Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ...

ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಸಮಿತಿ ತೀರ್ಮಾನಕ್ಕೆ ಬದ್ಧ: ರಾಜ್ಯ ರೈತಸಂಘದ ಸಭೆಯಲ್ಲಿ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ26 Feb 2019 11:38 PM IST
share
ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಸಮಿತಿ ತೀರ್ಮಾನಕ್ಕೆ ಬದ್ಧ: ರಾಜ್ಯ ರೈತಸಂಘದ ಸಭೆಯಲ್ಲಿ ತೀರ್ಮಾನ

ಮಂಡ್ಯ, ಫೆ.26: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ, ಬೇಡವೇ ಎಂಬ ಬಗ್ಗೆ ರಾಷ್ಟ್ರೀಯ ಸಮಿತಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ರೈತಸಂಘದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ರಾಜ್ಯ ರೈತಸಂಘದ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸ್ವರಾಜ್ ಇಂಡಿಯಾ ಪಕ್ಷ ಸ್ಪರ್ಧಿಸುವ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಮಂಡ್ಯ ಹೊರತುಪಡಿಸಿದಂತೆ ರೈತಸಂಘದ ಉಳಿದ ತಾಲೂಕು ಸಮಿತಿಗಳು ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದವು.

ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯ ದೇವನೂರು ಮಹಾದೇವ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಅಭಿರುಚಿ ಗಣೇಶ್, ರಾಜ್ಯ ಉಪಾಧ್ಯಕ್ಷ ಬಿ.ಕೃಪಾಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಹಲವರು ಜಿಲ್ಲಾ ಸಮಿತಿಯ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ರಾಜ್ಯ ಸಮಿತಿಯ ಮುಂದಿಟ್ಟು ರಾಷ್ಟ್ರೀಯ ಸಮಿತಿಗೆ ಕಳುಹಿಸಲು ನಿರ್ಧರಿಸಿದರು.

ರಾಷ್ಟ್ರೀಯ ಸಮಿತಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಬೆಂಬಲಿಸೋಣ, ಬೇಡ ಎಂದರೆ ಚುನಾವಣೆಯಿಂದ ದೂರ ಉಳಿಯೋಣ. ಯಾರನ್ನೂ ಬೆಂಬಲಿಸದೆ ತಟಸ್ಥವಾಗಿ ಉಳಿಯುವಂತೆ ಸೂಚಿಸಿದರೆ ಅದಕ್ಕೂ ಬದ್ಧರಾಗೋಣ. ರಾಷ್ಟ್ರೀಯ ಸಮಿತಿ ತೀರ್ಮಾನಕ್ಕೆ ಎಲ್ಲರೂ ತಲೆಬಾಗುವಂತೆ ತಿಳಿಸಿದಾಗ ಎಲ್ಲರೂ ಒಪ್ಪಿಗೆ ಸೂಚಿಸಿದರು.

ಚುನಾವಣೆಗೆ ಪೂರ್ವ ತಯಾರಿ ಆಗದಿರುವ ಕಾರಣ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ಸ್ಪರ್ಧೆ ಬೇಡ ಎಂದು ಜಿಪಂ ಮಾಜಿ ಸದಸ್ಯ ಎ.ಎಲ್.ಕೆಂಪೂಗೌಡ ಅಭಿಪ್ರಾಯಪಟ್ಟರೆ, ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ 2 ಕೋಟಿ ರೂ. ದುಡ್ಡು ಬೇಕು. ದುಡ್ಡಿಲ್ಲದೆ ಚುನಾವಣೆ ನಡೆಸಲಾಗುವುದಿಲ್ಲ. ಹಾಗಾಗಿ ಸ್ಪರ್ಧೆ ಬೇಡವೆಂದು ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ ರಾಜೇಗೌಡ ಹೇಳಿದರು.

ಮದ್ದೂರು ತಾಲೂಕು ಅಧ್ಯಕ್ಷ ಜಿ.ರಾಮಕೃಷ್ಣಯ್ಯ ಮಾತನಾಡಿ, ನಮ್ಮ ತಾಲೂಕು ಸಮಿತಿಯವರು ಚುನಾವಣೆ ಬೇಡ ಎನ್ನುತ್ತಿದ್ದಾರೆ. ಆದರೆ, ಸ್ಪರ್ಧೆ ಬೇಕು ಎನ್ನುವುದು ನನ್ನ ಅಭಿಪ್ರಾಯ. ಚುನಾವಣೆಗಳಲ್ಲಿ ಸೋಲು-ಗೆಲುವು ಬೇರೆ. ಪಾಲ್ಗೊಳ್ಳುವಿಕೆ ಮುಖ್ಯ. ಮುಂದೆ ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳು ಎದುರಾದಾಗ ನಾವು ಸ್ಪರ್ಧಿಸುವಂತಿಲ್ಲ. ಇಲ್ಲವಾದರೆ ನಮಗೆ ಚುನಾವಣೆಯೇ ಬೇಡ ಎಂದು ನಿರ್ಣಯ ಮಾಡಿಬಿಡಿ ಎಂದು ತಿಳಿಸಿದರು. 

ರೈತಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್ ಮಾತನಾಡಿ, ರೈತಸಂಘಕ್ಕೆ ಮೇಲುಕೋಟೆ ಕ್ಷೇತ್ರದಲ್ಲಿ 75 ಸಾವಿರದಷ್ಟು ಮತಗಳು ಹರಿದು ಬಂದಿರುವುದರಿಂದಲೇ ಚಿತ್ರನಟಿ ಸುಮಲತಾ ಬೆಂಬಲ ಕೋರಿ ಬಂದಿದ್ದಾರೆ. ಒಂದೂವರೆ ಲಕ್ಷದಷ್ಟಿದ್ದ ಬಿಜೆಪಿ ಮತಗಳು ಎರಡೂವರೆ ಲಕ್ಷಕ್ಕೆ ಹೆಚ್ಚಿದೆ. ನಾವು ಚುನಾವಣೆ ಎದುರಿಸದಿದ್ದರೆ ಬಿಜೆಪಿಗೆ ನೆಲೆ ದೊರಕಿಸಿಕೊಟ್ಟಂತಾಗುತ್ತದೆ. ನಮ್ಮ ಶಕ್ತಿ ಉಳಿಸಿಕೊಳ್ಳಲು ಸ್ಪರ್ಧೆ ಬೇಕು ಎಂದರು.

ಸ್ವರಾಜ್ ಇಂಡಿಯಾ ಪಕ್ಷ ಚುನಾವಣೆಯಿಂದ ದೂರ ಸರಿದಂತೆ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲಿದೆ. ರಾಜಕೀಯದಿಂದ ದೂರ ಉಳಿದರೆ ಎಂದಿಗೂ ಬೆಳವಣಿಗೆ ಸಾಧ್ಯವಿಲ್ಲ ಎಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಭಿಪ್ರಾಯಪಟ್ಟರು.

ಸಭೆಯಲ್ಲಿ ರೈತಸಂಘದ ಸುನೀತಾ ಪುಟ್ಟಣ್ಣಯ್ಯ, ಬೋರೇಗೌಡ, ಶಂಕರೇಗೌಡ, ಪಿ.ಕೆ.ನಾರಾಯಣಗೌಡ, ಸಿದ್ದೇಗೌಡ, ಜಯರಾಮೇಗೌಡ ಸೇರಿದಂತೆ ರೈತಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜಕೀಯ ಧ್ವನಿ ಮುಖ್ಯ: ದೇವನೂರು ಮಹಾದೇವ
ಚುನಾವಣೆ ಸ್ಪರ್ಧೆ ಬಗ್ಗೆ ಒಗ್ಗಟ್ಟಿನ ಧ್ವನಿ ಇರಬೇಕು. ಹಗ್ಗ-ಜಗ್ಗಾಟ ಮಾಡುವುದು ಸರಿಯಲ್ಲ ಎಂದು ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯ, ಲೇಖಕ ದೇವನೂರು ಮಹಾದೇವ ಹೇಳಿದರು.

ಚುನಾವಣೆ ಬೇಡ ಎನ್ನುವುದಾದರೆ ಮೇಲುಕೋಟೆ ಕ್ಷೇತ್ರವನ್ನು ಕಳೆದುಕೊಳ್ಳಲು ರೆಡಿಯಾಗಬೇಕು. ಇಲ್ಲವೇ ರೈತಸಂಘಕ್ಕೆ ರಾಜಕೀಯವೇ ಬೇಡ ಎಂದು ನಿರ್ಧಾರ ಮಾಡಿಬಿಡಿ. ಗೊಂದಲದಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದರು. ನಮ್ಮ ಓಟ್ ಬ್ಯಾಂಕ್‍ನ್ನು ಉಳಿಸಿಕೊಳ್ಳುವುದಕ್ಕೆ ಎಲ್ಲರೂ ಸ್ಪಷ್ಟ ತೀರ್ಮಾನ ಮಾಡಬೇಕು. ಜನರನ್ನು ನಾವು ಹಿಡಿಯಾಗಿ ನೋಡಬೇಕು. ಟ್ರೆಂಡ್ ಬಂದಾಗ ಹಿಡಿದುಕೊಳ್ಳಬೇಕು. ಇಲ್ಲದಿದ್ದರೆ ಏನು ಹೋರಾಟ ಮಾಡಿದರೂ ವ್ಯರ್ಥ ಎಂದು ಹೇಳಿದರು.

ನಮಗಿನ್ನೂ ರಾಜಕೀಯ ನಡವಳಿಕೆ ಬಂದಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧವಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯ. ಅದಕ್ಕೆ ಎಲ್ಲರೂ ರೆಡಿಯಾಗಬೇಕು. ಮುಂದಿನ ಎರಡು ತಿಂಗಳಲ್ಲಿ ರಾಜಕೀಯ ಪಕ್ಷದವರು ಏನೇನು ಮಾಡುವರೋ ಗೊತ್ತಿಲ್ಲ. ಆದರೆ, ಮೇಲುಕೋಟೆ ಕ್ಷೇತ್ರವನ್ನು ಜೋಪಾನ ಮಾಡಿಕೊಂಡು ಮುಂದಿನ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗೆ ಸ್ಪರ್ಧೆಗಿಳಿಯುವುದಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳಬೇಕು ಹಾಗೂ ಸ್ವರಾಜ್ ಇಂಡಿಯಾ ಪಕ್ಷ ಇದೆ ಎನ್ನುವುದನ್ನು ಜಿಲ್ಲೆಯ ಮನೆ ಮನೆಗೆ ತಲುಪಿಸಬೇಕು ಎಂದು ಅವರು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X