10:50 PM IST
share
ಉಗ್ರವಾದದ ಮೂಲೋಚ್ಛಾಟನೆಗೆ ಸೇನೆಯಿಂದ ಸ್ಫೂರ್ತಿ: ಪ್ರಧಾನಿ ಮೋದಿ

   ಹೊಸದಿಲ್ಲಿ, ಫೆ.24: ಪುಲ್ವಾಮಾ ದಾಳಿಯ ಬಳಿಕ ಭಯೋತ್ಪಾದಕರು ಹಾಗೂ ಅವರಿಗೆ ನೆಲೆ ಒದಗಿಸುವವರನ್ನು ತೊಡೆದುಹಾಕಲು ಸೇನೆ ಕಟಿಬದ್ಧವಾಗಿದೆ . ಪುಲ್ವಾಮದಲ್ಲಿ ಉಗ್ರರ ದಾಳಿಗೆ ಬಲಿಯಾದ 40 ಯೋಧರ ಬಲಿದಾನವು ಉಗ್ರವಾದದ ಮೂಲವನ್ನೇ ಕಿತ್ತೊಸೆಯಲು ಸದಾ ನಮಗೆ ಪ್ರೇರಣೆ ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರೇಡಿಯೊದಲ್ಲಿ ಪ್ರಸಾರವಾದ ತಮ್ಮ 53ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ದೇಶದ ಜನತೆ ಭೀತಿವಾದದ ವಿರುದ್ಧದ ಹೋರಾಟದಲ್ಲಿ ಜಾತಿ, ಕೋಮು, ಧರ್ಮ- ಈ ಎಲ್ಲಾ ತಡೆಗಳನ್ನೂ ಮೀರಿ ಬೆಂಬಲ ನೀಡಿದ್ದಾರೆ ಎಂದರು. ಯೋಧರ ಹತ್ಯೆ ಸಂಚಿನ ರೂವಾರಿಗಳನ್ನು ಘಟನೆ ನಡೆದ 100 ಗಂಟೆಯೊಳಗೆ ಸೇನಾಪಡೆ ಹೊಡೆದುರುಳಿಸಿದೆ ಎಂದ ಮೋದಿ, ಪುಲ್ವಾಮ ದಾಳಿಯಲ್ಲಿ ಬಲಿಯಾದ ಸೈನಿಕರ ಕುಟುಂಬದ ಪ್ರತಿಕ್ರಿಯೆ ಸ್ಫೂರ್ತಿದಾಯಕವಾಗಿತ್ತು ಎಂದರು.

ಉಗ್ರರ ದಾಳಿಯಲ್ಲಿ ಮೃತಪಟ್ಟ ಯೋಧರ ಗೌರವಾರ್ಥ ನಿರ್ಮಿಸಲಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸುವುದಾಗಿ ತಿಳಿಸಿದ ಅವರು, ಇಂತಹ ಯುದ್ದ ಸ್ಮಾರಕಗಳನ್ನು ಇದುವರೆಗೆ ಯಾಕೆ ನಿರ್ಮಿಸಿಲ್ಲ ಎಂಬುದು ಅಚ್ಚರಿಯ ಮತ್ತು ನೋವಿನ ಪ್ರಶ್ನೆಯಾಗಿದೆ ಎಂದರು.

 ಇದೇ ಸಂದರ್ಭ ಅವರು 1900ರ ಮಾರ್ಚ್ 3ರಂದು ಬ್ರಿಟಿಷ್ ಪಡೆಗಳಿಂದ ಬಂಧಿಸಲ್ಪಟ್ಟಿದ್ದ ಆದಿವಾಸಿ ಮುಖಂಡ ಬಿರ್ಸ ಮುಂಡ, ಮಾರ್ಚ್ 3ರಂದು ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವ ಖ್ಯಾತ ಉದ್ಯಮಿ ಜಮ್‌ಸೇಟ್‌ಜಿ ಟಾಟಾ, ಫೆ.29ರಂದು ಜನಿಸಿರುವ ಮಾಜಿ ಪ್ರಧಾನಿ ದಿವಂಗತ ಮೊರಾರ್ಜಿ ದೇಸಾಯಿವರಿಗೆ ನುಡಿ ನಮನ ಸಲ್ಲಿಸಿದರು. ಸಂವಿಧಾನಕ್ಕೆ 44ನೇ ತಿದ್ದುಪಡಿ ತರುವ ಮೂಲಕ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಈ ದೇಶಕ್ಕೆ ಮತ್ತೊಮ್ಮೆ ತುರ್ತುಪರಿಸ್ಥಿತಿಯ ಕರಿಛಾಯೆ ಆವರಿಸದಂತೆ ಮಾಡಿದರು. ಈ ತಿದ್ದುಪಡಿಯು ಸುಪ್ರೀಂಕೋರ್ಟ್‌ನ ಕೆಲವೊಂದು ಅಧಿಕಾರವನ್ನು ಮರುಸ್ಥಾಪಿಸಿತು ಹಾಗೂ ಸಂವಿಧಾನದ 20 ಮತ್ತು 21ನೇ ವಿಧಿಯಲ್ಲಿ ನೀಡಲಾಗಿರುವ ಮೂಲಭೂತ ಹಕ್ಕುಗಳನ್ನು ತುರ್ತುಪರಿಸ್ಥಿತಿಯ ಸಂದರ್ಭ ಕಿತ್ತುಹಾಕುವಂತಿಲ್ಲ ಎಂದು ಸ್ಪಷ್ಟಪಡಿಸಿತು. ಸಚಿವ ಸಂಪುಟದ ಲಿಖಿತ ಶಿಫಾರಸಿನ ಬಳಿಕ ಮಾತ್ರ ರಾಷ್ಟ್ರಪತಿ ತುರ್ತುಪರಿಸ್ಥಿತಿಯನ್ನು ಘೋಷಿಸಬಹುದು ಮತ್ತು ಯಾವುದೇ ಕಾರಣಕ್ಕೂ ಇದು ಆರು ತಿಂಗಳನ್ನು ಮೀರುವಂತಿಲ್ಲ ಎಂದು ಪ್ರಥಮ ಬಾರಿಗೆ ಸಂವಿಧಾನದಲ್ಲಿ ಸೇರಿಸಲಾಯಿತು.

1975ರಲ್ಲಿ ತುರ್ತುಪರಿಸ್ಥಿತಿಯ ರೂಪದಲ್ಲಿ ಪ್ರಜಾಪ್ರಭುತ್ವದ ಮೇಲಾಗಿರುವ ದಾಳಿ ಮತ್ತೆ ಪುನರಾವರ್ತನೆಯಾಗದಂತೆ ದೇಸಾಯಿ ಖಾತರಿಪಡಿಸಿದರು ಎಂದು ಮೋದಿ ಹೇಳಿದರು. ಇತ್ತೀಚಿಗೆ ಪದ್ಮ ಪ್ರಶಸ್ತಿ ಪಡೆದವರ ವಿನಯ ಸಂಪನ್ನತೆ ಹಾಗೂ ವಿನಮ್ರತೆಯ ಹಿನ್ನೆಲೆಯನ್ನು ಉಲ್ಲೇಖಿಸಿದ ಮೋದಿ, ಪದ್ಮಪ್ರಶಸ್ತಿ ಪಡೆದವರ ಹೆಸರು ಪ್ರಕಟವಾದ ಬಳಿಕ ಕೆಲವರ ಬಗ್ಗೆ ಜನತೆ ಕುತೂಹಲದಿಂದ ಪ್ರಶ್ನಿಸಲು ತೊಡಗಿದರು. ಈ ಸಾಧಕರು ಪ್ರಚಾರದ ಹಂಗಿಲ್ಲದೆ ನಿಸ್ವಾರ್ಥದಿಂದ ಕಾರ್ಯ ನಿರ್ವಹಿಸುತ್ತಿದುದಕ್ಕೆ ಇದು ದ್ಯೋತಕವಾಗಿದೆ. ಈ ಪ್ರತಿಷ್ಟಿತ ಪುರಸ್ಕಾರ ಪಡೆದವರಲ್ಲಿ 12 ರೈತರೂ ಸೇರಿದ್ದಾರೆ ಎಂದು ಸ್ಮರಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X