Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟ್ಟಡ ಕಾರ್ಮಿಕರ ನಿರ್ಲಕ್ಷ ಆರೋಪ:...

ಕಟ್ಟಡ ಕಾರ್ಮಿಕರ ನಿರ್ಲಕ್ಷ ಆರೋಪ: ಕರಂದ್ಲಾಜೆ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 March 2019 9:50 PM IST
share
ಕಟ್ಟಡ ಕಾರ್ಮಿಕರ ನಿರ್ಲಕ್ಷ ಆರೋಪ: ಕರಂದ್ಲಾಜೆ ವಿರುದ್ಧ ಆಕ್ರೋಶ

ಉಡುಪಿ, ಮಾ.1: ಕೇಂದ್ರ ಸರಕಾರ ಕಟ್ಟಡ ಕಾರ್ಮಿಕರ 1996 ಕಾನೂನು ರದ್ದುಗೊಳಿಸಿ ಸಾಮಾಜಿಕ ಸುರಕ್ಷಾ ಮಸೂದೆ ಜಾರಿ ಮಾಡಲುದ್ದೇಶಿಸಿರುವ ಕ್ರಮವನ್ನು ವಿರೋಧಿಸಿ ಮನವಿ ಸಲ್ಲಿಸಲು ಕಚೇರಿಗೆ ಇಂದು ಹೋಗಿದ್ದ ಕಟ್ಟಡ ಕಾರ್ಮಿಕರನ್ನು ಸಂಸದೆ ಶೋಭಾ ಕರಂದ್ಲಾಜೆ ನಿರ್ಲಕ್ಷಿಸಿದ್ದಾರೆಂದು ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಆರೋಪಿಸಿದೆ.

ಫೆ.28ರಂದು ಕಟ್ಟಡ ಕಾರ್ಮಿಕರು ಮಣಿಪಾಲದ ರಜತಾದ್ರಿಯಲ್ಲಿರುವ ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ನೀಡಿದ್ದರು. ಈ ವೇಳೆ ಸಂಸದರ ಸಹಾಯಕ ಮಾ.1ರಂದು ಸಂಸದರ ಜೊತೆ ಮಾತುಕತೆ ನಡೆಸಲು ಸಮಯ ನಿಗದಿ ಮಾಡಿ, ಸಂಸದರಿಗೆ ಮನವರಿಕೆ ಮಾಡಲು ಕಛೇರಿಗೆ ಬರಲು ಸಂಘದ ಪಧಾಧಿಕಾರಿಗಳನ್ನು ಆಹ್ವಾನಿಸಿದ್ದರು.

‘ಅದರಂತೆ ಇಂದು ಅವರ ಕಛೇರಿಗೆ ತೆರಳಿದಾಗ ಸಂಸದರು ನಮ್ಮ ಜತೆ ಗಡಿಬಿಡಿಯಲ್ಲಿ ನಿಂತು ಮಾತನಾಡಿ, ಎಲ್ಲವೂ ಚುನಾವಣೆ ಆದ ಮೇಲೆ ನೋಡೋಣ ಎಂದು ಕಟ್ಟಡ ಕಾರ್ಮಿಕರ ಪರ ಸ್ವಲ್ಪವೂ ಕಾಳಜಿ ವಹಿಸದೆ ಹೋಗಿರುವುದು ಖಂಡನೀಯ. ಕಟ್ಟಡ ಕಾರ್ಮಿಕರನ್ನು ನಿರ್ಲಕ್ಷ ಮಾಡುವ ಜನಪ್ರತಿನಿಧಿ ಹಾಗೂ ಸರಕಾರಗಳಿಗೆ ಕಾರ್ಮಿಕರೇ ಚುನಾವಣೆಯಲ್ಲಿ ಬುದ್ಧಿ ಕಲಿಸುತ್ತಾರೆ. ಕಟ್ಟಡ ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಕಸಿದುಕೊಳ್ಳಲು ಕಾನೂನು ತಿದ್ದುಪಡಿ ಮಾಡಲು ಹೊರಟಿರುವ ಮೋದಿಗೆ ಧಿಕ್ಕಾರವಿರಲಿ’ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜ.8 ಮತ್ತು 9ರಂದು ಕಾರ್ಮಿಕ ಕಾನೂನು ತಿದ್ದುಪಡಿ ವಿರುದ್ದ ಸಾರ್ವತ್ರಿಕ ಮುಷ್ಕರ ಮಾಡಿದಾಗಲೂ ಮಾತುಕತೆ ಕರೆಯದ ಸರಕಾರ, ಮತ್ತೆ ಅಧಿಕಾರಕ್ಕೆ ಬಂದರೆ ಕಾರ್ಮಿಕ ವರ್ಗದ ಹಕ್ಕು ಉಳಿಯಲಾರದು. ಈ ಹಿಂದಿನ ಎಲ್ಲಾ 17 ಮಷ್ಕರದಲ್ಲಿಯೂ ಕಾರ್ಮಿಕ ಸಂಘಟನೆಗಳನ್ನು ಮಾತುಕತೆಗೆ ಕರೆದ ಇತಿಹಾಸವಿದೆ. ಆದರೆ ಮೋದಿ ಸರಕಾರದ ನೀತಿ ಬಹಳಷ್ಟು ಅಪಾಯಕಾರಿ ಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಅಧ್ಯಕ್ಷ ಯು.ದಾಸ ಭಂಡಾರಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕೋಶಾಧಿಕಾರಿ ಜಗದೀಶ್ ಆಚಾರ್ ಹೆಮ್ಮಾಡಿ, ಉಪಾಧ್ಯಕ್ಷ ಸಂತೋಷ ಹೆಮ್ಮಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X