Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಣ್ಯ ಅತಿಕ್ರಮಣದಾರರನ್ನು ರಕ್ಷಿಸಲು...

ಅರಣ್ಯ ಅತಿಕ್ರಮಣದಾರರನ್ನು ರಕ್ಷಿಸಲು ಸುಪ್ರೀಮ್‍ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆಯಾಗಲಿ: ರಾಮಾಮೋಗೇರ್

ವಾರ್ತಾಭಾರತಿವಾರ್ತಾಭಾರತಿ27 Feb 2019 11:07 PM IST
share
ಅರಣ್ಯ ಅತಿಕ್ರಮಣದಾರರನ್ನು ರಕ್ಷಿಸಲು ಸುಪ್ರೀಮ್‍ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆಯಾಗಲಿ: ರಾಮಾಮೋಗೇರ್

ಭಟ್ಕಳ: 2006ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಅರಣ್ಯ ಹಕ್ಕು ಕಾನೂನಿಗೆ ವ್ಯತಿರಿಕ್ತವಾಗಿ ಸುಪ್ರೀಮ್‍ ಕೋರ್ಟ್‍ ತೀರ್ಪು ಹೊರಬಿದ್ದಿದ್ದು, ಅರಣ್ಯ ಅತಿಕ್ರಮಣ ದಾರರನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ತುರ್ತಾಗಿ ಸುಪ್ರೀಮ್‍ ಕೋರ್ಟನಲ್ಲಿ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕು ಎಂದು ಭಟ್ಕಳ ಅರಣ್ಯ ಅತಿಕ್ರಮಣದಾರರ ಹೋರಾಟ ಸಮಿತಿಯ ಅಧ್ಯಕ್ಷ ರಾಮಾ ಮೊಗೇರ ಹೇಳಿದರು.

ಅವರು ಮಂಗಳವಾರ ಇಲ್ಲಿನ ಸತ್ಕಾರ್ ಹೊಟೆಲ್‍ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಅರಣ್ಯ ಅತಿಕ್ರಮಣದ ವಿರುದ್ಧ ಸರಕಾರೇತರ ಸಂಸ್ಥೆಯೊಂದು ಸುಪ್ರೀಮ್‍ ಕೋರ್ಟನಲ್ಲಿ ಸಲ್ಲಿಸಿರುವ ದಾವೆ ಮಾನವೀಯ ಮುಖವಿಲ್ಲದ್ದಾಗಿದೆ. ಇದನ್ನು ನ್ಯಾಯಲಯಕ್ಕೆ ಮನವರಿಕೆ ಮಾಡಿಕೊಡಲು ಸರಕಾರಗಳು ವಿಫಲವಾಗಿವೆ. ಭಟ್ಕಳದಲ್ಲಿ 10 ಸಾವಿರ ಅರಣ್ಯ ಅತಿಕ್ರಮಣದಾರರು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿದ್ದು, ಜಿಲ್ಲಾಡಳಿತ 6000 ಅರ್ಜಿಗಳನ್ನು ತಿರಸ್ಕರಿಸಿದೆ. ಉತ್ತರ ಕನ್ನಡದಲ್ಲಿ 80% ಅರಣ್ಯ ಭೂಮಿ ಇದ್ದು ಜನರಿಗೆ ಉಳಿದುಕೊಳ್ಳಲು ಬೇರೆ ನೆಲೆ ಇಲ್ಲದಾಗಿದೆ. ಇಂತಹ ಸನ್ನಿವೇಶದಲ್ಲಿ ಹೋರಾಟವೊಂದೇ ಬಾಕಿ ಉಳಿದಿದ್ದು, ಮಾ. 2ರಂದು ಕುಮಟಾದಲ್ಲಿ ನಡೆಯುವ ಜೈಲ್ ಭರೋ ಚಳುವಳಿಯಲ್ಲಿ ಭಟ್ಕಳ ತಾಲೂಕಿನ ಅತಿಕ್ರಮಣದಾರ ಕುಟುಂಬದ ಸದಸ್ಯರು ಪಾಲ್ಗೊಳ್ಳಬೇಕು ಎಂದು ವಿನಂತಿಸಿಕೊಂಡರು.

ಅತಿಕ್ರಣದಾರರ ಹಿತರಕ್ಷಣೆಗಾಗಿ ಜಿಲ್ಲಾ ಅರಣ್ಯ ಅತಿಕ್ರಮಣದಾರರ ಹೋರಾಟ ಸಮಿತಿಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಹೈಕೋರ್ಟನಲ್ಲಿ ದಾವೆ ಸಲ್ಲಿಸಿದ್ದಾರೆ. ಅಲ್ಲದೇ ಅರಣ್ಯ ಅತಿಕ್ರಮಣದಾರರ ರಕ್ಷಣೆಗಾಗಿ ಮೇಲ್ಮನವಿ ಸಲ್ಲಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್‍ ಗಾಂಧಿಯವರು ರಾಜ್ಯ ಉಪಮುಖ್ಯ ಮಂತ್ರಿ ಜಿ. ಪರಮೇಶ್ವರರವರಿಗೆ ಪತ್ರ ಮುಖೇನ ತಿಳಿಸಿದ್ದು, ಈ ನಿರ್ಧಾರಕ್ಕಾಗಿ ಕಾಂಗ್ರೆಸ್‍ ಅಧ್ಯಕ್ಷರನ್ನುಅರಣ್ಯ ಅತಿಕ್ರಮಣದಾರರ ಹೋರಾಟ ಸಮಿತಿಯ ವತಿಯಿಂದ ಅಭಿನಂದಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಎಮ್.ಡಿ.ನಾಯ್ಕ, ಗಣಪತಿ ನಾಯ್ಕಜಾಲಿ, ಸಲಾವುದ್ದೀನ್, ರಿಝ್ವಾನ್, ಸುಲೈಮಾನ್, ದೇವರಾಜಗೊಂಡ, ಮಾದೇವ ನಾಯ್ಕ, ಸುಬ್ರಾಯ ನಾಯ್ಕ ಬೆಟ್ಕೂರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X