Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ರೋಲ್‌ಗಳಿಗೆ ಎದೆಗುಂದದ ಮೃತ...

ಟ್ರೋಲ್‌ಗಳಿಗೆ ಎದೆಗುಂದದ ಮೃತ ಸಿಆರ್‌ಪಿಎಫ್ ಯೋಧನ ಪತ್ನಿಯಿಂದ ಶಾಂತಿಗಾಗಿ ಮನವಿ

ವಾರ್ತಾಭಾರತಿವಾರ್ತಾಭಾರತಿ28 Feb 2019 8:50 PM IST
share
ಟ್ರೋಲ್‌ಗಳಿಗೆ ಎದೆಗುಂದದ ಮೃತ ಸಿಆರ್‌ಪಿಎಫ್ ಯೋಧನ ಪತ್ನಿಯಿಂದ ಶಾಂತಿಗಾಗಿ ಮನವಿ

ಕೊಲ್ಕತಾ,ಫೆ.28: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಶಾಂತಿಗಾಗಿ ಮನವಿ ಮಾಡಿದ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಗಳಿಗೆ ಎದೆಗುಂದದ ಮೃತ ಸಿಆರ್‌ಪಿಎಫ್ ಯೋಧನ ಪತ್ನಿ ಉಭಯ ರಾಷ್ಟ್ರಗಳು ಮಾತುಕತೆ ನಡೆಸಬೇಕು ಎಂಬ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಕಾಶ್ಮೀರದ ಪುಲ್ವಾಮದಲ್ಲಿ ಫೆಬ್ರವರಿ 14ರಂದು ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೃತಪಟ್ಟ 40 ಸಿಆರ್‌ಪಿಎಫ್ ಯೋಧರ ಪೈಕಿ ಮಿತಾ ಸಂತ್ರರ ಪತಿ ಬಬ್ಲು ಸಂತ್ರ ಕೂಡಾ ಒಬ್ಬರಾಗಿದ್ದಾರೆ. ತನ್ನ ಯುದ್ಧ ವಿರೋಧಿ ನಿಲುವಿಗೆ ಸಾಮಾಜಿಕ ಮಾಧ್ಯಮದಲ್ಲಿ ಬರುತ್ತಿರುವ ಟೀಕೆಗಳ ಬಗ್ಗೆ ತಾನು ಚಿಂತಿತಳಾಗಿಲ್ಲ ಎಂದು ತಿಳಿಸಿರುವ ಮಿತಾ, ಬುಧವಾರ ಪಾಕಿಸ್ತಾನ ಬಂಧಿಸಿರುವ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಯುದ್ಧದಿಂದ ಇನ್ನಷ್ಟು ಜೀವಗಳು ಬಲಿಯಾಗುತ್ತವೆ. ಹಾಗಾಗಿ ಮಾತುಕತೆಗೂ ನಾವು ಒಂದು ಅವಕಾಶ ನೀಡಬೇಕು ಎಂದು ಮಿತಾ ತಿಳಿಸಿದ್ದಾರೆ. ಆತ್ಮಹತ್ಯಾ ದಾಳಿಯಲ್ಲಿ ತನ್ನ ಪತಿ ಸಾವನ್ನಪ್ಪಿದ್ದರೂ ಮತ್ತು ಈ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಬೇಕೆಂಬ ಆಗ್ರಹಗಳು ಕೇಳಿಬಂದರೂ ಮಿತಾ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಯುದ್ಧವು ಎರಡೂ ದೇಶಗಳ ಇನ್ನಷ್ಟು ಜೀವಗಳನ್ನು ಬಲಿಪಡೆಯುತ್ತದೆ. ಇದರಿಂದ ಇನ್ನಷ್ಟು ಮಹಿಳೆಯರು ವಿಧವೆಯರಾಗುತ್ತಾರೆ, ಹೆತ್ತವರು ಮಕ್ಕಳನ್ನು ಕಳೆದುಕೊಳ್ಳುತ್ತಾರೆ ಮತ್ತು ಮಕ್ಕಳು ಅನಾಥರಾಗುತ್ತಾರೆ ಎಂದು ಮಿತಾ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವ ಟೀಕೆಗಳಿಂದ ನನಗೇನೂ ಬೇಸರವಾಗಿಲ್ಲ. ಫೆಬ್ರವರಿ 14ರ ನಂತರ ನನ್ನನ್ನು ಯಾವ ವಿಷಯಗಳೂ ಬಾಧಿಸುವುದಿಲ್ಲ. ಯಾರು ಏನು ಬೇಕಾದರೂ ಹೇಳಬಹುದು. ನನಗೆ ಚಿಂತೆಯಿಲ್ಲ ಎಂದು ಮಿತಾ ತಿಳಿಸಿದ್ದಾರೆ. ನನ್ನನ್ನು ಟೀಕಿಸುವ ಜನರ ಮನೆಯ ಯಾರಾದರೂ ಒಬ್ಬ ಸದಸ್ಯ ಸಶಸ್ತ್ರಪಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆಯೇ. ಸಶಸ್ತ್ರಪಡೆಗಳ ಯೋಧರು ಯುದ್ಧದಲ್ಲಿ ಪ್ರಾಣತ್ಯಾಗ ಮಾಡುವುದು ಸ್ವಾಭಾವಿಕವಾಗಿರಬಹುದು. ಆದರೆ ಅವರ ಸುರಕ್ಷತೆಯನ್ನು ಭಾರತ ಸರಕಾರ ಖಾತರಿಪಡಿಸಿಕೊಳ್ಳಬೇಕು ಎಂದು ಮಿತಾ ಅಭಿಪ್ರಾಯಿಸಿದ್ದಾರೆ. ಸ್ನಾತಕೋತರ ಪದವೀಧರೆಯಾಗಿರುವ ಮಿತಾ ಅವರು ಸದ್ಯ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿಯಾಗಿದ್ದು ಸಿಆರ್‌ಪಿಎಫ್‌ನಲ್ಲಿ ಉದ್ಯೋಗಾವಕಾಶ ದೊರಕಿದೆ. ಆದರೆ ಈ ಬಗ್ಗೆ ಸದ್ಯ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X