Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರ್ನಾಟಕಕ್ಕೆ ಸುಲಭ ತುತ್ತಾದ ಒಡಿಶಾ

ಕರ್ನಾಟಕಕ್ಕೆ ಸುಲಭ ತುತ್ತಾದ ಒಡಿಶಾ

ಸೆಯದ್ ಮುಷ್ತಾಕ್ ಅಲಿ ಟ್ವೆಂಟಿ-20 ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ28 Feb 2019 11:38 PM IST
share
ಕರ್ನಾಟಕಕ್ಕೆ ಸುಲಭ ತುತ್ತಾದ ಒಡಿಶಾ

ಕಟಕ್,ಫೆ.28: ಧಾರವಾಡದ ದಾಂಡಿಗ ರೋಹನ್ ಕದಮ್(89, 59 ಎಸೆತ, 10 ಬೌಂಡರಿ, 2 ಸಿಕ್ಸರ್)ಭರ್ಜರಿ ಶತಕಾರ್ಧ,ಕೆ.ಸಿ. ಕಾರಿಯಪ್ಪ(4-15), ವಿ.ಕೌಶಿಕ್(3-8) ಹಾಗೂ ಸುಚಿತ್(2-27)ಸಂಘಟಿತ ದಾಳಿಯ ಸಹಾಯದಿಂದ ಕರ್ನಾಟಕ ತಂಡ ಒಡಿಶಾ ವಿರುದ್ಧ ಗುರುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ-20 ಟೂರ್ನಿಯ ‘ಡಿ’ ಗುಂಪಿನ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.

ಗೆಲ್ಲಲು 156 ರನ್ ಗುರಿ ಪಡೆದಿದ್ದ ಒಡಿಶಾ, ಕಾರಿಯಪ್ಪ ನೇತೃತ್ವದ ಕರ್ನಾಟಕದ ಶಿಸ್ತುಬದ್ಧ ಬೌಲಿಂಗ್‌ಗೆ ಕಂಗಾಲಾಗಿ 18.1 ಓವರ್‌ಗಳಲ್ಲಿ 104 ರನ್‌ಗೆ ಆಲೌಟಾಯಿತು. 51 ರನ್‌ಗಳಿಂದ ಸೋಲುಂಡಿತು.

ಈ ಗೆಲುವಿನೊಂದಿಗೆ ಕರ್ನಾಟಕ ಟೂರ್ನಿಯಲ್ಲಿ ಸತತ 6ನೇ ಗೆಲುವು ದಾಖಲಿಸಿ ಅಜೇಯ ಗೆಲುವಿನ ಓಟ ಮುಂದುವರಿಸಿದೆ. ಮನೀಷ್ ಪಾಂಡೆ ಬಳಗ 6 ಪಂದ್ಯಗಳಲ್ಲಿ 24 ಅಂಕ ಗಳಿಸಿ ‘ಡಿ ’ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಭದ್ರಪಡಿಸಿಕೊಂಡಿದೆ. ಒಡಿಶಾದ ಪರ ಕೆಳ ಕ್ರಮಾಂಕದಲ್ಲಿ ಎಸ್‌ಬಿ ಪ್ರಧಾನ್(32)ಗರಿಷ್ಠ ಸ್ಕೋರ್ ಗಳಿಸಿದರು. ಪ್ರಯಾಶ್ ಸಿಂಗ್(12), ನಾಯಕ ಸಾರಂಗಿ(12) ಹಾಗೂ ಡಿಬಿ ಪ್ರಧಾನ್(13) ಎರಡಂಕೆಯ ಸ್ಕೋರ್ ಗಳಿಸಿದರು.

ಮೊದಲ ಓವರ್‌ನ 4ನೇ ಎಸೆತದಲ್ಲಿ ಆರಂಭಿಕ ಆಟಗಾರ ಧೂಪರ್(0) ವಿಕೆಟನ್ನು ಕಳೆದುಕೊಂಡ ಒಡಿಶಾ ಯಾವ ಹಂತದಲ್ಲೂ ಹೋರಾಟ ನೀಡದೇ ಸುಲಭವಾಗಿ ಶರಣಾಯಿತು. ಪ್ರಧಾನ್ ಹಾಗೂ ಪ್ರಯಾಶ್ ಸಿಂಗ್ ತಂಡ 44 ರನ್‌ಗೆ 6 ವಿಕೆಟ್ ಕಳೆದುಕೊಂಡ ಸಂದರ್ಭದಲ್ಲಿ 7ನೇ ವಿಕೆಟ್‌ಗೆ 44 ರನ್ ಜೊತೆಯಾಟ ನಡೆಸಿದ್ದು ಬಿಟ್ಟರೆ ಎಲ್ಲಿಯೂ ಕೂಡ ಒಡಿಶಾ ಪ್ರತಿರೋಧ ಒಡ್ಡಲಿಲ್ಲ.

ಕರ್ನಾಟಕ 155/9: 

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕರ್ನಾಟಕ ನಿಗದಿತ 20 ಓವರ್‌ಗಳಲ್ಲಿ 155 ರನ್‌ಗೆ 9 ವಿಕೆಟ್‌ಗಳನ್ನು ಕಳೆದುಕೊಂಡಿತು. ಆರಂಭಿಕ ಆಟಗಾರ ರೋಹನ್ ಹೊರತುಪಡಿಸಿ ಬೇರ್ಯಾವ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವ ಗೋಜಿಗೆ ಹೋಗಲಿಲ್ಲ. ‘ಒನ್ ಮ್ಯಾನ್ ಶೋ ’ ಪ್ರದರ್ಶಿಸಿದ ರೋಹನ್ ಏಕಾಂಗಿಯಾಗಿ ಕರ್ನಾಟಕ ಉತ್ತಮ ಮೊತ್ತ ಗಳಿಸಲು ನೆರವಾದರು. ಕರ್ನಾಟಕದ ಪರ ಎಸ್.ಗೋಪಾಲ್(17), ಮಾಯಾಂಕ್ ಅಗರ್ವಾಲ್(10), ಕರುಣ್ ನಾಯರ್(10)ಎರಡಂಕೆಯ ಸ್ಕೋರ್ ಗಳಿಸಿದರು ನಾಯಕ ಮನೀಷ್ ಪಾಂಡೆ(8), ಶರತ್(1), ಸುಚಿತ್(0), ವಿನಯಕುಮಾರ್(6) ದೊಡ್ಡ ಮೊತ್ತ ಗಳಿಸಲು ವಿಫಲರಾದರು.

ಒಡಿಶಾ ಪರ ಸಮಂಟ್ರೆ(2-10) ಹಾಗೂ ಪಪ್ಪು ರಾಯ್(2-21)ತಲಾ ಎರಡು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X