Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಿಲಿಟರಿ ನೆಲೆಗಳು ತನ್ನ ಗುರಿಯಾಗಿರಲಿಲ್ಲ...

ಮಿಲಿಟರಿ ನೆಲೆಗಳು ತನ್ನ ಗುರಿಯಾಗಿರಲಿಲ್ಲ ಎಂಬ ಪಾಕಿಸ್ತಾನದ ಹೇಳಿಕೆ ಸುಳ್ಳು: ರಕ್ಷಣಾ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ28 Feb 2019 7:19 PM IST
share
ಮಿಲಿಟರಿ ನೆಲೆಗಳು ತನ್ನ ಗುರಿಯಾಗಿರಲಿಲ್ಲ ಎಂಬ ಪಾಕಿಸ್ತಾನದ ಹೇಳಿಕೆ ಸುಳ್ಳು: ರಕ್ಷಣಾ ಅಧಿಕಾರಿಗಳು

ಹೊಸದಿಲ್ಲಿ,ಫೆ.28: ಬುಧವಾರ ಭಾರತೀಯ ವಾಯುಪ್ರದೇಶವನ್ನು ಅತಿಕ್ರಮಿಸಿದ್ದ ಸಂದರ್ಭದಲ್ಲಿ ಮಿಲಿಟರಿ ನೆಲೆಗಳು ತನ್ನ ವಾಯುಪಡೆಯ ಗುರಿಯಾಗಿರಲಿಲ್ಲ ಎಂಬ ಪಾಕಿಸ್ತಾನದ ಹೇಳಿಕೆಯನ್ನು ಭಾರತ ಸರಕಾರವು ಗುರುವಾರ ತಿರಸ್ಕರಿಸಿದೆ ಎಂದು ರಕ್ಷಣಾ ಸಚಿವಾಲಯದ ಅನಾಮಿಕ ಅಧಿಕಾರಿಗಳನ್ನು ಉಲ್ಲೇಖಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ಪಾಕಿಸ್ತಾನಿ ಯುದ್ಧವಿಮಾನಗಳು ನೌಶೇರಾ ಮತ್ತು ರಾಜೌರಿಯಲ್ಲಿನ ಹಲವಾರು ಮಿಲಿಟರಿ ನೆಲೆಗಳನ್ನು ಸ್ಪಷ್ಟವಾಗಿ ಗುರಿಯಾಗಿಸಿಕೊಂಡಿದ್ದವು,ಆದರೆ ಅವುಗಳ ಪ್ರಯತ್ನವನ್ನು ಭಾರತೀಯ ವಾಯುಪಡೆಯು ವಿಫಲಗೊಳಿಸಿತ್ತು ಎಂದು ಈ ಅಧಿಕಾರಿಗಳು ತಿಳಿಸಿದರು.

ಭದ್ರತಾ ಪಡೆಗಳ ಸಿಬ್ಬಂದಿಗಳಿಗೆ ನೀಡಲಾಗಿದ್ದ ರಜೆಯನ್ನು ರದ್ದುಗೊಳಿಸಲಾಗಿದೆ ಎಂಬ ವರದಿಗಳನ್ನು ನಿರಾಕರಿಸಿದ ಅವರು,ಆದರೆ ಪ್ರಮುಖ ಹುದ್ದೆಗಳಲ್ಲಿರುವ ಸಿಬ್ಬಂದಿಗಳ ರಜೆಗಳನ್ನು ಸೀಮಿತಗೊಳಿಸಲಾಗಿದೆ ಎಂದರು. ಪದಾತಿ ಪಡೆಗಳನ್ನು ಇನ್ನೂ ಕ್ರೋಡೀಕರಿಸಿಲ್ಲ,ಆದರೆ ಅಲ್ಪಾವಧಿ ಸೂಚನೆಗೆ ನಿಗದಿತ ಸ್ಥಳಕ್ಕೆ ತೆರಳಲು ಸಿಬ್ಬಂದಿಗಳು ಸನ್ನದ್ಧರಾಗಿದ್ದಾರೆ ಎಂದರು.

ಯುದ್ಧ ಮನೋಸ್ಥಿತಿಯನ್ನು ಸೃಷ್ಟಿಸುವ ಪಾಕಿಸ್ತಾನದ ಪ್ರಯತ್ನಗಳನ್ನು ಭಾರತವು ವಿಫಲಗೊಳಿಸಿದೆ ಎಂದು ಸರಕಾರದಲ್ಲಿನ ಮೂಲಗಳು ತಿಳಿಸಿದವು. ಭಾರತೀಯ ವಾಯುಪಡೆಯು ನಾಗರಿಕರನ್ನು ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿತ್ತು ಹಾಗೂ ಉದ್ದೇಶಪೂರ್ವಕವಾಗಿ ನಿಯಂತ್ರಣ ರೇಖೆಯನ್ನು ದಾಟಿತ್ತು ಎಂಬ ಹೇಳಿಕೆಗಳನ್ನೂ ಅವು ನಿರಾಕರಿಸಿದವು.

ಜೈಶೆ ಮುಹಮ್ಮದ್ ಕುರಿತು ಮತ್ತು ಇಬ್ಬರು ಭಾರತೀಯ ಪೈಲಟ್‌ಗಳು ತನ್ನ ವಶದಲ್ಲಿರುವ ಕುರಿತು ಪಾಕಿಸ್ತಾನವು ಅಂತರರಾಷ್ಟ್ರೀಯ ಸಮುದಾಯಕ್ಕೆ ಸುಳ್ಳು ಹೇಳುತ್ತಿದೆ ಎಂದು ಮೂಲಗಳು ಆರೋಪಿಸಿದವು.

ಪುಲ್ವಾಮಾ ದಾಳಿಯ ಕುರಿತು ಮಾಹಿತಿಗಳು ಮತ್ತು ಸಾಕ್ಷಾಧಾರಗಳನ್ನು ಭಾರತವು ಗುರುವಾರ ಪಾಕಿಸ್ತಾನಕ್ಕೆ ಹಸ್ತಾಂತರಿಸಿದೆ.

ಭಾರತದೊಂದಿಗೆ ಮಾತುಕತೆಗೆ ಮುನ್ನ ಪಾಕಿಸ್ತಾನವು ಭಯೋತ್ಪಾದಕರ ವಿರುದ್ಧ ತಕ್ಷಣದ ಮತ್ತು ವಿಶ್ವಾಸಾರ್ಹ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದ ಮೂಲಗಳು,ಭೀತಿವಾದದ ಕುರಿತು ಇಮ್ರಾನ್ ಖಾನ್ ಅವರು ಈಗ ಮಾತಿನಂತೆ ನಡೆದುಕೊಳ್ಳಬೇಕಿದೆ. ಇದು ಪಾಕಿಸ್ತಾನ ಮತ್ತು ಅಂತರರಾಷ್ಟ್ರೀಯ ಸಮುದಾಯಕ್ಕೆ ಭಾರತದ ಸಂದೇಶವಾಗಿದೆ ಎಂದು ತಿಳಿಸಿದವು.

ಗುರುವಾರ ಬೆಳಿಗ್ಗೆ ಪಾಕ್ ವಿದೇಶಾಂಗ ಸಚಿವ ಶಾ ಮಹಮೂದ್ ಕುರೇಷಿ ಅವರು,ಎಲ್ಲ ಧನಾತ್ಮಕ ಮಾತುಕತೆಗಳಿಗೆ ಸರಕಾರವು ಸಿದ್ಧವಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧರಿದ್ದರೆ ಅವರೊಂದಿಗೆ ಮಾತನಾಡಲು ಪ್ರಧಾನಿ ಇಮ್ರಾನ್ ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X