ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಅಸ್ತಿತ್ವಕ್ಕೆ
ಬೆಂಗಳೂರು, ಮಾ.3: ರಾಜ್ಯ ಶಿಕ್ಷಕರ ಸಂಘದ ಪಟ್ಟಿಗೆ ಮತ್ತೊಂದು ಸಂಘ ಸೇರ್ಪಡೆಯಾಗಿದ್ದು, ಶಿಕ್ಷಕಿಯರು ತಮ್ಮ ಸಮಸ್ಯೆಗಳನ್ನು, ಹಕ್ಕುಗಳನ್ನು, ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲು ಸರಕಾರಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ನೂತನ ಸಂಘ ರಚನೆಯಾಗಿದೆ.
ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕಿಯರಿಗೆ ಸದಸ್ಯರಾಗಲು ಇದರಲ್ಲಿ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಶಿಕ್ಷಕಿಯರ ಸಂಘ ಸ್ಥಾಪಿಸಿದ್ದೇವೆ ಎಂದರು.
Next Story