Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಲ್ಲ ಸಾಧ್ಯತೆಗಳಿಗೆ ಸಿದ್ಧರಾಗಿ: ಪಾಕ್...

ಎಲ್ಲ ಸಾಧ್ಯತೆಗಳಿಗೆ ಸಿದ್ಧರಾಗಿ: ಪಾಕ್ ಸಶಸ್ತ್ರ ಪಡೆಗಳು, ಜನರಿಗೆ ಇಮ್ರಾನ್ ಖಾನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Feb 2019 9:06 PM IST
share
ಎಲ್ಲ ಸಾಧ್ಯತೆಗಳಿಗೆ ಸಿದ್ಧರಾಗಿ: ಪಾಕ್ ಸಶಸ್ತ್ರ ಪಡೆಗಳು, ಜನರಿಗೆ ಇಮ್ರಾನ್ ಖಾನ್ ಸೂಚನೆ

ಇಸ್ಲಾಮಾಬಾದ್, ಫೆ. 26: ಎಲ್ಲ ಸಾಧ್ಯತೆಗಳಿಗೆ ಸಿದ್ಧರಾಗಿರುವಂತೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ದೇಶದ ಸಶಸ್ತ್ರ ಪಡೆಗಳು ಮತ್ತು ಜನರಿಗೆ ಸೂಚಿಸಿದ್ದಾರೆ.

ಪಾಕಿಸ್ತಾನದ ಖೈಬರ್ ಪಖ್ತೂಂಖ್ವ ರಾಜ್ಯದ ಬಾಲಕೋಟ್ ಸಮೀಪದಲ್ಲಿರುವ ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಯ ತರಬೇತಿ ಶಿಬಿರದ ಮೇಲೆ ಭಾರತೀಯ ವಾಯುಪಡೆ ಮಂಗಳವಾರ ಮುಂಜಾನೆ ದಾಳಿ ನಡೆಸಿದ ಬಳಿಕ ಈ ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಮಂಡಳಿಯ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ವೇಳೆ ಅವರು ಈ ಸೂಚನೆ ನೀಡಿದ್ದಾರೆ. ದೇಶದ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಹಾಗೂ ಇತರ ಉನ್ನತ ಸರಕಾರಿ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

‘‘ಭಾರತವು ಅನವಶ್ಯಕ ಆಕ್ರಮಣವನ್ನು ನಡೆಸಿದೆ. ಇದಕ್ಕೆ ಪಾಕಿಸ್ತಾನವು ತಾನು ನಿರ್ಧರಿಸಿದ ಸಮಯ ಮತ್ತು ಸ್ಥಳದಲ್ಲಿ ಪ್ರತಿಕ್ರಿಯೆ ನೀಡಲಿದೆ’’ ಎಂದು ಸಭೆಯ ಬಳಿಕ ಪಾಕಿಸ್ತಾನದ ಪ್ರಧಾನಿ ಕಚೇರಿ ಹೊರಡಿಸಿದ ಹೇಳಿಕೆಯೊಂದು ತಿಳಿಸಿದೆ.

‘‘ಸಶಸ್ತ್ರ ಪಡೆಗಳು ಮತ್ತು ಪಾಕಿಸ್ತಾನದ ಜನತೆ ಎಲ್ಲ ಸಾಧ್ಯತೆಗಳನ್ನು ಎದುರಿಸಲು ಸಜ್ಜಾಗಿರಬೇಕು ಎಂಬುದಾಗಿ ಪ್ರಧಾನಿ ಸೂಚನೆ ನೀಡಿದ್ದಾರೆ’’ ಎಂದು ಅದು ಹೇಳಿದೆ.

ಭಾರತೀಯ ವಾಯುಪಡೆ ನಡೆಸಿದ ದಾಳಿಯಲ್ಲಿ ಸುಮಾರು 300 ಭಯೋತ್ಪಾದಕರು ಸತ್ತಿದ್ದಾರೆ ಎಂಬುದಾಗಿ ಸರಕಾರಿ ಮೂಲಗಳು ಹೇಳುತ್ತಿವೆ.

►ಭಾರತ ವಿವೇಚನೆಯಿಂದ ವರ್ತಿಸಲಿ: ಪಾಕ್ ವಿದೇಶ ಸಚಿವ

ಭಾರತ ವಿವೇಚನೆಯಿಂದ ವರ್ತಿಸಬೇಕು ಹಾಗೂ ಭಾರತದ ‘ಅತಿಕ್ರಮಣ’ಕ್ಕೆ ಸರಿಯಾದ ಪ್ರತಿಕ್ರಿಯೆ ನೀಡುವ ಹಕ್ಕು ಪಾಕಿಸ್ತಾನಕ್ಕೆ ಇದೆ ಎಂದು ಪಾಕಿಸ್ತಾನದ ವಿದೇಶ ಸಚಿವ ಶಾ ಮಹ್ಮೂದ್ ಕುರೇಶಿ ಹೇಳಿದ್ದಾರೆ.

‘‘ಇದು ಗಂಭೀರ ಅತಿಕ್ರಮಣ ಎಂಬುದಾಗಿ ನಾನು ಪರಿಗಣಿಸುತ್ತೇನೆ. ಇದು ಗಡಿ ನಿಯಂತ್ರಣ ರೇಖೆಯ ಉಲ್ಲಂಘನೆ. ಆತ್ಮರಕ್ಷಣೆಯ ಹಾಗೂ ಸೂಕ್ತ ಉತ್ತರ ನೀಡುವ ಹಕ್ಕು ಪಾಕಿಸ್ತಾನಕ್ಕೆ ಇದೆ’’ ಎಂದು ಕುರೇಶಿ ಹೇಳಿದ್ದಾರೆ ಎಂದು ಪಾಕಿಸ್ತಾನದ ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್ ಬಿಡುಗಡೆ ಮಾಡಿದ ವೀಡಿಯೊ ಹೇಳಿಕೆಯೊಂದು ತಿಳಿಸಿದೆ.

►ಭಾರತದ ಆಕ್ರಮಣ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ: ಪಾಕ್

ಭಾರತ ನಡೆಸಿರುವ ಗಡಿ ನಿಯಂತ್ರಣ ರೇಖೆಯ ಉಲ್ಲಂಘನೆಯನ್ನು ಪಾಕಿಸ್ತಾನವು ವಿಶ್ವಸಂಸ್ಥೆ ಮತ್ತು ಇತರ ಅಂತರ್‌ರಾಷ್ಟ್ರೀಯ ಸಂಸ್ಥೆಗಳಲ್ಲಿ ಪ್ರಸ್ತಾಪಿಸುವುದು ಎಂದು ಪಾಕಿಸ್ತಾನದ ಸುದ್ದಿ ವಾಹಿನಿ ‘ಜಿಯೋ ಟಿವಿ’ ವರದಿ ಮಾಡಿದೆ.

ಪ್ರಧಾನಿ ಇಮ್ರಾನ್ ಖಾನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಅದು ಹೇಳಿದೆ.

‘‘ಭಾರತ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿರುವುದನ್ನು ವಿಶ್ವಸಂಸ್ಥೆ, ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಮತ್ತು ಇತರ ಮಿತ್ರ ದೇಶಗಳೊಂದಿಗೆ ಪ್ರಸ್ತಾಪಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಯಿತು’’ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X