Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ...

ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮತ್ತೊಮ್ಮೆ ದಿಲ್ಲಿಯಲ್ಲಿ ಕನ್ನಡಿಗನ ಧ್ವನಿ ಕೇಳಲಿದೆ: ಸಿಎಂ ಕುಮಾರಸ್ವಾಮಿ

ಲೋಕಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ27 Feb 2019 9:21 PM IST
share
ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮತ್ತೊಮ್ಮೆ ದಿಲ್ಲಿಯಲ್ಲಿ ಕನ್ನಡಿಗನ ಧ್ವನಿ ಕೇಳಲಿದೆ: ಸಿಎಂ ಕುಮಾರಸ್ವಾಮಿ

ಮಂಡ್ಯ, ಫೆ.27: ಸಾಲಮನ್ನಾ ಅಪರಾಧವೆಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂಕಷ್ಟದಲ್ಲಿರುವ ರೈತರನ್ನು ಅಪಮಾನಗೊಳಿಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತರಿಗೆ ಕರೆ ನೀಡಿದ್ದಾರೆ.

ನಗರದ ಸರಕಾರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷಗಳು ಬಣ್ಣದ ಮಾತುಗಳನ್ನಾಡಿಕೊಂಡು ಕಾಲ ಕಳೆದ ಪ್ರಧಾನಿ, ಕರ್ನಾಟಕ ಸೇರಿದಂತೆ ಇತ್ತೀಚೆಗೆ ನಡೆದ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ವರ್ಷಕ್ಕೆ ಆರು ಸಾವಿರ ನೀಡುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಎದುರಾಗದಿದ್ದರೆ ಆರು ಸಾವಿರ ನೀಡುವ ಮನಸ್ಸು ಮಾಡುತ್ತಿರಲಿಲ್ಲ ಎಂದರು.

ರೈತರಿಗೆ ಮೋದಿ ಆರು ಸಾವಿರ ನೀಡುವ ಯೋಜನೆಯಿಂದ ರಾಜ್ಯದ ರೈತರಿಗೆ ದಕ್ಕುವ ಒಟ್ಟು ಮೊತ್ತ 2,098 ಕೋಟಿ ರೂ. ಆದರೆ, ನಾವು ಕೇವಲ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನದ ಮೊತ್ತ 2,500 ಕೋಟಿ ರೂ. ಇಷ್ಟೇ ಅಲ್ಲ, ರೈತರ ಪಂಪ್ ಸೆಟ್‍ಗೆ ನೀಡುತ್ತಿರುವ ಉಚಿತ ವಿದ್ಯುತ್‍ಗೆ ತಗಲುತ್ತಿರುವ ವೆಚ್ಚ 11 ಸಾವಿರ ಕೋಟಿ ರೂ.. ಈ ವ್ಯತ್ಯಾಸವನ್ನು ಗಮನಿಸಿದರೆ ಯಾರು ರೈತರ ಪರ, ಯಾರು ವಿರುದ್ಧ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.

ಸಾಲ ಮನ್ನಾ ಅಪರಾಧವೆಂದು ಪರಿಗಣಿಸುವ ಪ್ರಧಾನಿಗೆ ಇರುವ ರೈತರ ಪರ ಕಾಳಜಿ ಎಷ್ಟಿನ ಮಟ್ಟದ್ದೆಂದು ಸಾಬೀತಾಗಿದೆ. ಆದರೆ, ನಾವು ಚುನಾವಣೆಯಲ್ಲಿ ಘೋಷಿಸಿದಂತೆ ಅಧಿಕಾರಕ್ಕೆ ಬಂದ ತಕ್ಷಣವೇ ರೈತರ ಎರಡು ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವ ನಿರ್ಧಾರ ಕೈಗೊಂಡೆವು. ಇದಕ್ಕಾಗಿ 45 ಸಾವಿರ ಕೋಟಿ ವಿನಿಯೋಗಿಸಿದೆವು. ಯಾರ ನಿರ್ಧಾರ ಮಹತ್ವದ್ದು, ಯಾರ ಕಾಳಜಿ ಹೆಚ್ಚಿನದು ಎಂಬುದನ್ನು ರೈತರು ಅರ್ಥ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಸಲಹೆ ಇತ್ತರು.

45 ಸಾವಿರ ಕೋಟಿ ಸಾಲ ಮನ್ನಾ ಯೋಜನೆಯಂತೆ ನಿನ್ನೆಯವರೆಗೆ 10 ಲಕ್ಷದ 40 ಸಾವಿರ ರೈತರು ಫಲಾನುಭವಿಗಳಾಗಿ ಲಾಭ ಪಡೆದಿದ್ದಾರೆ. ಉಳಿದ ರೈತರ ಸಾಲ ಮನ್ನಾ ಲಾಭ ಈ ವರ್ಷದ ಅಂತ್ಯದೊಳಗೆ ತಲುಪಲಿದೆ. ಇದಕ್ಕಾಗಿ ಖಜಾನೆಯಲ್ಲಿ 6,400 ಕೋಟಿ ಇಟ್ಟಿರುವುದಾಗಿ ಘೋಷಿಸಿದರು.

ಮತ್ತೊಮ್ಮೆ ದೆಹಲಿಯಲ್ಲಿ ಕನ್ನಡಿಗನ ಧ್ವನಿ: 1996ರಲ್ಲಿ ಕರ್ನಾಟಕದಲ್ಲಿ 16 ಸ್ಥಾನ ಗೆದ್ದಾಗ ದೇವೇಗೌಡರು ಪ್ರಧಾನಿಯಾದರು. ಇವತ್ತು ಅದೇ ರೀತಿಯ ವಾತಾವರಣ ಈ ರಾಜ್ಯದಲ್ಲಿದೆ. ಈ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ 20-22 ಸ್ಥಾನ ಗೆಲ್ಲಿಸಿದರೆ ಮತ್ತೊಮ್ಮೆ ದಿಲ್ಲಿಯಲ್ಲಿ ಕನ್ನಡಿಗನ ಧ್ವನಿ ಕೇಳಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ತನ್ನ ತಂದೆ ದೇವೇಗೌಡರು ಪ್ರಧಾನಿಯಾಗಿದ್ದ 10 ತಿಂಗಳ ಅವಧಿಯಲ್ಲಿ ಯಾವುದೇ ಅವಘಡಗಳು ನಡೆದಿಲ್ಲ. ಒಬ್ಬ ಸೈನಿಕನೂ ಬಲಿಯಾಗಿಲ್ಲವೆಂದು ಜನರೇ ಹೇಳುತ್ತಿದ್ದಾರೆ. ಆದರೆ, ಈಗ ಪದೇ ಪದೇ ಇಂತಹ ಭಯೋತ್ಪಾದಕ ಘಟನೆಗಳು ನಡೆಯುತ್ತಿದೆ ಎಂದು ಅವರು ಪರೋಕ್ಷವಾಗಿ ಪ್ರಧಾನಿ ಮೋದಿಗೆ ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X