Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಜೀವನಾಧಾರಿತ ಚಿತ್ರ: ಗೋಧ್ರಾ ಘಟನೆ...

ಮೋದಿ ಜೀವನಾಧಾರಿತ ಚಿತ್ರ: ಗೋಧ್ರಾ ಘಟನೆ ಪುನರ್ ಸೃಷ್ಟಿಸಲು ರೈಲುಬೋಗಿಗೆ ಬೆಂಕಿ

ವಾರ್ತಾಭಾರತಿವಾರ್ತಾಭಾರತಿ4 March 2019 3:15 PM IST
share
ಮೋದಿ ಜೀವನಾಧಾರಿತ ಚಿತ್ರ: ಗೋಧ್ರಾ ಘಟನೆ ಪುನರ್ ಸೃಷ್ಟಿಸಲು ರೈಲುಬೋಗಿಗೆ ಬೆಂಕಿ

ಹೊಸದಿಲ್ಲಿ, ಮಾ. 4: ಪ್ರಧಾನಿ ನರೇಂದ್ರ ಮೋದಿಯ ಜೀವನಾಧಾರಿತ ಚಿತ್ರಕ್ಕಾಗಿ 2002ರ ಗೋಧ್ರಾ ಘಟನೆಯನ್ನು ಪುನರ್ ಸೃಷ್ಟಿಸುವುದಕ್ಕಾಗಿ ಗುಜರಾತ್ ನ ವಡೋದರಾ ರೈಲು ನಿಲ್ದಾಣದಲ್ಲಿ ರವಿವಾರ ರೈಲೊಂದರ ಬೋಗಿಗೆ ಬೆಂಕಿ ಹಚ್ಚಲಾಗಿದೆ.

ಪಶ್ಚಿಮ ರೈಲ್ವೆ ಹಾಗೂ ವಡೋದರಾ ಅಗ್ನಿಶಾಮಕ ಇಲಾಖೆ ಈ  ದೃಶ್ಯದ ಚಿತ್ರೀಕರಣಕ್ಕಾಗಿ ಚಿತ್ರ ನಿರ್ಮಾಣ ಸಂಸ್ಥೆ ಬೆಂಚ್ ಮಾರ್ಕ್ ಪ್ರೊಡಕ್ಷನ್ಸ್ ಗೆ ಅನುಮತಿ ನೀಡಿದ್ದವೆಂದು ಹೇಳಲಾಗಿದೆ. ಈ ಚಿತ್ರವನ್ನು 2019ರ ಲೋಕಸಭಾ ಚುನಾವಣೆಗಿಂತ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಹೇಳಲಾಗಿದೆ.

''ಸಾಕ್ಷ್ಯ ಚಿತ್ರದ ಚಿತ್ರೀಕರಣಕ್ಕಾಗಿ ಇಲ್ಲಿ ಅನುಮತಿ ನೀಡಲಾಗಿತ್ತು. ವಿಶ್ವಾಮಿತ್ರಿ ರೈಲು ನಿಲ್ದಾಣದ ನ್ಯಾರೋ ಗೇಜ್ ನಲ್ಲಿ ಚಿತ್ರೀಕರಣ ನಡೆಸಲಾಯಿತು. ಚಿತ್ರೀಕರಣ ವೇಳೆ ರೈಲು ಸೇವೆಗಳು ಬಾಧಿತವಾಗಿಲ್ಲ. ಚಿತ್ರೀಕರಣಕ್ಕಾಗಿ ಆತ್ಯವಿದ್ದ ಬೋಗಿಯನ್ನು ನಾವೇ ಒದಗಿಸಿದ್ದೆವು. ಅದೊಂದು ನಿರುಪಯೋಗಿ ಅಣಕು ಪ್ರದರ್ಶನದ ಬೋಗಿಯಾಗಿತ್ತು'' ಎಂದು ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಖೇಮ್‍ರಾಜ್ ಮೀನಾ ಹೇಳಿದ್ದಾರೆ.

''ಈ ದೃಶ್ಯದ ಚಿತ್ರೀಕರಣಕ್ಕಾಗಿ ರೈಲ್ವೆ ಇಲಾಖೆ ಬೋಗಿಯನ್ನು ಒದಗಿಸಿತ್ತು. ಬೆಂಕಿ ಹತ್ತಿಕೊಂಡಿದ್ದ ರೈಲಿನ ಹೊರಗಿನ ದೃಶ್ಯವನ್ನು ಇಲ್ಲಿ ಚಿತ್ರೀಕರಿಸಲಾಗಿದೆ. ರೈಲಿನ ಒಳಗಿನ ದೃಶ್ಯವನ್ನು ಮುಂಬೈಯ ಸೆಟ್ ನಲ್ಲಿ ಚಿತ್ರೀಕರಿಸಲಾಗುವುದು. ಈ ನಿರ್ದಿಷ್ಟ ದೃಶ್ಯವು ಮೋದಿ ಎದುರಿಸಿದ ಸವಾಲುಗಳ ಬಗ್ಗೆ  ವಿವರಿಸುತ್ತದೆ'' ಎಂದು  ಚಿತ್ರೀಕರಣದ ಉಸ್ತುವಾರಿ ನೋಡಿಕೊಂಡಿದ್ದ ಜಯರಾಜ್ ಗಢ್ವಿ ಹೇಳಿದ್ದಾರೆ.

ತಮಗೆ ಈ ಸಾಕ್ಷ್ಯಚಿತ್ರದ ಬಗ್ಗೆ ಏನೂ ತಿಳಿದಿಲ್ಲ ಎಂದು ವಡೋದರಾದ ಬಿಜೆಪಿ ಸಂಸದ ರಂಜನ್ ಭಟ್ಟ್ ಹೇಳಿದ್ದಾರೆ.

ಅತ್ತ ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ರವೀನ್ ಭಾಸ್ಕರ್ ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ ''ತಮ್ಮ ಕಚೇರಿಗೆ ಚಿತ್ರದ ಸ್ಕ್ರಿಪ್ಟ್ ತೋರಿಸಲಾಗಿತ್ತು ಹಾಗೂ ಅದರಲ್ಲಿ ಗೋಧ್ರಾ ಉಲ್ಲೇಖವಿರಲಿಲ್ಲ. ನನಗೆ ತಿಳಿದಿರುವ ಪ್ರಕಾರ ಪ್ರಧಾನಿ ರೈಲ್ವೆ ಪ್ಲಾಟ್‍ಫಾರ್ಮ್ ನಲ್ಲಿ ಚಹಾ ಮಾರುತ್ತಿರುವ ದೃಶ್ಯ ಪುನರ್ ಸೃಷ್ಟಿಸಲು ಅವರು ಬಯಸಿದ್ದರು. ರೈಲ್ವೆಯ ಅಥವಾ ದೇಶವನ್ನು ಕೆಟ್ಟದಾಗಿ ಬಿಂಬಿಸುವ ಯಾವುದಕ್ಕೂ ಅನುಮತಿಸಲಾಗುವುದಿಲ್ಲ'' ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X