Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.5ರಂದು ಕುಳಾಯಿ ಸರ್ವಋತು ಮೀನುಗಾರಿಕಾ...

ಮಾ.5ರಂದು ಕುಳಾಯಿ ಸರ್ವಋತು ಮೀನುಗಾರಿಕಾ ಬಂದರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ2 March 2019 5:00 PM IST
share

ಮಂಗಳೂರು, ಮಾ.2: ಕುಳಾಯಿ ಸರ್ವಋತು ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಮಾ.5ರಂದು ಶಿಲಾನ್ಯಾಸ ನಡೆಯಲಿದೆ. ಕೇಂದ್ರ ಸಾರಿಗೆ ಮತ್ತು ಬಂದರು ಸಚಿವ ನಿತಿನ್ ಗಡ್ಕರಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

ನೂತನ ತಾಂತ್ರಿಕ ವಿನ್ಯಾಸದಿಂದ ನಿರ್ಮಿಸಲ್ಪಡುವ ಕುಳಾಯಿ ಸರ್ವಋತು ಮೀನುಗಾರಿಕಾ ಬಂದರು ದೇಶದ ಎರಡನೇ ಯಶಸ್ವಿ ಸರ್ವಋತು ಮೀನುಗಾರಿಕಾ ಬಂದರು ಆಗಲಿದೆ ಎಂದು ಯೋಜನೆಯ ಸಮನ್ವಯಕಾರ ರಾಮಚಂದರ್ ಬೈಕಂಪಾಡಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನವಮಂಗಳೂರು ಬಂದರಿನ 4.5 ಕಿ.ಮೀ. ಉತ್ತರಕ್ಕೆ ಸಮುದ್ರ ಕಿನಾರೆಯಲ್ಲಿ ನಿರ್ಮಿಸಲಿರುವ ಈ ಬಂದರಿಗೆ ರಾಜ್ಯ ಸರ್ಕಾರ 11 ಎಕರೆ ಭೂಮಿಯನ್ನು 8 ತಿಂಗಳ ಹಿಂದೆ ಕೇಂದ್ರ ಸಾರಿಗೆ ಮತ್ತು ಬಂದರು ಸಚಿವಾಲಯಕ್ಕೆ ನೀಡಿದೆ. ಮಂಗಳೂರು-ಮಲ್ಪೆಯ ನಡುವೆ ಮೀನುಗಾರಿಕೆ ಸಂದರ್ಭ ಬೀಸುವ ಬಿರುಗಾಳಿಯಿಂದ ರಕ್ಷಣೆ ಪಡೆಯಲು ಕುಳಾಯಿ ಬಂದರು ಶ್ರೀರಕ್ಷೆಯಾಗಲಿದೆ ಎಂದರು.

* ಸಾಗರಮಾಲಾದಡಿ ಕಾರ್ಯಗತ:

ಈ ಯೋಜನೆ ಕೇಂದ್ರ ಸರ್ಕಾರದ ಕೃಷಿ ಮತ್ತು ಮೀನುಗಾರಿಕಾ ಸಚಿವರಾದ ರಾಧಾಮೋಹನ್ ಸಿಂಗ್ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅವರ ಪ್ರಯತ್ನದಿಂದ ಸಾಗರಮಾಲಾ ಯೋಜನೆಯಡಿ ಕಾರ್ಯಗತವಾಗುತ್ತಿದೆ. ಕೇಂದ್ರ ಸಾರಿಗೆ ಸಚಿವಾಲಯದ 9,825.50 ಲಕ್ಷ ರೂ., ನವಮಂಗಳೂರು ಬಂದರ್ ಟ್ರಸ್ಟ್‌ನ 8,842.95 ಲಕ್ಷ ರೂ. ಹಾಗೂ ಕರ್ನಾಟಕ ಸರ್ಕಾರ ಶೇ.9.82 ಲಕ್ಷ ರೂ. ಸೇರಿದಂತೆ ಒಟ್ಟು 196.51 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಸಾಕಾರಗೊಳ್ಳಲಿದೆ.

* ಕೋಟೆಯಾಕಾರದಲ್ಲಿ ನಿರ್ಮಾಣ:

ಯೋಜನೆಯಲ್ಲಿ ಸಮುದ್ರ ತಡೆಗೋಡೆ (ಬ್ರೇಕ್ ವಾಟರ್) ನಿರ್ಮಾಣವಾಗಲಿದೆ. ಕೋಟೆಯಾಕಾರದ ವಿನ್ಯಾಸದಲ್ಲಿರುವ ಈ ಬಂದರಿನ ಉತ್ತರ ಭಾಗದ ಬ್ರೇಕ್ ವಾಟರ್ 931 ಕಿ.ಮೀ. ಉದ್ದಕ್ಕೆ ಚಾಚಿದ್ದು, 80.21 ಕೋಟಿ ರೂ. ಹಾಗೂ ದಕ್ಷಿಣ ವಿಭಾಗದ ಬ್ರೇಕ್ ವಾಟರ್ 262 ಮೀ. ಉದ್ದವಿದ್ದು, 17.26 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಬಂದರಿನಲ್ಲಿ ಮೀನುಗಾರಿಕೆಗೆ ಸಂಬಂಧಿಸಿ ಬರ್ತ್ ನಿರ್ಮಾಣ, ಜೆಟ್ಟಿ, ಆಡಳಿತ ಕಚೇರಿ, ಯಾಂತ್ರಿಕ ನಾವೆ ದುರಸ್ತಿ, ಐಸ್ ಫ್ಯಾಕ್ಟರಿ, ಗೋಡೌನ್ ಮತ್ತು ಎಲ್ಲ ಮೂಲಭೂತ ಸೌಕರ್ಯಗಳನ್ನು ಹೊಂದಲಿದೆ. ನೂತನ ಬಂದರಿನಲ್ಲಿ ಸುಮಾರು 1,700 ಮಂದಿಗೆ ನೇರ ಹಾಗೂ 1,600 ಮಂದಿಗೆ ಪರೋಕ್ಷ ಉದ್ಯೋಗ ಲಭ್ಯವಾಗಲಿದೆ.

ಮೀನುಗಾರಿಕಾ ಬಂದರಿನೊಳಗೆ ಸುಮಾರು 325 ಮಧ್ಯಮ ಮತ್ತು ಆಳ ಸಮುದ್ರ ದೋಣಿಗಳು, 500ಕ್ಕೂ ಅಧಿಕ ಸಾಂಪ್ರದಾಯಿಕ ದೋಣಿಗಳಿಗೆ ತಂಗಲು ವ್ಯವಸ್ಥೆ ಕಲ್ಪಿಸಲಾಗುವುದು. ಮಹಾರಾಷ್ಟ್ರದ ಕಂಪೆನಿ ಗುತ್ತಿಗೆ ವಹಿಸಿಕೊಂಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಿದೆ ಎಂದವರು ವಿವರಿಸಿದರು.

ನಾಲ್ಕು ಪಟ್ಟಣ ನಿರ್ವಾಸಿಕರ ಸಂಘದ ಅಧ್ಯಕ್ಷ ಮೋಹನ್ ಕೋಡಿಕಲ್, ಸೋಮನಾಥ ಪಾಂಗಾಲ್, ಶ್ರೀನಿವಾಸ ಪುತ್ರನ್, ತಿಮ್ಮಪ್ಪ ಶ್ರೀಯಾನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X