Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ವಕ್ಫ್ ಮಂಡಳಿ ಚುನಾವಣೆ: 883 ಮತಗಳ...

ರಾಜ್ಯ ವಕ್ಫ್ ಮಂಡಳಿ ಚುನಾವಣೆ: 883 ಮತಗಳ ಚಲಾವಣೆ

ಮಾ.7ರಂದು ಬೆಂಗಳೂರಿನಲ್ಲಿ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ2 March 2019 9:33 PM IST
share
ರಾಜ್ಯ ವಕ್ಫ್ ಮಂಡಳಿ ಚುನಾವಣೆ: 883 ಮತಗಳ ಚಲಾವಣೆ

ಬೆಂಗಳೂರು, ಮಾ.2: ರಾಜ್ಯ ವಕ್ಫ್ ಮಂಡಳಿಗೆ ಶನಿವಾರ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರ್ಗಿ ಕಂದಾಯ ವಿಭಾಗದಲ್ಲಿ ನಡೆದ ಚುನಾವಣೆಯಲ್ಲಿ ಮುತವಲ್ಲಿ ವಿಭಾಗದಡಿಯಲ್ಲಿ 913 ಮತಗಳ ಪೈಕಿ ಒಟ್ಟು 883 ಮತಗಳು ಚಲಾವಣೆಯಾಗಿವೆ.

ಬೆಂಗಳೂರು ವಿಭಾಗದಲ್ಲಿ 312 ಮತಗಳ ಪೈಕಿ 307 ಮತಗಳು, ಮೈಸೂರು ವಿಭಾಗದಲ್ಲಿ 209 ಮತಗಳ ಪೈಕಿ 197 ಮತಗಳು, ಬೆಳಗಾವಿ ವಿಭಾಗದಲ್ಲಿ 177 ಮತಗಳ ಪೈಕಿ 174 ಹಾಗೂ ಕಲಬುರ್ಗಿ ವಿಭಾಗದಲ್ಲಿ 215 ಮತಗಳ ಪೈಕಿ 205 ಮತಗಳು ಚಲಾವಣೆಯಾಗಿವೆ.

ಮುತವಲ್ಲಿ ವಿಭಾಗದಡಿಯಲ್ಲಿ ಇಬ್ಬರು ಸದಸ್ಯರನ್ನು ಚುನಾಯಿಸಲು ನಡೆದ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಅಬ್ದುಲ್ಲಾ ಸಲೀಮ್, ಚಿತ್ರದುರ್ಗ ಜಿಲ್ಲೆಯ ಕೆ.ಅನ್ವರ್ ಬಾಷಾ, ಕಲಬುರ್ಗಿ ಜಿಲ್ಲೆಯ ಅಶ್ಫಾಕ್ ಅಹ್ಮದ್ ಸಿದ್ದೀಖಿ, ಬೆಂಗಳೂರಿನ ಪಿ.ಸಿ.ಬಶೀರ್, ಬಳ್ಳಾರಿಯ ಎಸ್.ಮುಹಮ್ಮದ್ ಗೌಸ್ ಬಾಷಾ, ಬೆಂಗಳೂರಿನ ಡಾ.ಮುಹಮ್ಮದ್ ಯೂಸುಫ್. ಮಂಗಳೂರಿನ ಬಿ.ಮುಖ್ತಾರ್ ಅಹ್ಮದ್, ಬೆಂಗಳೂರಿನ ನಿಯಾಝ್ ಅಹ್ಮದ್ ಶರೀಫ್, ಮೈಸೂರಿನ ಶಫೀವುಲ್ಲಾ ಬೇಗ್, ಬೆಂಗಳೂರಿನ ಸುಭಾನ್ ಶರೀಫ್, ನಿವೃತ್ತ ಕೆಎಎಸ್ ಅಧಿಕಾರಿ ಸೈಯ್ಯದ್ ಏಜಾಝ್ ಅಹ್ಮದ್, ಗದಗ ಜಿಲ್ಲೆಯ ಸೈಯ್ಯದ್ ಮಹಬೂಬ್, ದಾವಣಗೆರೆಯ ಸೈಯ್ಯದ್ ಸೈಫುಲ್ಲಾ ಹಾಗೂ ಹಾವೇರಿ ಜಿಲ್ಲೆಯ ಝಿಶಾನ್ ಅಹ್ಮದ್‌ಖಾನ್ ಪಠಾಣ್ ಸೇರಿ ಒಟ್ಟು 14 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದರು.

ಶಾಸಕಾಂಗ ವಿಭಾಗದಡಿಯಲ್ಲಿ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಬೇಕಿದ್ದು, ಕಣದಲ್ಲಿ ಶಾಸಕಿ ಕನಿಝ್ ಫಾತಿಮಾ, ವಿಧಾನಪರಿಷತ್ ಸದಸ್ಯ ರಿಝ್ವನ್ ಅರ್ಶದ್ ಹಾಗೂ ಶಾಸಕ ತನ್ವೀರ್ ಸೇಠ್ ಇದ್ದರು. ಅಂತಿಮವಾಗಿ ಮತದಾನಕ್ಕೆ ಒಂದು ದಿನ ಮುನ್ನ ರಿಝ್ವನ್ ಅರ್ಶದ್ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಪ್ರಕಟಿಸಿದರು.

ಈ ಹಿನ್ನೆಲೆಯಲ್ಲಿ ವಕ್ಫ್ ಮಂಡಳಿಗೆ ಶಾಸಕಾಂಗ ವಿಭಾಗದಡಿಯಲ್ಲಿ ಶಾಸಕರಾದ ಕನಿಝ್ ಫಾತಿಮಾ ಹಾಗೂ ತನ್ವೀರ್ ಸೇಠ್ ಆಯ್ಕೆ ಬಹುತೇಕ ಖಚಿತವಾಗಿದೆ. ಲೋಕಸಭೆ ಅಥವಾ ರಾಜ್ಯಸಭೆಯ ಸದಸ್ಯರೊಬ್ಬರನ್ನು ವಕ್ಫ್ ಮಂಡಳಿಗೆ ಸದಸ್ಯರನ್ನಾಗಿ ಮಾಡಬೇಕಿದ್ದು, ಹಾಲಿ ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಸೀರ್ ಹುಸೇನ್ ನೇರವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಬಾರ್ ಕೌನ್ಸಿಲ್‌ನಿಂದ ವಕೀಲ ಆಸಿಫ್ ಅಲಿ ಶೇಖ್ ಹುಸೇನ್ ರನ್ನು ವಕ್ಫ್ ಮಂಡಳಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿ ನಡೆದಿರುವ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಮಾ.7ರಂದು ಬೆಂಗಳೂರಿನ ಡಿಕೆನ್ಸನ್ ರಸ್ತೆಯಲ್ಲಿರುವ ಮುಸ್ಲಿಮ್ ಅನಾಥಾಶ್ರಮದಲ್ಲಿ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X