Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಅನಧಿಕೃತ ವಾಹನ ಪಾರ್ಕಿಂಗ್...

ಮಂಗಳೂರು: ಅನಧಿಕೃತ ವಾಹನ ಪಾರ್ಕಿಂಗ್ ಮಾಡಿದರೆ ದಂಡ ಕಟ್ಟಿಟ್ಟ ಬುತ್ತಿ !

ಟೋಯಿಂಗ್ ವಾಹನ ಬಳಕೆ

ವಾರ್ತಾಭಾರತಿವಾರ್ತಾಭಾರತಿ1 March 2019 8:24 PM IST
share
ಮಂಗಳೂರು: ಅನಧಿಕೃತ ವಾಹನ ಪಾರ್ಕಿಂಗ್ ಮಾಡಿದರೆ ದಂಡ ಕಟ್ಟಿಟ್ಟ ಬುತ್ತಿ !

ಮಂಗಳೂರು, ಮಾ.1: ನಗರದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಅನಧಿಕೃತವಾಗಿ ವಾಹನಗಳನ್ನು ನಿಲುಗಡೆ ಮಾಡಿದರೆ ದಂಡ ಕಟ್ಟಿಟ್ಟ ಬುತ್ತಿಯಾಗಿದೆ. ರಸ್ತೆ ಬದಿ ನೋ ಪಾರ್ಕಿಂಗ್ ಸ್ಥಳದಲ್ಲಿ ಮತ್ತು ಪಾರ್ಕಿಂಗ್ ಜಾಗದಲ್ಲಿಯೂ ಅನಧಿಕೃತವಾಗಿ ನಿಲ್ಲಿಸುವ ವಾಹನಗಳನ್ನು ಎತ್ತಿ ಕೊಂಡೊಯ್ಯುವ ಟೋಯಿಂಗ್ ವಾಹನವು ಮಾ. 2ರಿಂದ ಕಾರ್ಯಾಚರಿಸಲಿದೆ.

ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ ನಾಲ್ಕು ಟ್ರಾಫಿಕ್ ಪೊಲೀಸ್ ಠಾಣೆಗಳಿಗೆ (ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ) ತಲಾ ಒಂದು ಟೋಯಿಂಗ್ ವಾಹನ ಹೊಂದಲು 4 ಟೋಯಿಂಗ್ ವಾಹನಗಳಿಗೆ ಟೆಂಡರ್ ಆಹ್ವಾನಿಸಲಾಗಿತ್ತು. ಇದೀಗ ಒಂದು ಟೋಯಿಂಗ್ ವಾಹನ ಬಂದಿದೆ. ಹೊರ ಗುತ್ತಿಗೆ ಆಧಾರದಲ್ಲಿ ಇದು ಕಾರ್ಯನಿರ್ವಹಿಸಲಿದೆ.

ರಸ್ತೆ ಬದಿ ಎಲ್ಲೆಂದರಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡುವ ವಾಹನಗಳನ್ನು ಈ ಟೋಯಿಂಗ್ ವಾಹನದಲ್ಲಿ ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗುವುದು. ವಾಹನ ಮಾಲಕ/ ಚಾಲಕರು ನಿಗದಿತ ದಂಡ ಶುಲ್ಕ ಪಾವತಿಸಿ ವಾಹನವನ್ನು ಬಿಡಿಸಿಕೊಳ್ಳಬೇಕಿದೆ. ಶುಕ್ರವಾರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದರು.

ದಂಡ ಶುಲ್ಕ

ಭಾರೀ ವಾಹನಗಳಿಗೆ 1,600 ರೂ.
ಮಧ್ಯಮ ವಾಹನಗಳಿಗೆ 1,350 ರೂ.
ಲಘು ವಾಹನಗಳಿಗೆ 1,100 ರೂ.
ದ್ವಿಚಕ್ರ ವಾಹನಗಳಿಗೆ 750 ರೂ.

‘ಸಾಗರ್’ ವಾಹನ ಟ್ರ್ಯಾಕ್ ಮಾಡಲು ಜಿಪಿಎಸ್ ವ್ಯವಸ್ಥೆ

ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ ‘ಸಾಗರ್’ ವಾಹನಗಳ ಚಲನವಲನವನ್ನು ಪೊಲೀಸ್ ಕಮಿಷನರ್ ತನ್ನ ಕಾರ್ಯಾಲಯದಲ್ಲೇ ಕುಳಿತು ಟ್ರ್ಯಾಕ್ ಮಾಡಲು ಅನುಕೂಲವಾಗುವಂತೆ ಜಿಪಿಎಸ್ ನ್ನು ಆಯುಕ್ತಾಲಯ ಕಚೇರಿಯಲ್ಲಿ ಅಳವಡಿಸಲಾಗಿದೆ.

ಕಮಿಷನರೆಟ್ ವ್ಯಾಪ್ತಿಯಲ್ಲಿ 25 ‘ಸಾಗರ್’ ವಾಹನಗಳಿದ್ದು, ಅವುಗಳು ಎಲ್ಲೆಲ್ಲಿ ಕಾರ್ಯ ನಿರ್ವಹಿಸುತ್ತವೆ ಎನ್ನುವ ಬಗ್ಗೆ ಮಾಹಿತಿ ಈ ಜಿಪಿಎಸ್‌ನಲ್ಲಿ ಲಭ್ಯವಿದೆ. ತುರ್ತು ಸಂದರ್ಭಗಳಲ್ಲಿ ವಾಹನ ಚಾಲಕರಿಗೆ ಸೂಕ್ತ ನಿರ್ದೇಶನವನ್ನು ನೀಡಲು ಕೂಡ ಈ ವ್ಯವಸ್ಥೆಯಿಂದ ಸುಲಭ ಸಾಧ್ಯವಾಗಲಿದೆ ಎಂದು ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X