Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತಿ ಹನಿ ನೀರು ಸಂರಕ್ಷಣೆಯಾಗಲಿ:...

ಪ್ರತಿ ಹನಿ ನೀರು ಸಂರಕ್ಷಣೆಯಾಗಲಿ: ಮುಖ್ಯಮಂತ್ರಿ ಕುಮಾರಸ್ವಾಮಿ

ಜಲಾಮೃತ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Feb 2019 7:42 PM IST
share
ಪ್ರತಿ ಹನಿ ನೀರು ಸಂರಕ್ಷಣೆಯಾಗಲಿ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.28: ಪ್ರತಿ ಹನಿ ನೀರು ಅತ್ಯಮೂಲ್ಯ ಎಂಬ ಭಾವನೆ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ತಿಳಿಯುವಂತಾದಾಗ ಮಾತ್ರ ನೀರಿನ ಸಂರಕ್ಷಣೆ ಸಾಧ್ಯವೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಜಲಾಮೃತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಲ ಮಿಂಚಿ ಹೋಗುವ ಮುನ್ನ ನೀರನ್ನು ಸಂರಕ್ಷಿಸುವ ಕಡೆಗೆ ನಮ್ಮೆಲ್ಲರ ಗಮನವಿರಲಿ ಎಂದು ಹೇಳಿದರು.

ಮುಂದೊಂದು ದಿನ ನೀರಿಗಾಗಿ ಯುದ್ಧ ನಡೆಯಬಹುದೆಂಬ ಮಾತುಗಳು ಕೇಳಿ ಬರುತ್ತಿವೆ. ಅಷ್ಟರ ಮಟ್ಟಿಗೆ ಭೂಮಿಯ ಮೇಲೆ ನೀರಿನ ಅಭಾವ ಕಾಣಿಸಿಕೊಳ್ಳಬಹುದೆಂದು ಊಹಿಸಲಾಗಿದೆ. ನದಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯ ರಾಜ್ಯಗಳ ನಡುವೆ ಸಂಘರ್ಷಗಳು ನಡೆಯುತ್ತಿವೆ. ಹೀಗಾಗಿ ನೀರಿನ ಪ್ರಾಮುಖ್ಯತೆಯನ್ನು ಎಲ್ಲರು ಮನಗಾಣಬೇಕೆಂದು ಅವರು ಹೇಳಿದರು.

ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅತಿ ಹೆಚ್ಚು ಚೆಕ್ ಡ್ಯಾಂಗಳನ್ನು ನಿರ್ಮಿಸುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಕೋಟಿ ರೂ.ಬಹುಮಾನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ನೀರಿನ ಮಹತ್ವದ ಬಗ್ಗೆ ಕೋಲಾರ, ಚಿಕ್ಕಬಳ್ಳಾರಪುರ ಜಿಲ್ಲೆಗಳ ಜನತೆಗೆ ಗೊತ್ತಿರುವಷ್ಟು ಇತರೆ ಜಿಲ್ಲೆಯ ಜನತೆಗೆ ಗೊತ್ತಿಲ್ಲ. ನೀರಿನ ಕೊರತೆಯ ನಡುವೆಯು ಅಲ್ಲಿನ ರೈತರು ಉತ್ತಮ ಬೆಳೆಗಳನ್ನು ಬೆಳೆದು ಸ್ವಾಭಿಮಾನದ ಜೀವನ ನಡೆಸುತ್ತಿದ್ದಾರೆ. ಈ ಭಾಗದ ಯಾವ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಸತತ ಬರಗಾಲದಿಂದಾಗಿ ಕರ್ನಾಟಕದಲ್ಲಿ ಜಲಕ್ಷಾಮ ತಲೆದೋರಿದೆ. ಹೀಗಾಗಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಲಾಮೃತ ಯೋಜನೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಜಲ ಸಾಕ್ಷರತೆ, ಜಲ ಸಂರಕ್ಷಣೆ, ಜಲ ಪ್ರಜ್ಞೆ ಮತ್ತು ಹಸಿರೀಕರಣ ಈ ಅಂಶಗಳನ್ನಿಟ್ಟು ಜಲಾಮೃತ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ವೇಳೆ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರರಿದ್ದರು.

ಅಂತರ್‌ಜಲ ಸಂರಕ್ಷಿಸುವುದಕ್ಕಾಗಿ ನದಿ ಹಾಗೂ ನೀರು ಹರಿಯುವ ಕಾಲುವೆಗಳ ಸಮೀಪ ಬೋರ್‌ವೆಲ್ ಹಾಕುವುದನ್ನು ನಿಷೇಧಿಸಲು ಕಾಯ್ದೆ ಜಾರಿಗೊಳಿಸುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ.

-ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X