Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಳಪೆ ಆಹಾರ ಕೊಡಿಸಿ ಲಾಭಮಾಡಿಕೊಳ್ಳುವ...

ಕಳಪೆ ಆಹಾರ ಕೊಡಿಸಿ ಲಾಭಮಾಡಿಕೊಳ್ಳುವ ಬಸ್ಸಿನವರು

ತಾರಾನಾಥ್ ಮೇಸ್ತ ಶಿರೂರುತಾರಾನಾಥ್ ಮೇಸ್ತ ಶಿರೂರು1 March 2019 11:43 PM IST
share

ಮಾನ್ಯರೇ,

ಕರ್ನಾಟಕ ಸರಕಾರದ ರಸ್ತೆ ಸಾರಿಗೆ ಇಲಾಖೆಯ ರಾಜಹಂಸ, ಐರಾವತ, ವೇಗದೂತ ಮೊದಲಾದ ಬಸ್ಸುಗಳು ಪ್ರತಿ ಜಿಲ್ಲಾ, ತಾಲೂಕು ಕೇಂದ್ರಗಳಿಂದ ದೂರ ದೂರದ ಊರುಗಳಿಗೆ ಸಂಚರಿಸುತ್ತವೆ. ಪ್ರಯಾಣವು ದೀರ್ಘವಾದುದರಿಂದ, ತಿಂಡಿಯ ಊಟದ ಸಮಯದಲ್ಲಿ, ಬಸ್ಸಿನ ಚಾಲಕರು, ಸಂಚಾರದ ಹಾದಿಯಲ್ಲಿ ಸಿಗುವ ಊರಿನ ಹೊಟೇಲೊಂದರ ಮುಂದೆ, ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆಗೊಳಿಸುತ್ತಾರೆ. ಅವರು ನಿಲುಗಡೆಗೊಳಿಸುವ ಅದೆಷ್ಟೋ ಹೊಟೇಲ್‌ಗಳಲ್ಲಿ ಪ್ರಯಾಣಿಕರಿಗೆ ಉತ್ತಮವಾದ ಸೇವೆ ಮಾಲಕರು ನೀಡುವುದಿಲ್ಲ. ಯಾವತ್ತೋ ಮಾಡಿದ ತಿಂಡಿ ತಿನಿಸುಗಳನ್ನು ಪ್ರಯಾಣಿಕರಿಗೆ ನೀಡುವುದುಂಟು. ತಿನಿಸುಗಳ ಬೆಲೆಯು ಅಧಿಕವಾಗಿರುತ್ತದೆ. ಅವರಿಗೆ ಪ್ರಯಾಣಿಕರೆಲ್ಲರೂ ನಿತ್ಯದ ಗಿರಾಕಿಗಳಾಗಿರದೆ, ಅಪರೂಪದ ಗಿರಾಕಿಗಳಾಗಿರುತ್ತಾರೆ. ಇಂದು ಬಂದವರು ನಾಳೆಗೆ ಬರುವುದಿಲ್ಲ ಎನ್ನುವುದು ಅವರ ಭಾವನೆ. ಹೀಗೆ ಹೊಟೇಲ್ ಮಾಲಕರು ಹಗಲು ದರೋಡೆ ಮಾಡಿ ಬಿಡುತ್ತಾರೆ. ದಿನವೊಂದಕ್ಕೆ ಹತ್ತಾರು ಪ್ರಯಾಣಿಕರ ಬಸ್ಸುಗಳು ಹೋಟೆಲುಗಳ ಮುಂದೆ ನಿಲ್ಲುತ್ತವೆ. ನೂರಾರು ಪ್ರಯಾಣಿಕರು ಅಧಿಕ ಹಣ ಕೊಟ್ಟು ಕಳಪೆ ಗುಣಮಟ್ಟದ ಆಹಾರ ಸೇವನೆ ಮಾಡ ಬೇಕಾದ ಪರಿಸ್ಥಿತಿ ರಾಜ್ಯದ ಬಹುತೇಕ ಹೊಟೇಲ್‌ಗಳಲ್ಲಿ ಇರುವುದು ಕಂಡು ಬಂದಿದೆ. ಇಂತಹ ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಉದರ ಸಂಬಂಧಿ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇರುತ್ತವೆ. ಪ್ರಯಾಣಿಕರು ಈ ಅವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಲು ಸಮಯದ ಅವಕಾಶವೂ ಇರುವುದಿಲ್ಲ.

ಬಸ್ಸಿನ ಚಾಲಕ, ನಿರ್ವಾಹಕ ಮತ್ತು ಹೊಟೇಲ್ ಮಾಲಕರ ನಡುವೆ ಒಂದು ರೀತಿಯ ಲಾಭದ ಒಪ್ಪಂದವು ಇರುತ್ತದೆ. ಬಸ್ಸನ್ನು ಹೊಟೇಲ್‌ನ ಮುಂದೆ ನಿಲುಗಡೆ ಮಾಡಿದಲ್ಲಿ ಚಾಲಕ, ನಿರ್ವಾಹಕರಿಗೆ ಬೇಕಾದ್ದನ್ನು ಉಚಿತವಾಗಿ ಹೊಟ್ಟೆ ತುಂಬ ಉಣ್ಣಲು ಮಾಲಕನು ನೀಡುತ್ತಾನೆ. ಅದಲ್ಲದೆ, ನೂರು ಇನ್ನೂರು ರೂಪಾಯಿಗಳನ್ನು ಚಾಲಕರ ಜೇಬಿಗೂ ತುರುಕಿ, ಸಂತೋಷಗೊಳಿಸುತ್ತಾರೆ. ಇವರ ಲಾಭದ ಲೆಕ್ಕಾಚಾರದಿಂದ ಪ್ರಯಾಣಿಕರು ಮೋಸಕ್ಕೆ ಬಲಿಯಾಗುತ್ತಿದ್ದಾರೆ. ಕೆಎಸ್ಸಾರ್ಟಿಸಿ ಇಲಾಖೆ ಹಾಗೂ ಆಹಾರ ಇಲಾಖೆಯವರು ಪ್ರಯಾಣಿಕರು ಊಟ ಉಪಾಹಾರ ಸೇವಿಸಲು ಬಸ್ಸು ನಿಲುಗಡೆಗೊಳಿಸುವ ಹೊಟೇಲ್‌ಗಳ ಸ್ವಚ್ಛತೆ, ಆಹಾರದ ಗುಣಮಟ್ಟ, ದರಪಟ್ಟಿಗಳನ್ನು ಪರಿಶೀಲಸುವಂತಾಗಬೇಕು. ಕಳಪೆ ಮಟ್ಟದ ಸೇವೆ ಎಂದು ತಿಳಿದು ಬಂದಾಗ ಬಸ್ಸಿನ ಚಾಲಕರಿಗೆ ಆ ಸ್ಥಳದಲ್ಲಿ ನಿಲುಗಡೆಗೊಳಿಸದಂತೆ ಆದೇಶಿಸಬೇಕು. 

share
ತಾರಾನಾಥ್ ಮೇಸ್ತ ಶಿರೂರು
ತಾರಾನಾಥ್ ಮೇಸ್ತ ಶಿರೂರು
Next Story
X