Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಎಪ್ರಿಲ್ 2019-ಮಾರ್ಚ್ 2020’...

‘ಎಪ್ರಿಲ್ 2019-ಮಾರ್ಚ್ 2020’ ನಿರ್ಮಾಣ-ತಂತ್ರಜ್ಞಾನ ವರ್ಷ: ಪ್ರಧಾನಿ ಮೋದಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ2 March 2019 10:09 PM IST
share
‘ಎಪ್ರಿಲ್ 2019-ಮಾರ್ಚ್ 2020’ ನಿರ್ಮಾಣ-ತಂತ್ರಜ್ಞಾನ ವರ್ಷ: ಪ್ರಧಾನಿ ಮೋದಿ ಘೋಷಣೆ

ಹೊಸದಿಲ್ಲಿ,ಮಾ.2: ‘ಎಪ್ರಿಲ್ 2019-ಮಾರ್ಚ್ 2020’ ಅನ್ನು ನಿರ್ಮಾಣ-ತಂತ್ರಜ್ಞಾನ ವರ್ಷವನ್ನಾಗಿ ಶನಿವಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು,ತ್ವರಿತ ನಗರೀಕರಣದಿಂದಾಗಿ ದೇಶದಲ್ಲಿ ಹೆಚ್ಚುತ್ತಿರುವ ವಸತಿ ಬೇಡಿಕೆಗಳನ್ನು ಪೂರೈಸಲು ಆಧುನಿಕ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿದರು.

2022ರ ವೇಳೆಗೆ ಪ್ರತಿ ಭಾರತೀಯನಿಗೂ ಇಟ್ಟಿಗೆ ನಿರ್ಮಿತ ಮನೆಯನ್ನು ಒದಗಿಸುವ ಸರಕಾರದ ಅಭಿಯಾನವನ್ನು ಪೂರ್ಣಗೊಳಿಸುವಲ್ಲಿ ಖಾಸಗಿ ಕ್ಷೇತ್ರದ ಬೆಂಬಲವನ್ನೂ ಅವರು ಕೋರಿದರು.

ಇಲ್ಲಿ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಇಂಡಿಯಾ-2019 ಎಕ್ಸ್‌ಪೋ ಮತ್ತು ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ,ತನ್ನ ಸರಕಾರವು ಕೈಗೆಟಕುವ ಬೆಲೆಗಳಲ್ಲಿ ಮನೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಿದೆ,ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಸಂಬಂಧಿಸಿದ ಕಾನೂನುಗಳಲ್ಲಿ ಬದಲಾವಣೆಗಳನ್ನು ತಂದಿದೆ ಮತ್ತು ಇದೇ ವೇಳೆ ಅದಕ್ಕಾಗಿ ಕೌಶಲ್ಯವನ್ನು ಹೆಚ್ಚಿಸಿದೆ ಮತ್ತು ತಂತ್ರಜ್ಞಾನವನ್ನು ಉತ್ತಮಗೊಳಿಸಿದೆೆ ಎಂದು ಹೇಳಿದರು.

ಹಿಂದಿನ ಆಡಳಿತದ ಕೇವಲ 25 ಲಕ್ಷ ಮನೆಗಳಿಗೆ ಹೋಲಿಸಿದರೆ ಎನ್‌ಡಿಎ ಸರಕಾರವು 1.3 ಕೋಟಿ ಮನೆಗಳನ್ನು ನಿರ್ಮಿಸಿದೆ ಎಂದ ಅವರು,ತಮ್ಮ ಸ್ವಂತ ಮನೆಯನ್ನು ಹೊಂದುವ ಬಡ ಮತ್ತು ಮಧ್ಯಮ ಮರ್ಗದ ಜನರ ಕನಸನ್ನು ನನಸಾಗಿಸಲು ನಮ್ಮ ಬದ್ಧತೆಯೆಡೆಗೆ ನಾವೆಷ್ಟು ಗಂಭೀರವಾಗಿದ್ದೇವೆ ಎನ್ನುವುದನ್ನು ಇದು ತೋರಿಸುತ್ತದೆ ಎಂದರು.

ಮನೆಗಳು ಇತರ ಸೌಲಭ್ಯಗಳೊಂದಿಗೆ ನೀರು,ವಿದ್ಯುತ್ ಮತ್ತು ಉಜ್ವಲಾ ಸಂಪರ್ಕ(ಎಲ್‌ಪಿಜಿ)ಗಳನ್ನು ಹೊಂದಿರುವುವಂತೆ ನಾವು ನೋಡಿಕೊಳ್ಳುತ್ತಿದ್ದೇವೆ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮನೆಗಳ ಗುಣಮಟ್ಟ ಮತ್ತು ಸ್ಥಳಾವಕಾಶಗಳನ್ನು ಹೆಚ್ಚಿಸಲಾಗಿದೆ,ಆದರೆ ಇನ್ನೂ ಬಹಳಷ್ಟನ್ನು ಮಾಡಬೇಕಿದೆ. ಅದಕ್ಕಾಗಿ ಖಾಸಗಿ ಕ್ಷೇತ್ರದ ಬೆಂಬಲವನ್ನು ನಾನು ಕೋರುತ್ತಿದ್ದೇನೆ,ನಾವೆಲ್ಲರೂ ಒಂದಾಗಿ ಶ್ರಮಿಸೋಣ ಮತ್ತು ಬಡವರಿಗೆ ನೆರವಾಗೋಣ ಎಂದರು.

ವಿಶ್ವದಲ್ಲಿ ಲಭ್ಯವಿರುವ ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡು ವಸತಿ ಕ್ಷೇತ್ರಕ್ಕೆ ಹೊಸ ವೇಗವನ್ನು ನೀಡುವಂತೆ ಪಾಲುದಾರರಿಗೆ ಸೂಚಿಸಿದ ಮೋದಿ, ಅವರ ಸಲಹೆಗಳನ್ನು ತಿಳಿದುಕೊಳ್ಳಲು ಅವರೊಂದಿಗೆ ಮಾತುಕತೆಗಳನ್ನು ನಡೆಸಲು ಮತ್ತು ವಸತಿ ಕ್ಷೇತ್ರವನ್ನು ಇನ್ನಷ್ಟು ಕಂಪನಶೀಲಗೊಳಿಸಲು ಸರಕಾರವು ಆಸಕ್ತಿ ಹೊಂದಿದೆ ಎಂದರು.

ದೇಶದ ತ್ವರಿತ ನಗರೀಕರಣದಿಂದಾಗಿ ಹೆಚ್ಚಿನ ಮನೆಗಳು ಅಗತ್ಯವಾಗಿದೆ ಎಂದ ಅವರು,ಬೇಡಿಕೆಯನ್ನು ಪೂರೈಸಲು ಮತ್ತು ವಸತಿ ಕ್ಷೇತ್ರದಲ್ಲಿ ಪರಿವರ್ತನೆ ತರಲು ತನ್ನ ಸರಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನಾ,ದೀನದಯಾಳ ಅಂತ್ಯೋದಯ ಯೋಜನಾ,ರಾಷ್ಟ್ರಿಯ ನಗರ ಜೀವನನೋಪಾಯ ಅಭಿಯಾನದಂತಹ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X