Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರ ಕೆಲಸಕ್ಕೆ ಜನರ ಸಹಕಾರವೂ ಅಗತ್ಯ:...

ಪೊಲೀಸರ ಕೆಲಸಕ್ಕೆ ಜನರ ಸಹಕಾರವೂ ಅಗತ್ಯ: ಎಎಸ್ಪಿ ಸೈದುಲು ಅಡಾವತ್

ವಾರ್ತಾಭಾರತಿವಾರ್ತಾಭಾರತಿ27 Feb 2019 11:22 PM IST
share
ಪೊಲೀಸರ ಕೆಲಸಕ್ಕೆ ಜನರ ಸಹಕಾರವೂ ಅಗತ್ಯ: ಎಎಸ್ಪಿ ಸೈದುಲು ಅಡಾವತ್

ಬಂಟ್ವಾಳ, ಫೆ. 27: ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ ಪೊಲೀಸರು ಕೆಲಸ ಮಾಡುತ್ತಿದ್ದು, ಇದಕ್ಕೆ ಜನರ ಸಹಕಾರವೂ ಅಗತ್ಯ ಎಂದು ಬಂಟ್ವಾಳ ಉಪವಿಭಾಗ ಎಎಸ್ಪಿ ಸೈದುಲು ಅಡಾವತ್ ಹೇಳಿದ್ದಾರೆ.

ಬಂಟ್ವಾಳ ಪೊಲೀಸ್ ಉಪ ವಿಭಾಗದಿಂದ ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಬುಧವಾರ ಸಂಜೆ ವ್ಯಾಪ್ತಿಯ ದೇವಸ್ಥಾನಗಳ ಮುಖ್ಯಸ್ಥರ ಸಮಾಲೋಚನಾ ಸಭೆಯಲ್ಲಿ ಕಳ್ಳರು, ಸಮಾಜಘಾತುಕರಿಂದ ದೇಗುಲ ಪರಿಸರವನ್ನು ಕಾಪಾಡಿಕೊಳ್ಳಲು ಬೇಕಾದ ಸಲಹೆ ಸೂಚನೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಅವರು, ಪ್ರತಿಯೊಂದು ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ, ಸ್ವಯಂಚಾಲಿತ ಅಲಾರ್ಮ್ ಸಹಿತ ಸುರಕ್ಷತಾ ಕ್ರಮಕ್ಕೆ ಗಮನ ನೀಡಿ, ಯಾವುದೇ ಸಮಸ್ಯೆಗಳಿದ್ದಲ್ಲಿ ಪೊಲೀಸರಿಗೆ ಕರೆ ಮಾಡಲು ಸೂಚಿಸಿದರು.

ರಾತ್ರಿ ಎರಡು ಗಂಟೆಯ ಬಳಿಕ ಆರಾಧನಾಲಯಗಳ ಸಮೀಪ ಪೊಲೀಸ್ ಬೀಟ್ ಜಾಗೃತಗೊಳಿಸಬೇಕು. ಆಯಕಟ್ಟಿನ ಜಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು, ದೇವಸ್ಥಾನದಲ್ಲಿ ಜನಜಂಗುಳಿ ಇದ್ದಾಗ ಕಳ್ಳರ ಕುರಿತು ನಿಗಾ ಇಡಬೇಕು, ಜಾತ್ರೆ ಸಮಯದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಸಹಕರಿಸಬೇಕು, ಗಾಂಜಾ ಸಹಿತ ಮಾದಕ ವಸ್ತುಗಳನ್ನು ಸೇವಿಸಿ ದೇವಸ್ಥಾನಗಳ ಆಸುಪಾಸುಗಳಲ್ಲಿ ಸಂಚರಿಸುವವರನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂಬಿತ್ಯಾದಿ ಸಲಹೆಗಳು ಕೇಳಿ ಬಂದವು.

ನಾನಾ ದೇವಸ್ಥಾನಗಳ ಪ್ರಮುಖರಾದ ಜಿನರಾಜ ಆರಿಗ, ಪ್ರಕಾಶ ಶೆಟ್ಟಿ ಶ್ರೀಶೈಲ ತುಂಬೆ, ಉಮೇಶ್ ಬಂಟ್ವಾಳ, ಅರಳ ಗೋವಿಂದ ಪ್ರಭು, ಮುಳ್ಳುಂಜ ವೆಂಕಟೇಶ್ವರ ಭಟ್, ಎಸ್. ಕೃಷ್ಣ ನಾಯ್ಕ, ಪುರುಷೋತ್ತಮ ಶೆಣೈ, ರಾಜಾ ಬಂಟ್ವಾಳ, ನಾರಾಯಣ ಬೆಳ್ಚಡ, ಕೃಷ್ಣ ನಾಯ್ಕ, ಪುರುಷೋತ್ತಮ ಬಂಗೇರ, ಡಿ.ಸುರೇಶ್ ರೈ, ಜಯಕೀರ್ತಿ ವೈ.ಎಂ, ಜಗದೀಶ ಹೊಳ್ಳ, ಕೆ.ನರಸಿಂಹ ಕಾಮತ್, ಭಾಮಿ ನಾರಾಯಣ ಶೆಣೈ, ಪದ್ಮನಾಭ ಎಂ.ಸಿ. ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

ಬಂಟ್ವಾಳ ಪೊಲೀಸ್ ವೃತ್ತನಿರೀಕ್ಷಕ ನಾಗರಾಜ್, ಎಸ್ಸೈಗಳಾದ ಚಂದ್ರಶೇಖರ್, ಪ್ರಸನ್ನ, ಪ್ರೊಬೆಷನರಿ ಡಿವೈಎಸ್ಪಿ ಗೋವಿಂದರಾಜ್ ಮತ್ತಿತರರು ಅಹವಾಲು ಆಲಿಸಿದರು.

ದೇವಸ್ಥಾನದ ಪ್ರಮುಖ ದ್ವಾರಗಳು, ಒಳಭಾಗಗಳಲ್ಲಿ ಸಿಸಿ ಟಿವಿ, ಭದ್ರತಾ ಸಿಬ್ಬಂದಿ ನೇಮಕ, ಸ್ವಯಂಚಾಲಿತ ಅಲಾರಂ, ಸುತ್ತ ಬೇಲಿ, ಕೌಂಪೌಂಡ್ ನಿರ್ಮಾಣ, ಸೆನ್ಸಾರ್ ಅಳವಡಿಕೆ, ಕಾಣಿಕೆ ಡಬ್ಬಿಗಳನ್ನು ಪ್ರತಿ 15 ದಿನಗಳೊಳಗೆ ತೆರೆದು ಹುಂಡಿ ಹಣ ವಿಲೇವಾರಿ, ಅಮೂಲ್ಯ ಆಭರಣ ಇಡಲು ಲಾಕರ್ ವ್ಯವಸ್ಥೆ, ರಸ್ತೆ ಬದಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಕೆ ಡಬ್ಬಿ ಇರಿಸಿದರೆ ಅದರ ಭದ್ರತೆಯ ಜವಾಬ್ದಾರಿ, ವಿಐಪಿಗಳ ಭೇಟಿ ಸಂದರ್ಭ ಮುಂಚಿತವಾಗಿ ಪೊಲೀಸರಿಗೆ ಮಾಹಿತಿ ನೀಡುವುದು, ಅನಪೇಕ್ಷಿತ ಘಟನೆ, ಸಂಶಯಾಸ್ಪದ ವಸ್ತು, ವ್ಯಕ್ತಿಗಳ ಕಂಡರೆ, ಕಾನೂನುಬಾಹಿರ ಚಟುವಟಿಕೆಗಳಿದ್ದರೆ, ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X