Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ ಜಪ್ತಿ ಸಮೀಪ ಚಿರತೆ ದಾಳಿ:...

ಕುಂದಾಪುರ ಜಪ್ತಿ ಸಮೀಪ ಚಿರತೆ ದಾಳಿ: ಮಹಿಳೆಗೆ ತೀವ್ರ ಗಾಯ

ವಾರ್ತಾಭಾರತಿವಾರ್ತಾಭಾರತಿ4 March 2019 4:40 PM IST
share
ಕುಂದಾಪುರ ಜಪ್ತಿ ಸಮೀಪ ಚಿರತೆ ದಾಳಿ: ಮಹಿಳೆಗೆ ತೀವ್ರ ಗಾಯ

ಕುಂದಾಪುರ, ಮಾ.4: ಚಿರತೆಯೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕೊಂಬಾಡಿ ಮಂದಾಡಿ ಗ್ರಾಪಂ ವ್ಯಾಪ್ತಿಯ ಜಪ್ತಿ ಸಮೀಪದ ಸುಬ್ಬಣ್ಣಕೆರೆ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಜಪ್ತಿ ಕೈಲ್‌ಕೆರೆ ಹುಣ್ಸೆಕಟ್ಟೆಯ ನಿವಾಸಿ ಬೀಚ ಬಾಂದಿ ಎಂಬವರ ಪುತ್ರಿ ಪ್ರೇಮಾ ಬಾಂದಿ (24)  ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಮನೆಯಿಂದ ಜಪ್ತಿ ಕರಿಕಲ್‌ ಕಟ್ಟೆಯಲ್ಲಿರುವ ಜಪ್ತಿ ಹಾಲು ಉತ್ಪಾದಕರ ಸಹಕಾರ ಸಂಘದ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದರು. ಹಾಡಿಯಲ್ಲಿರುವ ಒಳದಾರಿ ಮೂಲಕ ನಡೆದುಕೊಂಡು ಹೋಗುತ್ತಿದ್ದ ಪ್ರೇಮಾ ಅವರ ಮೇಲೆ ಪೊದೆಯಿಂದ ಒಮ್ಮೇಲೆ ಎರಗಿದ ಚಿರತೆ ದಾಳಿ ಮಾಡಿತು.

ಇದರಿಂದ ನೆಲಕ್ಕೆ ಬಿದ್ದ ಪ್ರೇಮಾ ಅವರ ಕಣ್ಣು, ಕಿವಿ, ಕುತ್ತಿಗೆ ಹಾಗೂ ಕೈಗಳಿಗೆ ಚಿರತೆ ಉಗುರಿನಿಂದ ಪರಚಿ ಗಾಯ ಮಾಡಿತ್ತೆನ್ನಲಾಗಿದೆ. ತಕ್ಷಣವೇ ಚಿರತೆ ಅಲ್ಲಿಂದ ಹಾಡಿಯೊಳಗೆ ಓಡಿ ಹೋಗಿ ಮರೆಯಾಯಿತು. ಬಳಿಕ ಪ್ರೇಮಾ ಅವರನ್ನು ಸ್ಥಳೀಯರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿದರು.

‘ತನ್ನ ತಾಯಿಯೊಂದಿಗಿದ್ದ ಪ್ರೇಮಾ, ಕೃಷಿ ಮತ್ತು ಹೈನುಗಾರಿಕೆ ನಡೆಸುತ್ತಿದ್ದಾರೆ. ಇಷ್ಟು ದಿನ ಡೈರಿಗೆ ತಾಯಿ ಹಾಲು ತೆಗೆದುಕೊಂಡು ಹೋಗುತ್ತಿದ್ದರೆ, ಇಂದು ಪ್ರೇಮಾ ಹೊರಟಾಗ ಈ ಘಟನೆ ನಡೆದಿದೆ’ ಎಂದು ಪ್ರೇಮಾ ಅವರ ಅಕ್ಕ ಗೀತಾ ತಿಳಿಸಿದ್ದಾರೆ. ಸ್ಥಳಕ್ಕೆ ಕುಂದಾಪುರ ವಲಯ ಅರಣ್ಯ ಅಧಿಕಾರಿ ಪ್ರಭಾಕರ್ ಕುಲಾಲ್, ಉಪವಲಯ ಅರಣ್ಯ ಅಧಿಕಾರಿ ಉದಯ್ ಆಗಮಿಸಿ ಪರಿಶೀಲನೆ ನಡೆಸಿದರು.

‘ಜಪ್ತಿಯಲ್ಲಿ ಚಿರತೆ ಮೊದಲು ಕಾಣಿಸಿಕೊಂಡಿದ್ದರೂ ಸುತ್ತಮುಲಿನ ಪರಿಸರದಲ್ಲಿ ಕೆಲವೊಮ್ಮೆ ರಾತ್ರಿ ವೇಳೆ ಚಿರತೆ ಘರ್ಜಿಸುವ ಶಬ್ದ ಕೇಳುತ್ತದೆ. ಕೆಲವು ವರ್ಷಗಳಿಂದ ಇಲ್ಲಿ ಚಿರತೆ ಹಾವಳಿ ಇದ್ದು, ನಾಲ್ಕೈದು ನಾಯಿಗಳು ಕೂಡ ಅದಕ್ಕೆ ಬಲಿಯಾಗಿವೆ’ ಎಂದು ಜಪ್ತಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಜೆ.ಕೆ.ಮಹಾಬಲ ನಾಯ್ಕ ತಿಳಿಸಿದ್ದಾರೆ.

‘ಚಿರತೆ ದಾಳಿ ನಡೆಸಿದ ಕಾಲು ದಾರಿಯಲ್ಲಿ ಪ್ರತಿದಿನ ಜಪ್ತಿ ಶಾಲೆಯ ಮಕ್ಕಳು ಹಾಗೂ ಡೈರಿಗೆ ಹಾಲು ತರುವ ಮಹಿಳೆಯರು ನಡೆದುಕೊಂಡು ಹೋಗುತ್ತಿರುತ್ತಾರೆ. ಆದುದರಿಂದ ಅರಣ್ಯ ಇಲಾಖೆ ಕೂಡಲೇ ಎಚ್ಚರ ವಹಿಸಿ ಚಿರತೆ ಸೆರೆಗೆ ಸೂಕ್ತ ಕ್ರಮ ಜರಗಿಸಬೇಕು’ ಎಂದು ಸಂಘದ ಕಾರ್ಯದರ್ಶಿ ವೆಂಕಟೇಶ್ ಒತ್ತಾಯಿಸಿದ್ದಾರೆ.

ಚಿರತೆ ಸೆರೆಗೆ ಎರಡು ಕಡೆ ಬೋನು

ಮಹಿಳೆ ಮೇಲೆ ಚಿರತೆ ದಾಳಿಯ ಹಿನ್ನೆಲೆಯಲ್ಲಿ ಇಂದು ಜಪ್ತಿ ಸುತ್ತ ಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ನಾಯಿಮರಿ ಸಹಿತ ಎರಡು ಬೋನುಗಳನ್ನು ಕುಂದಾಪುರ ವಲಯ ಅರಣ್ಯ ಇಲಾಖೆಯವರು ಇರಿಸಿದ್ದಾರೆ.

‘ಕುಂದಾಪುರ ತಾಲೂಕಿನ ಎಲ್ಲ ಕಡೆ ಚಿರತೆ ಇರುವುದು ಸಾಮಾನ್ಯ. ಮಹಿಳೆ ಮೇಲೆ ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯಲು ಈಗಾಗಲೇ ಎರಡು ಕಡೆಗಳಲ್ಲಿ ಬೋನು ಇರಿಸಲಾಗಿದ್ದು, ಅಗತ್ಯ ಬಿದ್ದರೆ ಹೆಚ್ಚುವರಿ ಬೋನುಗಳನ್ನು ಕೂಡ ಬಳಸಿಕೊಳ್ಳಲಾಗುವುದು. ಗಾಯಗೊಂಡ ಮಹಿಳೆಗೆ ಇಲಾಖೆಯಿಂದ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕುಂದಾಪುರ ವಲಯ ಅರಣ್ಯ ಅಧಿಕಾರಿ ಪ್ರಭಾಕರ್ ಕುಲಾಲ್ ತಿಳಿಸಿದ್ದಾರೆ.

‘ಬೆಳಗ್ಗೆ 6.20ಕ್ಕೆ ಮನೆಯಿಂದ ಡೈರಿಗೆ ಹೊರಟಿದ್ದೆ. ಡೈರಿಗೆ ಹತ್ತಿರದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಒಮ್ಮೇಲೆ ಚಿರತೆ ನನ್ನ ತಲೆಯ ಭಾಗಕ್ಕೆ ದಾಳಿ ಮಾಡಿತು. ಇದರಿಂದ ಕಿವಿ ಹರಿದಿದ್ದು, ಕಣ್ಣು, ಕುತ್ತಿಗೆ ಭಾಗಕ್ಕೆ ಗಾಯವಾಗಿದೆ. ಆ ಕ್ಷಣದಲ್ಲಿ ಏನು ಸಂಭವಿಸಿತು ಎಂದು ನನಗೆ ಗೊತ್ತೆ ಇಲ್ಲ. ನೆಲಕ್ಕೆ ಬಿದ್ದವಳು ಚಿರತೆ ನನ್ನನ್ನು ಬಿಟ್ಟು ಹೋದ ನಂತರ ಹಿಂದೆ ಮನೆಗೆ ನಡೆದು ಕೊಂಡು ಬರುವಾಗ ಸ್ಥಳೀಯರು ನೋಡಿ ಆಸ್ಪತ್ರೆಗೆ ಸಾಗಿಸಿದರು’

-ಪ್ರೇಮಾ ಬಾಂದಿ, ಗಾಯಾಳು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X