Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಂಡಿನೋವು ಶಮನಕ್ಕೆ ಇಲ್ಲಿವೆ ಸರಳ...

ಮಂಡಿನೋವು ಶಮನಕ್ಕೆ ಇಲ್ಲಿವೆ ಸರಳ ಉಪಾಯಗಳು

ವಾರ್ತಾಭಾರತಿವಾರ್ತಾಭಾರತಿ28 Feb 2019 7:49 PM IST
share
ಮಂಡಿನೋವು ಶಮನಕ್ಕೆ ಇಲ್ಲಿವೆ ಸರಳ ಉಪಾಯಗಳು

ನಮ್ಮ ಒತ್ತಡದ ಬದುಕಿನಲ್ಲಿ ನಾವು ಆಗಾಗ್ಗೆ ಒಂದಲ್ಲ ಒಂದು ಕಾಯಿಲೆಗೆ ಗುರಿಯಾಗುತ್ತಲೇ ಇರುತ್ತೇವೆ. ಮಂಡಿನೋವು ಇವುಗಳಲ್ಲಿ ಒಂದಾಗಿದೆ. ಮಂಡಿನೋವಿಗೆ ಹಲವಾರು ಕಾರಣಗಳಿವೆ. ಉಳುಕು,ಮೂಳೆಗೆ ಪೆಟ್ಟು,ಗಾಯ ಅಥವಾ ಸಂಧಿವಾತದಂತಹ ಗಂಭೀರ ಸಮಸ್ಯೆ ಮಂಡಿನೋವನ್ನುಂಟು ಮಾಡುತ್ತವೆ. ಸಂದುಗಳು ಮತ್ತು ಮೂಳೆಗಳಲ್ಲಿ ಉರಿಯೂತ ಪ್ರಮುಖವಾಗಿ ಸಂಧಿವಾತದಿಂದ ನರಳುತ್ತಿರುವವರನ್ನು ಕಾಡುತ್ತದೆ. ಕೆಲವು ಸರಳ ಉಪಾಯಗಳಿಂದ ಮಂಡಿನೋವಿಗೆ ಶಮನವನ್ನು ಕಂಡುಕೊಳ್ಳಬಹುದಾಗಿದೆ.

► ಬಿಸಿ ಮತ್ತು ತಂಪು ಚಿಕಿತ್ಸೆ

ಹೀಟಿಂಗ್ ಪ್ಯಾಡ್ ಬಳಕೆಯು ಮಂಡಿಯ ಕೀಲು ಪೆಡಸಾಗುವುದನ್ನು ತಪ್ಪಿಸುತ್ತದೆ ಮತ್ತು ನೋವನ್ನು ಕಡಿಮೆ ಮಾಡುತ್ತದೆ. ತಂಪು ಜೆಲ್ ಹೊಂದಿರುವ ಪ್ಯಾಕ್ ನೋವಿನಿಂದ ಮುಕ್ತಿ ನೀಡುತ್ತದೆ ಮತ್ತು ಊತವನ್ನು ಕಡಿಮೆ ಮಾಡುತ್ತದೆ. ಐಸ್‌ಪ್ಯಾಕ್,ಹಾಟ್ ಪ್ಯಾಕ್,ಇಲೆಕ್ಟ್ರಿಕ್ ಬ್ಲಾಂಕೆಟ್‌ಗಳನ್ನೂ ಬಳಸಬಹುದಾಗಿದೆ. ರಬ್ಬರ್ ಬ್ಯಾಗ್‌ಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಬಿಸಿನೀರು ಅಥವಾ ತಂಪು ನೀರನ್ನು ತುಂಬಿಯೂ ಬಳಸಬಹುದು.

► ಶುಂಠಿಯ ಸಾರ

ಶುಂಠಿಯು ತನ್ನ ಆರೋಗ್ಯಲಾಭಗಳಿಗಾಗಿ ಖ್ಯಾತವಾಗಿದೆ ಮತ್ತು ಸುದೀರ್ಘ ಕಾಲದಿಂದಲೂ ಆಯುರ್ವೇದದಲ್ಲಿ ಔಷಧಿಯ ರೂಪದಲ್ಲಿ ಬಳಕೆಯಾಗುತ್ತಿದೆ. ಹಸಿ ಶುಂಠಿಯನ್ನು ತಿಂದರೆ ಅದರಲ್ಲಿರುವ ಉರಿಯೂತ ನಿರೋಧಕ ಗುಣಗಳು ಹೊಟ್ಟೆನೋವು ಅಥವಾ ಸಂಧಿವಾತದ ನೋವನ್ನು ಶಮನಗೊಳಿಸುತ್ತವೆ.

► ಆ್ಯಪಲ್ ಸಿಡರ್ ವಿನೆಗರ್

ಮಂಡಿನೋವನ್ನು ತಗ್ಗಿಸುವಲ್ಲಿ ಆ್ಯಪಲ್ ಸಿಡರ್ ವಿನೆಗರ್ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಅದರ ಕ್ಷಾರೀಯ ಪರಿಣಾಮವು ಬಿಗಿದುಕೊಂಡ ಸ್ನಾಯುಗಳನ್ನು ಮೃದುಗೊಳಿಸುತ್ತದೆ ಮತ್ತು ಚಲನವಲನವನ್ನು ಉತ್ತಮಗೊಳಿಸುತ್ತದೆ. ರಾತ್ರಿ ಮಲಗುವ ಮನ್ನ ಆ್ಯಪಲ್ ಸಿಡರ್ ವಿನೆಗರ್‌ನ್ನು ನೀರಿನೊಂದಿಗೆ ಬೆರೆಸಿಕೊಂಡು ಸೇವಿಸಬಹುದು ಅಥವಾ ತೆಂಗಿನೆಣ್ಣೆಯೊಂದಿಗೆ ಸೇರಿಸಿ ಪೀಡಿತ ಭಾಗದ ಮೇಲೆ ಲೇಪಿಸಿಕೊಳ್ಳಬಹುದು.

► ಸಾಸಿವೆ ಎಣ್ಣೆ

ಸಾಸಿವೆ ಎಣ್ಣೆಯಿಂದ ಮಂಡಿಯನ್ನು ಮೃದುವಾಗಿ ಮಸಾಜ್ ಮಾಡುವುದು ಅದ್ಭುತ ಪರಿಣಾಮವನ್ನು ನೀಡುತ್ತದೆ. ಇದು ಹಿತವಾದ ಅನುಭವವನ್ನು ನೀಡುವ ಜೊತೆಗೆ ನೋವಿನಿಂದ ಕಿರಿಕಿರಿಯನ್ನು ತಗ್ಗಿಸುತ್ತದೆ. ಮಸಾಜ್ ರಕ್ತದ ಪರಿಚಲನೆಯನ್ನು ಹೆಚ್ಚಿಸುತ್ತದೆ ಹಾಗೂ ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.

► ಆ್ಯಕ್ಯುಪಂಕ್ಚರ್

ಊತವನ್ನು ಮತ್ತು ಮಂಡಿನೋವನ್ನು ಕಡಿಮೆಗೊಳಿಸಲು ಆ್ಯಕ್ಯುಪಂಕ್ಚರ್ ಪರಿಣಾಮಕಾರಿ ವಿಧಾನವಾಗಿದೆ. ಕೆಲವು ಸಲ ಆ್ಯಕ್ಯುಪಂಕ್ಚರ್ ಚಿಕಿತ್ಸೆ ಮಾಡಿಸಿಕೊಳ್ಳುವುದರಿಂದ ಸಂಧಿವಾತ ಮತ್ತು ನೋವಿನಿಂದ ಉಂಟಾದ ಊತದಿಂದ ಶಮನವನ್ನು ಪಡೆಯಬಹುದು. ಇದು ಇತರ ರೀತಿಗಳಲ್ಲೂ ಆರೋಗ್ಯಲಾಭಗಳನ್ನು ನೀಡುವ ಅಪಾಯರಹಿತ ಚಿಕಿತ್ಸೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X