Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮಾಜಿಕ ನ್ಯಾಯ ಇರುವ ಪಕ್ಷದ ಜೊತೆಗೆ...

ಸಾಮಾಜಿಕ ನ್ಯಾಯ ಇರುವ ಪಕ್ಷದ ಜೊತೆಗೆ ನಿಲ್ಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಮಟ್ಟದ ದೇವಾಂಗ ನೇಕಾರ ಬೃಹತ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ27 Feb 2019 11:02 PM IST
share
ಸಾಮಾಜಿಕ ನ್ಯಾಯ ಇರುವ ಪಕ್ಷದ ಜೊತೆಗೆ ನಿಲ್ಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ತರೀಕೆರೆ,ಫೆ.27: ಕಾಯಕಗಳು ಜಾತಿಗಳಾಗಿ ಶೋಷಣೆಗೆ ಒಳಗಾಗಿವೆ. ಬಸವಣ್ಣ ಕಂಡ ಸಮಾನತೆಯ ಕನಸು ನನಸಾಗಬೇಕಾದರೆ ಜಾತಿ ಜಾತಿಗಳ ಮಧ್ಯೆ ಮೊದಲು ಸಮಾನತೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಕರ್ನಾಟಕ ರಾಜ್ಯ ದೇವಾಂಗ ಸಂಘ, ಸಮಾವೇಶ ಸಮಿತಿ ಹಾಗೂ ತರೀಕೆರೆ ತಾಲೂಕು ದೇವಾಂಗ ಸಮಾಜದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ದೇವಾಂಗ ನೇಕಾರ ಬೃಹತ್ ಸಮಾವೇಶದ ಸಮಾರೋಪ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಸಮಾನತೆ ಬರಬಾರದೆಂಬ ಚಿಂತನೆ ಪಟ್ಟಭದ್ರರಲ್ಲಿದೆ. ಜಾತಿ ವ್ಯವಸ್ಥೆಯ ಕಾರಣಕ್ಕೆ ಶೋಷಣೆಗೆ ಒಳಗಾದ ಸಮುದಾಯಗಳು ನಿರಂತರವಾಗಿ ಇಂತಹ ಸಮಾವೇಶಗಳನ್ನು ಮಾಡುವುದರಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬಹುದಾಗಿದೆ. ಸಂಘಟಿತ ಶಕ್ತಿ ಇದ್ರೆ ಮಾತ್ರ ಸಮಸ್ಯೆಗಳು ಬಗೆಹರಿಯಲಿವೆ ಎಂದು ತಿಳಿಸಿದರು.

ಬಸವಣ್ಣರ ವಚನ ಉಚ್ಚರಿಸಿದ ಸಿದ್ದರಾಮಯ್ಯ ರವರು 'ಇವನಾರವ ಇವನಾರವ…ಎಂಬ ಪ್ರಶ್ನೆಯ ಜೊತೆ ಜೊತೆಗೆ ಇವ ನಮ್ಮವ..ಇವ ನಮ್ಮವ…ಎಂಬ ಉತ್ತರಗಳು ಪ್ರತ್ಯೇಕತೆಯನ್ನು ಸಾರುತ್ತವೆ ಎಂದು ವ್ಯಾಖ್ಯಾನಿಸಿದ ಅವರು, ಸಾಮಾಜಿಕ ನ್ಯಾಯ ಯಾವ ಪಕ್ಷದಲ್ಲಿದೆಯೋ ಆ ಪಕ್ಷದ ಜೊತೆಗೆ ನಿಲ್ಲಿ, ಇದು ಈ ಕಾಲದ ಅನಿವಾರ್ಯ ಎಂದು ಹೇಳಿದರು.

ಕೈಮಗ್ಗಗಳು ಬಳಸುವ ಶೇ.25 ರೊಳಗಿನ ವಿದ್ಯುತ್ ದರಕ್ಕೆ ಕೇರಳ ಮಾದರಿಯಲ್ಲಿ ಶೂನ್ಯ ದರ ನಿಗದಿಧಿ ಪಡಿಸುವುದು ಸೇರಿದಂತೆ 50 ಸಾವಿರದೊಳಗಿನ ಸಾಲಮನ್ನಾ ಮಾಡುವಲ್ಲಿ ಅಡ್ಡಿಯಾಗಿರುವ ಷರತ್ತುಗಳನ್ನು ಕೈ ಬಿಡುವಂತೆ ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಸಚಿವೆ ಉಮಾಶ್ರೀ ಮಾತನಾಡಿ, ಜಾತಿಯೋಳಗೆ ಭಾವನಾತ್ಮಕ ವಿಷಯಗಳನ್ನು ತಂದು ಜಾತಿ ಜಾತಿ ಮಧ್ಯೆ ಬೆಂಕಿ ಹಾಕುವ ಜನರಿದ್ದು, ನೇಕಾರ ಸಮಾಜದ ಎಲ್ಲಾ ಒಳ ಪಂಗಡಗಳು ಸೇರಿ ನಾವೆಲ್ಲ ಒಂದೇ ಎಂಬ ಭಾವನೆ ನಮಗೆ ಬರಬೇಕಿದೆ ಎಂದು ಹೇಳಿದರು. ನೇಕಾರಿಕೆಯನ್ನು ಸರ್ಕಾರಗಳು ಪ್ರೋತ್ಸಾಹಿಸಿ ಬೆಳೆಸಿದರೆ ಜನರಿಗೆ ಉದ್ಯೋಗ ಕಲ್ಪಿಸಬಹುದಾಗಿದೆ. ಈ ಬಾರಿ ಬಜೆಟ್ ನಲ್ಲಿ ನೇಕಾರರ ಬಗ್ಗೆ ಪ್ರಸ್ತಾಪವಿಲ್ಲ. ಮುಂದಿನ ಮಧ್ಯಂತರ ಬಜೆಟ್ ನಲ್ಲಿಯಾದರೂ ಅನುದಾನ ಒದಗಿಸಲಿ ಎಂದು ಒತ್ತಾಯಿಸಿದರು.

ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರವರು ನೇಕಾರ ಕೂಲಿ ಕಾರ್ಮಿಕರಿಗೆ ಸರ್ಕಾರಕ್ಕೆ ಹೇಳಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು. ಸರ್ಕಾರದಲ್ಲಿ ನಾವು ಈಗ ಇಲ್ಲದ ಕಾರಣ ನಾವು, ಸಮಾಜ, ವೃತ್ತಿಗಳು ಅನಾಥವಾಗಿವೆ. ನೇಕಾರರಿಗೆ ರಾಜಕೀಯ ಶಕ್ತಿ ನೀಡಿದ್ದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರವರು ಎಂದು ಹೇಳಿದರು.

ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಮಾತನಾಡಿ, ನೇಕಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ಸಂಘಟಿತರಾಗಿ ತಮ್ಮ ಹಕ್ಕುಗಳ ಕೇಳುವಲ್ಲಿ ನೇಕಾರ ಸಮಾವೇಶವು ಯಶಸ್ಸನ್ನು ಕಂಡಿದೆ ಎಂದು ತಿಳಿಸಿದರು.

ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರವಿಂದ್ರ ಪಿ.ಕಲಬುರ್ಗಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಅನೇಕ ಸವಲತ್ತುಗಳು ಲಭ್ಯವಾಗಿದ್ದು, ಶೇ.2 ರಷ್ಟು ಒಳ ಮೀಸಲಾತಿಯನ್ನು ಸರ್ಕಾರ ನೇಕಾರರಿಗೆ ನೀಡಲಿ ಎಂದು ಆಗ್ರಹಿಸಿದರು.

ಹಂಪೆ ಹೇಮಕೂಟ ಗಾಯತ್ರಿ ಪೀಠದ ಪೀಠಾಧ್ಯಕ್ಷರಾದ ಶ್ರೀ ದಯಾನಂದ ಪುರಿಸ್ವಾಮಿ ಸಾನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಯಶೋದಮ್ಮ, ಮಾಜಿ ಶಾಸಕರಾದ ಎಸ್.ಎಂ.ನಾಗರಾಜು, ಟಿ.ಎಚ್.ಶಿವಶಂಕರಪ್ಪ, ಜಿ.ಎಚ್.ಶ್ರೀನಿವಾಸ್, ಗಾಯತ್ರಿ ಶಾಂತೆಗೌಡ, ಎಂ.ಡಿ.ಲಕ್ಷ್ಮಿ ನಾರಾಯಣ ಹಾಗೂ ತಾಲೂಕಿನ ಅನೇಕ ಮುಖಂಡರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X