Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೂಟಿಂಗ್ ವಿಶ್ವಕಪ್‌:...

ಶೂಟಿಂಗ್ ವಿಶ್ವಕಪ್‌: ವಿಶ್ವದಾಖಲೆಯೊಂದಿಗೆ ಸ್ವರ್ಣ ಗೆದ್ದ ಸೌರಭ್

ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಯುವ ಶೂಟರ್

ವಾರ್ತಾಭಾರತಿವಾರ್ತಾಭಾರತಿ24 Feb 2019 11:37 PM IST
share
ಶೂಟಿಂಗ್ ವಿಶ್ವಕಪ್‌: ವಿಶ್ವದಾಖಲೆಯೊಂದಿಗೆ ಸ್ವರ್ಣ ಗೆದ್ದ ಸೌರಭ್

ಹೊಸದಿಲ್ಲಿ, ಫೆ.24: ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನ ಎರಡನೇ ದಿನವಾದ ರವಿವಾರ 16ರ ಹರೆಯದ ಶೂಟರ್ ಸೌರಭ್ ಚೌಧರಿ ಪುರುಷರ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದರು. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದ್ದಾರೆ.

ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ಹಿರಿಯರ ವಿಶ್ವಕಪ್‌ನಲ್ಲಿ ಮೊದಲ ಬಾರಿ ಸ್ಪರ್ಧಿಸಿದ ಸೌರಭ್ 245.0 ಅಂಕ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದರು. ಮೊದಲ ಸ್ಥಾನ ಪಡೆದ ಸೌರಭ್ ಚಿನ್ನದ ಪದಕ ಜಯಿಸಿ ಹೊಸ ಮೈಲುಗಲ್ಲು ತಲುಪಿದರು. ಇದೀಗ ಅವರು ಜೂನಿಯರ್ ಹಾಗೂ ಸೀನಿಯರ್ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಜೊತೆಗೆ ಜೂನಿಯರ್ ಹಾಗೂ ಸೀನಿಯರ್ ವಿಶ್ವಕಪ್‌ನಲ್ಲಿ ವಿಶ್ವ ದಾಖಲೆಯನ್ನೂ ನಿರ್ಮಿಸಿದ ಅಪರೂಪದ ಸಾಧನೆಯನ್ನು ಮಾಡಿದ್ದಾರೆ.

ಶೂಟಿಂಗ್‌ನಲ್ಲಿ ಮಿಂಚುತ್ತಿರುವ ಸೌರಭ್ ಕಾಮನ್‌ವೆಲ್ತ್ ಹಾಗೂ ಏಶ್ಯನ್ ಗೇಮ್ಸ್, ಯೂತ್ ಒಲಿಂಪಿಕ್ ಗೇಮ್ಸ್‌ನಲ್ಲೂ ಚಿನ್ನದ ಪದಕವನ್ನು ಜಯಿಸಿ ಗಮನ ಸೆಳೆದಿದ್ದಾರೆ.

ಕಿಕ್ಕಿರಿದು ನೆರೆದಿದ್ದ ತವರು ಪ್ರೇಕ್ಷಕರ ಬೆಂಬಲದೊಂದಿಗೆ ಆಡಿದ ಸೌರಭ್ ತಲಾ 5 ಶಾಟ್ಸ್ ಗಳ ಮೊದಲೆರಡು ಸೀರಿಸ್‌ನಲ್ಲಿ 2.6 ಅಂಕಗಳ ಮುನ್ನಡೆ ಪಡೆದರು. ಸೌರಭ್ 16 ಶಾಟ್ಸ್ ಅಂತ್ಯಕ್ಕೆ 4.8 ಅಂಕಗಳ ಮುನ್ನಡೆ ಸಾಧಿಸಿ ಅಗ್ರ ಸ್ಥಾನ ಗಳಿಸಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಾ ಸಾಗಿದಾಗ ನೆರೆದಿದ್ದ ಪ್ರೇಕ್ಷಕರು ಸಂಭ್ರಮಿಸಿದರು. ಅಂತಿಮವಾಗಿ ಎದುರಾಳಿ ಡಮಿರ್ ಮಿಕೆಕ್‌ಗಿಂತ 5.7 ಅಂಕ ಮುನ್ನಡೆಯೊಂದಿಗೆ ವಿಜಯಿಯಾದರು. ಸರ್ಬಿಯದ ಮಿಕೆಕ್ 239.3 ಅಂಕ ಗಳಿಸಿ ಬೆಳ್ಳಿ ಪದಕ ಜಯಿಸಿ 2ನೇ ಒಲಿಂಪಿಕ್ಸ್ ಕೋಟಾವನ್ನು ಭರ್ತಿ ಮಾಡಿದರು. ಚೀನಾದ ವೀ ಪಾಂಗ್ 215.2 ಅಂಕ ಗಳಿಸಿ ಕಂಚಿನ ಪದಕ ತನ್ನದಾಗಿಸಿಕೊಂಡರು.

ಇದಕ್ಕೂ ಮೊದಲು ಸೌರಭ್ 587 ಅಂಕ ಗಳಿಸಿ ಮೊದಲ ಸ್ಥಾನದೊಂದಿಗೆ ಫೈನಲ್‌ಗೆ ಪ್ರವೇಶಿಸಿದರು. ಸ್ಪರ್ಧೆಯಲ್ಲಿದ್ದ ಭಾರತದ ಇತರ ಶೂಟರ್‌ಗಳಾದ ಅಭಿಷೇಕ್ ವರ್ಮಾ ಹಾಗೂ ರವಿಂದರ್ ಸಿಂಗ್ ಫೈನಲ್‌ಗೆ ತಲುಪಲು ವಿಫಲರಾದರು. ಅಭಿಷೇಕ್ ಹಾಗೂ ರವಿಂದರ್ ಅರ್ಹತಾ ಸುತ್ತಿನಲ್ಲಿ ಒಟ್ಟು 576 ಅಂಕ ಗಳಿಸಿದರು. ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಐದನೇ ಸ್ಥಾನ ಪಡೆದು ನಿರಾಸೆಗೊಳಿಸಿದರು.

ಇದೀಗ ಭಾರತ 2020ರ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮೂರು ಮೀಸಲು ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ 10 ಮೀ. ಏರ್ ರೈಫಲ್‌ನಲ್ಲಿ ಅಪೂರ್ವಿ ಚಾಂಡೇಲಾ ಹಾಗೂ ಅಂಜುಮ್ ವೌದ್ಗಿಲ್ ಒಲಿಂಪಿಕ್ಸ್‌ನಲ್ಲಿ ಸ್ಥಾನ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X