Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀವು ಪಡೆದ ಅಂಕ ಮುಖ್ಯವಲ್ಲ, ಸಮಾಜಕ್ಕೆ...

ನೀವು ಪಡೆದ ಅಂಕ ಮುಖ್ಯವಲ್ಲ, ಸಮಾಜಕ್ಕೆ ನೀಡಿದ ಕೊಡುಗೆ ಮುಖ್ಯ: ನ್ಯಾ.ರಾಮಮೋಹನ್ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ2 March 2019 10:01 PM IST
share

ಬೆಂಗಳೂರು, ಮಾ. 2: ಮುಂದುವರೆದ ರಾಷ್ಟ್ರಗಳಲ್ಲಿ ನೀವು ಪಡೆದ ಅಂಕಗಳನ್ನು ನೋಡುವುದಿಲ್ಲ. ಬದಲಿಗೆ ನೀವು ಸಮಾಜಕ್ಕೆ ನೀಡಿರುವ ಕೊಡುಗೆಗಳು, ನಡತೆ ಮತ್ತು ನಿಮ್ಮ ವ್ಯಕ್ತಿತ್ವವನ್ನು ನೋಡುತ್ತಾರೆ. ಆದುದರಿಂದ ಕಾನೂನು ವಿದ್ಯಾರ್ಥಿಗಳಿಗೆ ನಡತೆ, ಸ್ವಾಭಿಮಾನ, ಪ್ರಾಮಾಣಿಕತೆ ಬಹಳ ಮುಖ್ಯ ಎಂದು ನಿವೃತ್ತ ನ್ಯಾಯಮೂರ್ತಿ ರಾಮಮೋಹನ್ ರೆಡ್ಡಿ ಹೇಳಿದ್ದಾರೆ.

ಶನಿವಾರ ಬೆಂಗಳೂರು ವಿಶ್ವ ವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ವಿಶ್ವ ವಿದ್ಯಾಲಯ ಕಾನೂನು ಕಾಲೇಜಿನಲ್ಲಿ ನಡೆದ 23ನೆ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವುಗಳು ಕಾನೂನು ವಿದ್ಯಾಭ್ಯಾಸ ಮಾಡುವ ವೇಳೆ ಈ ರೀತಿಯ ಸ್ಪರ್ಧೆ ಇರುತ್ತಿರಲಿಲ್ಲ. ಸ್ಪರ್ಧೆಯಿಂದ ಕಾನೂನು ವಿದ್ಯಾರ್ಥಿಗಳನ್ನು ಉತ್ತಮ ರೀತಿಯ ಚರ್ಚಾಪಟುಗಳನ್ನು ಮಾಡುವಲ್ಲಿ ಸಂದೇಹವಿಲ್ಲ. ಕಾನೂನುಗಳನ್ನು ಓದಿ ಅರ್ಥೈಸಿಕೊಳ್ಳಬೇಕು ಹಾಗೂ ನ್ಯಾಯಾಲಯದ ತೀರ್ಪುಗಳನ್ನು ಚೆನ್ನಾಗಿ ಓದಿ ಕರಗತ ಮಾಡಿಕೊಂಡಲ್ಲಿ ಈ ವೃತ್ತಿಗೆ ಅರ್ಥಪೂರ್ಣತೆ ಬರುತ್ತದೆ. ದೀರ್ಘ ಅಧ್ಯಯನ, ಎಲ್ಲಿ ಯಾವ ಕಾನೂನನ್ನು ಅನ್ವಯ ಮಾಡಬೇಕೆಂಬ ಚಾಣಾಕ್ಷತೆ ಕಾನೂನು ವಿದ್ಯಾರ್ಥಿಗಳಿಗೆ ಇರಬೇಕು. ಕಾನೂನು ವಿದ್ಯಾರ್ಥಿಗಳು ಉದ್ವೇಗಕ್ಕೆ ಒಳಗಾಗದೆ, ಪ್ರಕರಣವನ್ನು ಕೂಲಂಕಷವಾಗಿ ತಿಳಿದುಕೊಂಡು ವಾದ ನಡೆಸಬೇಕು. ವಾದ ಮಾಡುವ ವೇಳೆ ಆತ್ಮವಿಶ್ವಾಸ ಬಹಳ ಮುಖ್ಯ, ನ್ಯಾಯಾಧೀಶರು ಹಾಗೂ ನಿಮ್ಮ ಎದುರು ವಕೀಲರಿಗೆ ಗೌರವವಾಗಿ ನೋಡಬೇಕು.

ಪ್ರಕರಣ ಮುಖ್ಯ ಅಂಶಗಳ ಬಗ್ಗೆ ಗುರುತರವಾಗಿ ತಿಳಿದುಕೊಳ್ಳುವುದು. ಏಕಾಗ್ರತೆ ಈ ರೀತಿಯ ಸ್ಪರ್ಧಿಗಳಲ್ಲಿ ಬಹಳ ಮುಖ್ಯ. ನ್ಯಾಯಾಧೀಶರು ಕೇಳುವ ಪ್ರಶ್ನೆಗಳನ್ನು ಗಮನಾರ್ಹವಾಗಿ ಕೇಳುವುದು ಉತ್ತಮ ಆಲೋಚನೆಗಳಿರಬೇಕು, ಸತತವಾಗಿ ಕಷ್ಟವನ್ನು ಸಲೀಸಾಗಿ ನಿರ್ವಹಿಸಿದಾಗ ಮಾತ್ರ ಈ ವೃತ್ತಿಗೆ ಗೌರವ. ಸಂವಹನ, ಹೊಣೆಗಾರಿಕೆ, ಕೌಶಲ್ಯ, ವ್ಯವಸ್ಥಿತತೆ ಹಾಗೂ ಬೌದ್ಧಿಕತೆಯ ಅಳತೆ ಎಲ್ಲವೂ ಬಹಳ ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೊ.ಪದ್ಮನಾಭ ರಾಮನುಜ ಮಾತನಾಡಿ, ಅಣುಕು ಸ್ಪರ್ಧೆ 14ನೆ ಶತಮಾನದಲ್ಲಿ ಶುರುವಾಗಿ 18ನೆ ಶತಮಾನದಲ್ಲಿ ಅಮೆರಿಕಾದ ಹಾರ್ವರ್ಡ್ ಲಾ ಶಾಲೆಯಲ್ಲಿ ಪ್ರಾರಂಭವಾಯಿತು. ಕೌಶಲ್ಯ ಅವಲಂಬಿತ ಶಿಕ್ಷಣ ಬಹಳ ಅಗತ್ಯ. ಅಣುಕು ನ್ಯಾಯಾಲಯ ಸ್ಪರ್ಧೆಗಳು ಕಾನೂನು ವಿದ್ಯಾರ್ಥಿಗಳ ಕ್ರಿಯಾಶೀಲತೆ ಹಾಗೂ ಪ್ರಾಯೋಗಿಕತೆಯನ್ನು ಕಲಿಸುತ್ತದೆ ಎಂದರು.

ವಿಶ್ವ ವಿದ್ಯಾಲಯದ ಕಾನೂನು ಕಾಲೇಜು 23 ವರ್ಷಗಳಿಂದ ಸತತವಾಗಿ ಈ ಅಣುಕು ನ್ಯಾಯಾಲಯ ಸ್ಪರ್ಧೆ ಮಾಡುತ್ತಾ ಬಂದಿರುವುದು ಹೆಗ್ಗಳಿಕೆಯ ವಿಚಾರವೆ ಎಂದ ಅವರು, ಎಲ್ಲ ರಾಜ್ಯಗಳಿಂದ ಬಂದಿರುವ ಕಾನೂನು ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು.

ಉತ್ತಮ ನಡತೆ ಕೇವಲ ಕಾನೂನು ವಿದ್ಯಾರ್ಥಿಗಳಿಗಲ್ಲದೆ, ಕಾನೂನು ಪ್ರಾಧ್ಯಾಪಕರಿಗೆ ಇರಬೇಕು. ವಿಶ್ವವಿದ್ಯಾಲಯ ಕಾನೂನು ಕಾಲೇಜು ಕಾನೂನು ವಿದ್ಯಾರ್ಥಿಗಳನ್ನು ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಲು ಉತ್ತೇಜಿಸುತ್ತದೆಯೇ ಹೊರತು ಕಂಪೆನಿಗಳಲ್ಲಿ ಉದ್ಯೋಗ ಗಳಿಸುವಂತಹದಲ್ಲ.

-ಪ್ರೊ.ಸುದೇಶ್, ಪ್ರಾಂಶುಪಾಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X