Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ಪಾಕಿಸ್ತಾನಿಯರಂತೆ ಬಿಜೆಪಿಯವರೂ ಹೇಳಿಕೆ...

"ಪಾಕಿಸ್ತಾನಿಯರಂತೆ ಬಿಜೆಪಿಯವರೂ ಹೇಳಿಕೆ ತಿರುಚುವುದರಲ್ಲಿ, ವಿಡಿಯೋ ಎಡಿಟಿಂಗ್ ನಲ್ಲಿ ನಿಸ್ಸೀಮರು"

ಸಿಎಂ ಕುಮಾರಸ್ವಾಮಿ ಟ್ವಿಟ್ ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ2 March 2019 6:14 PM IST
share
ಪಾಕಿಸ್ತಾನಿಯರಂತೆ ಬಿಜೆಪಿಯವರೂ ಹೇಳಿಕೆ ತಿರುಚುವುದರಲ್ಲಿ, ವಿಡಿಯೋ ಎಡಿಟಿಂಗ್ ನಲ್ಲಿ ನಿಸ್ಸೀಮರು

ಬೆಂಗಳೂರು, ಮಾ.2: ಉಗ್ರರ ಅಡಗುತಾಣಗಳ ವಿರುದ್ಧ ಭಾರತದ ಸೇನೆ ನಡೆಸಿದ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ ಎಂಬ ಅರ್ಥದಲ್ಲಿ ಟೀಕೆ ಮಾಡಿದ್ದ ಬಿಜೆಪಿ ನಾಯಕರಿಗೆ ಸರಣಿ ಟ್ವಿಟ್‌ಗಳ ಮೂಲಕ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪಾಕಿಸ್ತಾನಿಯರಂತೆ ಬಿಜೆಪಿಯವರೂ ಕೂಡ ಹೇಳಿಕೆಗಳನ್ನು ತಿರುಚುವುದರಲ್ಲಿ, ವಿಡಿಯೋ ಎಡಿಟ್ ಮಾಡುವುದರಲ್ಲಿ ನಿಸ್ಸೀಮರು ಎಂದು ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

ಬಿಜೆಪಿ ನಾಯಕರು ತಾವೇ ಹೋಗಿ ದಾಳಿ ನಡೆಸಿದ್ದೇವೆಂದು ಸಂಭ್ರಮಿಸುತ್ತಿದ್ದಾರೆ ಎಂಬ ಅರ್ಥದಲ್ಲಿ ತಾನು ಹೇಳಿದ್ದು. ಆದರೆ, ಬಿಜೆಪಿಯವರು ತಮ್ಮ ಹೇಳಿಕೆಯನ್ನು ತಿರುಚಿ ಬೇರೆ ಅರ್ಥ ಬರುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

'ನಿಮ್ಮ ರಾಜಕೀಯ ಲಾಭಕ್ಕಾಗಿ ಒಬ್ಬರ ಹೆಸರಿಗೆ ಮಸಿ ಬಳಿಯುವ ರೀತಿಯಲ್ಲಿ ಹೇಳಿಕೆ ತಿರುಚುವುದು ಸರಿಯಲ್ಲ. ನಮ್ಮ ಹೀರೋ ಅಭಿನಂದನ್ ಅವರ ಹೇಳಿಕೆಯನ್ನು ತಿರುಚಿ ಪಾಕಿಸ್ತಾನಿಯರು ವಿಡಿಯೋ ಸೃಷ್ಟಿಸಿರುವಂತೆ, ನೀವು ಮಾಡಿದ್ದೀರಿ ಎಂದು ಬಿಜೆಪಿಯವರನ್ನು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ರಕ್ಷಣಾ ಕಾರ್ಯಾಚರಣೆಯ ವಿಚಾರವನ್ನು ಬಳಸಿಕೊಂಡು ಬಿಜೆಪಿ ಸ್ನೇಹಿತರು ರಾಜಕೀಯ ಲಾಭಗಳಿಸುವ ಹಾಗೂ ಯುದ್ಧೋನ್ಮಾದ ಮಾತುಗಳಿಂದ ಸಾಮಾಜಿಕ ಅಶಾಂತಿ ಮೂಡಿಸುತ್ತಿರುವ ಪ್ರಯತ್ನದ ಬಗ್ಗೆ ತಾನು ಮಾತನಾಡಿದ್ದು. ಆದರೆ, ಆ ಹೇಳಿಕೆಯನ್ನೇ ತಿರುಚಿದ್ದೀರಿ. ನಮ್ಮ ನೆರೆಯ ರಾಷ್ಟ್ರದಂತೆಯೇ ನೀವೂ ಕೂಡ ನಕಲಿ ಸುದ್ದಿಗಳ ತಜ್ಞರೆಂದು ಸಾಬೀತುಪಡಿಸಿದ್ದೀರಿ ಎಂದು ಕುಮಾರಸ್ವಾಮಿ ಟ್ವಿಟ್‌ನಲ್ಲಿ ಕುಟುಕಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕುಮಾರಸ್ವಾಮಿ ಮಾತನಾಡುತ್ತಿರುವ ವಿಡಿಯೋವೊಂದನ್ನು ಪೋಸ್ಟ್ ಮಾಡಿ, ಉಗ್ರಗಾಮಿಗಳು ಮತ್ತು ದೇಶಪ್ರೇಮಿಗಳ ನಡುವಿನ ವ್ಯತ್ಯಾಸ ತಿಳಿದುಕೊಳ್ಳಿ. ಉಗ್ರಗಾಮಿಗಳು ಸತ್ತರೆ ದೇಶದೊಳಗಡೆ ಶಾಂತಿ ಯಾಕೆ ಕದಡುತ್ತೆ ? ನಿಮ್ಮ ಪ್ರಕಾರ ದೇಶದೊಳಗೆ ಉಗ್ರಗಾಮಿಗಳು ಇದ್ದಾರೆ ಅಂತಾಯ್ತು. ನಿಮಗೆ ಗೊತ್ತಿರೊ ಉಗ್ರಗಾಮಿಗಳನ್ನು ದಯವಿಟ್ಟು ಸೈನಿಕರಿಗೆ ಹಿಡಿದುಕೊಟ್ಟು ಪುಣ್ಣ ಕಟ್ಟಿಕೊಳ್ಳಿ ಎಂದು ಟ್ವಿಟ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X