Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಬಜೆಟ್ ಅನುಮೋದನೆ ಕಷ್ಟ ?

ಬಿಬಿಎಂಪಿ ಬಜೆಟ್ ಅನುಮೋದನೆ ಕಷ್ಟ ?

ಪಾಲಿಕೆ ಆಯುಕ್ತರಿಂದ ಬಜೆಟ್ ಅನುಮೋದನೆ ಕೋರಿ ಪತ್ರ

ವಾರ್ತಾಭಾರತಿವಾರ್ತಾಭಾರತಿ2 March 2019 10:10 PM IST
share
ಬಿಬಿಎಂಪಿ ಬಜೆಟ್ ಅನುಮೋದನೆ ಕಷ್ಟ ?

ಬೆಂಗಳೂರು, ಮಾ.2: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಭಾರಿ ಗಾತ್ರದ ಬಜೆಟ್ ಮಂಡಿಸಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತಕ್ಕೆ ಅಡಳಿತರೂಢ ರಾಜ್ಯ ಮೈತ್ರಿ ಸರಕಾರದಿಂದಲೇ ಮುಖಭಂಗವುಂಟಾಗಲಿದೆ.

ಮೊದಲ ಬಾರಿಗೆ ಫೆ.18 ರಂದು 10,691 ಕೋಟಿ ಬಜೆಟ್ ಮಂಡನೆ ಮಾಡಿ ದಾಖಲೆ ಬಜೆಟ್ ಮಂಡಿಸಲಾಗಿದೆ ಎಂದು ಮೇಯರ್ ಸೇರಿದಂತೆ ಮೈತ್ರಿ ನಾಯಕರು ಹೇಳಿದ್ದರು. ಅಲ್ಲದೆ, ಅನುದಾನದ ತಾರತಮ್ಯ ಸೇರಿದಂತೆ ಮತ್ತಿತರೆ ಗಲಾಟೆಯಿಂದಾಗಿ ಬಜೆಟ್ ಗಾತ್ರವನ್ನು 12,957 ಕೋಟಿ ರೂ.ಗೆ ಹೆಚ್ಚಿಸಿಕೊಂಡು ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆದಿತ್ತು. ಇದು ವಾಸ್ತವಿಕ ಲೆಕ್ಕಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನ ಬಜೆಟ್ ಶೇ.148 ರಷ್ಟು ಅಧಿಕವಾಗಿದ್ದು, ಅನುಷ್ಠಾನಗೊಳಿಸಲು ಅಸಾಧ್ಯವಾಗಿದೆ. ಆದರೆ, 9 ಸಾವಿರ ಕೋಟಿ ರೂ.ಗಳ ಆಯವ್ಯಯ ಮಂಡಿಸಲು ಅವಕಾಶವಿದ್ದು, ಈ ಮೊತ್ತಕ್ಕೆ ಅನುಮೋದನೆ ನೀಡಬೇಕೆಂದು ಆಯುಕ್ತರು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ಬಿಬಿಎಂಪಿ ಬಜೆಟ್ ಸಂಬಂಧಿಸಿ ಆಯುಕ್ತ ಮಂಜುನಾಥ್ ಪ್ರಸಾದ್ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, 12,957 ಕೋಟಿ ರೂ. ಬಜೆಟ್ ಅನುಷ್ಠಾನಗೊಳಿಸಲು ಅಸಾಧ್ಯವಾಗಿದೆ. ಆದಾಯ ಸಂಗ್ರಹ ಗುರಿಯಾಗಿಸಿಕೊಂಡು 9 ಸಾವಿರ ಕೋಟಿ ರೂ. ಆಯವ್ಯಯಕ್ಕೆ ಅನುಮೋದನೆ ನೀಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೈತ್ರಿಕೂಟದಲ್ಲೇ ಅಸಮಾಧಾನ: 2019-20 ನೆ ಸಾಲಿನ ಬಜೆಟ್‌ನಲ್ಲಿ ಮೇಯರ್ ಪ್ರತಿನಿಧಿಸುವ ಕ್ಷೇತ್ರ ಹಾಗೂ ಮಹಾಲಕ್ಷ್ಮೀ ಲೇಔಟ್, ಜಯನಗರ, ಬಿಟಿಎಂ ಲೇಔಟ್, ರಾಜರಾಜೇಶ್ವರಿ ನಗರ ಸೇರಿದಂತೆ 8 ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಶಾಂತಿನಗರ, ಶಿವಾಜಿನಗರ, ಗಾಂಧಿನಗರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪ್ರಸ್ತುತ ಆಯುಕ್ತರ ಪತ್ರದಿಂದಾಗಿ ಹೆಚ್ಚಿನ ಅನುದಾನ ಕಡಿತವಾಗುವ ಸಾಧ್ಯತೆ ಇದೆ.

ಮುಜುಗರಕ್ಕೀಡಾದ ಮೈತ್ರಿಕೂಟ ಬಜೆಟ್: ಬಜೆಟ್ ಮೇಲಿನ ಚರ್ಚೆ ವೇಳೆ ಮೈತ್ರಿಕೂಟ ಇನ್ನು 2289 ಕೋಟಿ ರೂ ಹೆಚ್ಚುವರಿ ಬಜೆಟ್ ಮಂಡಿಸಿ ರಾಜ್ಯ ಸರಕಾರದ ಅನುಮೋದನೆಗೆ ಕಳುಹಿಸಿತ್ತು. ವಾಸ್ತವಿಕ, ಆರ್ಥಿಕ ಚಿತ್ರಣ ಅವಲೋಕಿಸಿ ಅನುಮೋದನೆ ನೀಡಲು ಆಯುಕ್ತರು ಪತ್ರ ಬರೆದಿರುವುದು ಮೈತ್ರಿಕೂಟಕ್ಕೆ ಮುಜುಗರ ಉಂಟಾಗಿದೆ.

ಯೋಜನೆಗಳಿಗೆ ಕತ್ತರಿ ಬೀಳುವ ಸಾಧ್ಯತೆ: ಪಾಲಿಕೆಯ 2019-20ರ ಬಜೆಟ್‌ನಲ್ಲಿ ಹಲವಾರು ಯೋಜನೆ ಸೇರಿದಂತೆ ಕೆಲ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿತ್ತು ಎಂಬ ಆರೋಪಗಳಿದ್ದು, ಒಂದು ವೇಳೆ ಸರಕಾರ 9 ಸಾವಿರ ಕೋಟಿ ರೂ. ಗೆ ಅನುಮೋದನೆ ನೀಡಿದರೆ ಹೆಚ್ಚುವರಿ 4 ಸಾವಿರ ಕೋಟಿ ರೂ. ಯೋಜನೆಗಳಿಗೆ ಕ್ತರಿ ಬೀಳಲಿವೆ ಎಂದು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X