Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಯದೇವ ಆಸ್ಪತ್ರೆಯ ಕಾರ್ಯವೈಖರಿಗೆ...

ಜಯದೇವ ಆಸ್ಪತ್ರೆಯ ಕಾರ್ಯವೈಖರಿಗೆ ಕುಮಾರಸ್ವಾಮಿ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ27 Feb 2019 8:24 PM IST
share
ಜಯದೇವ ಆಸ್ಪತ್ರೆಯ ಕಾರ್ಯವೈಖರಿಗೆ ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು, ಫೆ.27: ಯಾವುದೇ ಖಾಸಗಿ ಆಸ್ಪತ್ರೆಗಳು ಜಯದೇವ ಆಸ್ಪತ್ರೆಗೆ ಸಮನಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬುಧವಾರ ನಗರದ ಜಯದೇವ ಆಸ್ಪತ್ರೆಯ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನೂತನ ಕಟ್ಟಡ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆ, ರೋಗಿಗಳು ಬಂದಾಗ ಹಣಕ್ಕೆ ಆಸೆ ಪಡದೆ ಚಿಕಿತ್ಸೆಗೆ ಆದ್ಯತೆ ನೀಡುವ ಸಂಸ್ಥೆಯಾಗಿದ್ದು, ಆ ಮೂಲಕ ರಾಜ್ಯಕ್ಕೆ ಹೆಸರು ತಂದಿರುವ ಪ್ರತಿಷ್ಠಿತ ಸಂಸ್ಥೆ ಇದಾಗಿದೆ ಎಂದು ಶ್ಲಾಘಿಸಿದರು.

ಸರಕಾರಿ ಆಸ್ಪತ್ರೆಗಳು, ಸರಕಾರಿ ವೈದ್ಯರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ತಮ್ಮ ಕಾಣಿಕೆ ಸಲ್ಲಿಸಬೇಕು. ಜನತೆಯಲ್ಲಿ ಬದುಕಿನ ಕುರಿತು ಹೆಚ್ಚಿನ ಆತ್ಮವಿಶ್ವಾಸ ಹೆಚ್ಚಿಸಬೇಕಾದರೆ ವೈದ್ಯರ ನಡತೆ ಅತಿ ಮುಖ್ಯವಾಗುತ್ತದೆ. ಪ್ರತಿಯೊಬ್ಬ ರೋಗಿಯನ್ನು ತಮ್ಮ ಮನೆಯ ಸದಸ್ಯರೆಂಬಂತೆ ನೋಡಿಕೊಂಡರೆ ಚಿಕಿತ್ಸೆಯಿಲ್ಲದೆಯೆ ಅರ್ಧರೋಗ ಕಡಿಮೆಯಾಗುತ್ತದೆ ಎಂದು ಅವರು ಹೇಳಿದರು.

ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದಿನಕಳೆದಂತೆ ಹೆಚ್ಚಾಗುತ್ತದೆ. ಹೀಗಾಗಿ ಹೊಸದೊಂದು ಕಟ್ಟಡ ಬೇಕೆಂದು ಕೆಲ ತಿಂಗಳ ಹಿಂದೆ ಜಯದೇವ ಸಂಸ್ಥೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು. ಈಗ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಆಸ್ಪತ್ರೆಗೆ ಹೆಚ್ಚಿನ ಹಾಸಿಗೆ ಇರುವ ಕಟ್ಟಡ ನಿರ್ಮಾಣಕ್ಕೆ ಮುಂದೆ ಬಂದಿದ್ದಾರೆ. ಕೇವಲ ಒಂದೇ ವಾರದಲ್ಲಿ ನೀಲನಕ್ಷೆ ತಯಾರಿಸಿ ನೆರವಿಗೆ ಧಾವಿಸಿದ್ದಾರೆಂದು ಅವರು ಮೆಚ್ವುಗೆ ವ್ಯಕ್ತಪಡಿಸಿದರು.

ಉಳಿದಂತೆ ಬಂಡೀಪುರ ಅರಣ್ಯಕ್ಕೆ ಹತ್ತಿರುವ ಕಾಡ್ಗಿಚ್ಚು ಸಂಬಂಧ ಮಾತನಾಡಿದ ಮುಖ್ಯಮಂತ್ರಿಗಳು, ಅರಣ್ಯ ಇಲಾಖೆ ಉತ್ತಮ ಕಾರ್ಯನಿರ್ವಹಣೆ ಮೂಲಕ ಯಶಸ್ವಿಯಾಗಿ ಬೆಂಕಿ ನಂದಿಸಿದೆ. ಈ ವಿಷಯ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಅವರು ಮನವಿ ಮಾಡಿದರು.

ಬಂಡೀಪುರ ಕಾಡಿನ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ. ಬೆಂಕಿಯಿಂದ ಕಾಡಿನ ಮರಗಳಿಗೆ ಹೆಚ್ಚು ಅಪಾಯವಾಗಿಲ್ಲ. ನೆಲದ ಮೇಲಿನ ಹುಲ್ಲು ಸುಟ್ಟುಹೋಗಿದೆ. 750 ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಭಾಗಿಯಾಗಿದ್ದರು. ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಪಡೆಯಲಿದ್ದೇನೆ. ಇಂತಹ ಸಂದರ್ಭಗಳನ್ನು ಸರಕಾರ ಯಶಸ್ವಿಯಾಗಿ ನಿಭಾಯಿಸಲಿದೆ ಎಂದು ಅವರು ತಿಳಿಸಿದರು.

ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಮಾತನಾಡಿ, ಈಗಾಗಲೇ ಜಯದೇವ ಆಸ್ಪತ್ರೆ 700 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ. ಇಷ್ಟು ದೊಡ್ಡ ಪ್ರಮಾಣದ ಹೃದಯರೋಗ ಆಸ್ಪತ್ರೆ ಇದೇ ಮೊದಲು. ಹೊಸ ಆಸ್ಪತ್ರೆ ಕಟ್ಟಡ 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕಟ್ಟಡದ ಪೂರ್ಣ ಹೊಣೆಯನ್ನು ಇನ್ಫೋಸಿಸ್ ಸಂಸ್ಥೆ ವಹಿಸಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ, ಶಾಸಕಿ ಸೌಮ್ಯಾರೆಡ್ಡಿ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X