Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಯಜಮಾನ: ಈ ಯಜಮಾನ ಸಮಾಜಕ್ಕೆ ಡಾಕ್ಟರ್

ಯಜಮಾನ: ಈ ಯಜಮಾನ ಸಮಾಜಕ್ಕೆ ಡಾಕ್ಟರ್

ವಾರ್ತಾಭಾರತಿವಾರ್ತಾಭಾರತಿ3 March 2019 12:16 AM IST
share
ಯಜಮಾನ: ಈ ಯಜಮಾನ ಸಮಾಜಕ್ಕೆ ಡಾಕ್ಟರ್

‘ಯಜಮಾನ’ ಎಂದೊಡನೆ ನೆನಪಾಗುವುದು ವಿಷ್ಣುವರ್ಧನ್ ಅವರು ನಟಿಸಿ ದಾಖಲೆ ಯಶಸ್ಸು ಕಂಡ ಚಿತ್ರ. ಅದರಲ್ಲಿ ವಿಷ್ಣುವರ್ಧನ್ ಒಂದು ಕುಟುಂಬದ ಯಜಮಾನನಾಗಿ ಮಾದರಿಯಾಗಿರುತ್ತಾರೆ. ಈ ಯಜಮಾನದಲ್ಲಿ ದರ್ಶನ್ ಒಂದು ಹಳ್ಳಿಗೆ ಹೇಗೆ ಮಾದರಿಯ ಯಜಮಾನನಾಗಬಹುದು ಎಂದು ತೋರಿಸಿದ್ದಾರೆ.

ಹುಲಿದುರ್ಗ ಎಂಬ ಊರು. ಆ ಊರು ಕೃಷಿಗೆ ಹೆಸರುವಾಸಿ. ಮುಖ್ಯವಾಗಿ ಕೊಬ್ಬರಿ ಎಣ್ಣೆಗೆ ಫೇಮಸ್ಸು. ಎಲ್ಲವೂ ಚೆನ್ನಾಗಿದೆ ಎನ್ನುವಾಗ ಆ ಹಳ್ಳಿಯತ್ತ ಬಹುರಾಷ್ಟ್ರೀಯ ಕಂಪೆನಿಯೊಂದು ಕಣ್ಣು ಹಾಕುತ್ತದೆ. ಆದರೆ ಅವರ ಕಂಪೆನಿ ಊರಿಗೆ ಕಾಲಿಡದಂತೆ ಮಾಡುವಲ್ಲಿ ಕೃಷ್ಣ ಎಂಬ ಯುವ ವ್ಯಾಪಾರಿ ಯಶಸ್ವಿಯಾಗುತ್ತಾನೆ. ಕೊನೆಗೆ ಅನಿವಾರ್ಯವಾಗಿ ಅವರ ಜಾಲದಲ್ಲಿ ಸಿಲುಕಿ ಎಣ್ಣೆ ವ್ಯಾಪಾರದಲ್ಲಿ ನಷ್ಟ ಗೊಳ್ಳಬೇಕಾದ ಪರಿಸ್ಥಿತಿ ಆ ಹಳ್ಳಿಗೆ ಎದುರಾಗುತ್ತದೆ. ಅದನ್ನು ಕೃಷ್ಣ ಹೇಗೆ ಸಮರ್ಥವಾಗಿ ಎದುರಿಸುತ್ತಾನೆ ಎನ್ನುವುದೇ ಚಿತ್ರದ ಕತೆ. ಕೃಷ್ಣನಾಗಿ ದರ್ಶನ್ ಮೊದಲಾರ್ಧದಲ್ಲಿ ಒಂದಿಷ್ಟು ತುಂಟಾಟ ಆಡುತ್ತಾರೆ. ಆದರೆ ಅದು ಅಷ್ಟೇನೂ ಮೋಡಿ ಮಾಡುವುದಿಲ್ಲ ಎನ್ನುವುದು ಸತ್ಯ.

ಕತೆ ಮುಂದುವರಿಯುತ್ತಾ ಹೋದಂತೆ, ದರ್ಶನ್ ಶೈಲಿಯ ಹೊಡೆದಾಟಗಳು ಎದುರಾದಂತೆ ಚಿತ್ರ ಆಸಕ್ತಿ ಮೂಡಿಸುತ್ತದೆ. ದರ್ಶನ್ ಜೋಡಿಯಾಗಿ ಬಹು ನಿರೀಕ್ಷೆ ಮೂಡಿಸಿದ್ದ ರಶ್ಮಿಕಾ ಮಂದಣ್ಣ ನೀಡಿರುವ ನಟನೆ ಸಪ್ಪೆಎನಿಸುತ್ತದೆ. ಕಾವೇರಿ ಎಂಬ ಆಕೆಯ ಪಾತ್ರಕ್ಕೆ ವಿಶೇಷತೆ ಏನೂ ಇಲ್ಲ. ಆದರೆ ಮತ್ತೋರ್ವ ನಾಯಕಿಯಾಗಿ ಗಂಗಾ ಪಾತ್ರದಲ್ಲಿ ಕಾಣಿಸಿಕೊಂಡಿರುವ ತಾನ್ಯ ಹೋಪ್ ವಿವಿಧ ಗೆಟಪ್‌ನಲ್ಲಿ ಬಂದು ಮನಸೆಳೆಯುತ್ತಾರೆ.

ಚಿತ್ರದಲ್ಲಿ ಪ್ರಮುಖ ಖಳನಾಗಿ ನಟಿಸಿರುವ ಠಾಕೂರ್ ಅನೂಪ್ ಸಿಂಗ್ ನಟನೆ ಕೂಡ ಮನಗೆಲ್ಲುತ್ತದೆ. ರಶ್ಮಿಕಾ ತಂದೆಯಾಗಿ ದೇವರಾಜ್ ಮತ್ತು ಇತರ ಪಾತ್ರಗಳಲ್ಲಿ ಪಿ.ರವಿಶಂಕರ್, ಸುಚಿತ್ರಾ, ಸಾಧುಕೋಕಿಲಾ, ದತ್ತಣ್ಣ ಮೊದಲಾದವರು ಎಂದಿನಂತೆ ತಮ್ಮದೇ ಶೈಲಿಯ ಅಭಿನಯ ನೀಡಿದ್ದಾರೆ. ಎಲ್ಲಾ ಪಾತ್ರಗಳಿಗೂ ಹೈಲೈಟ್ ಆಗಲು ಒಂದೊಂದು ದೃಶ್ಯಗಳು ಮೀಸಲಾಗಿರುವುದು ವಿಶೇಷ.

ವಾಸ್ತವದ ನೆಲೆಗಟ್ಟಿನ ಕತೆಯಾದರೂ ಕೋರ್ಟ್ ಸೀನ್ ಸೇರಿದಂತೆ ಸಾಕಷ್ಟು ದೃಶ್ಯಗಳು ನೈಜತೆಗಿಂತ ಮಾರು ದೂರ ನಿಲ್ಲುತ್ತದೆ. ಆದರೆ ಶಶಿಧರ ಅಡಪ ಅವರ ಕಲಾ ನಿರ್ದೇಶನ ಅಮೋಘ ಎನ್ನಲೇ ಬೇಕು. ಒಟ್ಟಿನಲ್ಲಿ ದರ್ಶನ್ ಅಭಿಮಾನಿಗಳು ಮೆಚ್ಚುವಂತಹ ಸನ್ನಿವೇಶ, ಸಂಭಾಷಣೆ, ಸಂಗೀತಕ್ಕೆ ಕೊರತೆ ಇಲ್ಲ.

 ತಾರಾಗಣ : ದರ್ಶನ್, ರಶ್ಮಿಕಾ, ತಾನ್ಯಾ ಹೋಪ್
ನಿರ್ದೇಶನ : ಹರಿಕೃಷ್ಣ , ಪಿ.ಕುಮಾರ್
ನಿರ್ಮಾಣ : ಮೀಡಿಯಾ ಹೌಸ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X