Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕದ...

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕದ ಅಜೇಯ ಗೆಲುವಿನ ಓಟ ಅಬಾಧಿತ

ವಾರ್ತಾಭಾರತಿವಾರ್ತಾಭಾರತಿ27 Feb 2019 11:40 PM IST
share

ಕಟಕ್,ಫೆ.27: ಮಾಜಿ ನಾಯಕ ವಿನಯಕುಮಾರ್ ಅವರ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಕರ್ನಾಟಕ ತಂಡ ಛತ್ತೀಸ್‌ಗಡ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ‘ಡಿ’ ಗುಂಪಿನ ಪಂದ್ಯದಲ್ಲಿ ರೋಚಕ ಜಯ ದಾಖಲಿಸಿತು. ಈ ಮೂಲಕ ಟೂರ್ನಿಯಲ್ಲಿ ಸತತ 5ನೇ ಗೆಲುವು ಸಾಧಿಸಿ ಅಜೇಯ ಓಟ ಮುಂದುವರಿಸಿದೆ.

ಇಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಛತ್ತೀಸ್‌ಗಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 171 ರನ್ ಗಳಿಸಿತು. ಗೆಲ್ಲಲು ಸವಾಲಿನ ಮೊತ್ತ ಪಡೆದ ಕರ್ನಾಟಕ 19.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವಿನಯಕುಮಾರ್ 13 ಎಸೆತಗಳಲ್ಲಿ 4 ಸಿಕ್ಸರ್‌ಗಳ ಸಹಿತ ಔಟಾಗದೆ 34 ರನ್ ಗಳಿಸಿ ಇನ್ನೂ 4 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಗೆಲುವು ತಂದರು. ಕರ್ನಾಟಕದ ಪರ ಕರುಣ್ ನಾಯರ್ ಸರ್ವಾಧಿಕ 35 ರನ್ ಗಳಿಸಿದರೆ, ಜೆ.ಸುಚಿತ್(34), ಮಾಯಾಂಕ್ ಅಗರ್ವಾಲ್(21), ಎಂ.ಮಿಥುನ್(ಔಟಾಗದೆ 18), ರಾಹುಲ್ ಕದಂ(16)ಎರಡಂಕೆಯ ಸ್ಕೋರ್ ಗಳಿಸಿದರು. ನಾಯಕ ಮನೀಷ್ ಪಾಂಡೆ ಕೇವಲ 9 ರನ್ ಗಳಿಸಿದರು.

ಛತ್ತೀಸ್‌ಗಡದ ಪರ ವೌರ್ಯ(2-13), ಶುಭಂ ಸಿಂಗ್(2-35) ಹಾಗೂ ಕುಶ್ವಾಹ (2-40)ತಲಾ ಎರಡು ವಿಕೆಟ್ ಪಡೆದಿದ್ದಾರೆ.

►ಛತ್ತೀಸ್‌ಗಡ 171/3: ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಛತ್ತೀಸ್‌ಗಡ ತಂಡ ನಾಯಕ ಹರ್‌ಪ್ರೀತ್ ಸಿಂಗ್(79, 56 ಎಸೆತ, 8 ಬೌಂಡರಿ, 3 ಸಿಕ್ಸರ್) ಅರ್ಧಶತಕದ ಕೊಡುಗೆ, ಎ.ಕೆ . ಖಾರೆ(ಔಟಾಗದೆ 45), ಆರಂಭಿಕ ಆಟಗಾರ ರಿಷಭ್ ತಿವಾರಿ(33)ಅಮೂಲ್ಯ ಕಾಣಿಕೆ ಸಹಾಯದಿಂದ 3 ವಿಕೆಟ್‌ಗೆ 171 ರನ್ ಗಳಿಸಿತು. ಕರ್ನಾಟಕದ ಪರ ಎಸ್.ಗೋಪಾಲ್(1-19),ಕೌಶಿಕ್(3-36) ಹಾಗೂ ಮಿಥುನ್(1-46) ತಲಾ ಒಂದು ವಿಕೆಟ್ ಪಡೆದರು.

ಸಹಾ ಶತಕ: ಬಂಗಾಳಕ್ಕೆ ಭರ್ಜರಿ ಜಯ

ಕಟಕ್,ಫೆ.27: ಭುಜನೋವಿನಿಂದ ಚೇತರಿಸಿಕೊಂಡು ಸಕ್ರಿಯ ಕ್ರಿಕೆಟಿಗೆ ವಾಪಸಾಗಿರುವ ವಿಕೆಟ್‌ಕೀಪರ್-ದಾಂಡಿಗ ವೃದ್ಧಿಮಾನ್ ಸಹಾ ಶತಕದ(129,62 ಎಸೆತ)ಬೆಂಬಲದಿಂದ ಬಂಗಾಳ ತಂಡ ಅರುಣಾಚಲ ಪ್ರದೇಶ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಗ್ರೂಪ್ ಪಂದ್ಯವನ್ನು 107 ರನ್‌ಗಳಿಂದ ಗೆದ್ದುಕೊಂಡಿದೆ.

ಸಹಾ ಶತಕದ ನೆರವಿನಿಂದ ಬಂಗಾಳ 6 ವಿಕೆಟ್‌ಗೆ 234 ರನ್ ಗಳಿಸಿದರೆ, ಅರುಣಾಚಲ 4 ವಿಕೆಟ್‌ಗೆ 127 ರನ್ ಗಳಿಸಲಷ್ಟೇ ಶಕ್ತವಾಯಿತು. ಸಹಾ ಟಿ-20 ಕ್ರಿಕೆಟ್‌ನಲ್ಲಿ 2ನೇ ಬಾರಿ ಶತಕ ಸಿಡಿಸಿದರು. 2014ರ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರಿನಲ್ಲಿ ನಡೆದ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರ ಶತಕ ಸಿಡಿಸಿದ್ದರು. ಇಂದು ಬಂಗಾಳದ ಪರ ಇನಿಂಗ್ಸ್ ಆರಂಭಿಸಿದ ಸಹಾ 62 ಎಸೆತಗಳನ್ನು ಎದುರಿಸಿ 16 ಬೌಂಡರಿ, 4 ಸಿಕ್ಸರ್‌ಗಳನ್ನು ಸಿಡಿಸಿದರು.

►ಮುಗ್ಗರಿಸಿದ ಮುಂಬೈ

ಸ್ಟಾರ್ ಆಟಗಾರರನ್ನು ಒಳಗೊಂಡ ಮುಂಬೈ ತಂಡ ರೈಲ್ವೇಸ್ ವಿರುದ್ಧ ಪಂದ್ಯವನ್ನು 57 ರನ್‌ಗಳಿಂದ ಸೋತಿದೆ. ಗೆಲ್ಲಲು 176 ರನ್ ಬೆನ್ನಟ್ಟಿದ ಮುಂಬೈ ತಂಡದ ಅಗ್ರ ಮೂವರು ಆಟಗಾರರಾದ ಪೃಥ್ವಿ ಶಾ, ಅಜಿಂಕ್ಯ ರಹಾನೆ ಹಾಗೂ ಶ್ರೇಯಸ್ ಅಯ್ಯರ್ 5 ಓವರ್‌ನೊಳಗೆ ವಿಕೆಟ್ ಒಪ್ಪಿಸಿದರು. 18.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡ ಮುಂಬೈ ಪರ ಸೂರ್ಯಕುಮಾರ ಯಾದವ್ ಅಗ್ರ ಸ್ಕೋರರ್(38) ಎನಿಸಿಕೊಂಡರು. ವೇಗದ ಬೌಲರ್ ಆಶೀಷ್ ಯಾದವ್ 4 ವಿಕೆಟ್‌ಗಳನ್ನು ಉರುಳಿಸಿದರು. ಮುಂಬೈ ಟೂರ್ನಿಯಲ್ಲಿ ಆಡಿದ 5ನೇ ಪಂದ್ಯದಲ್ಲಿ ಮೊದಲ ಸೋಲು ಕಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X