Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ವನಿತೆಯರಿಗೆ ಹೀನಾಯ ಸೋಲು

ಭಾರತದ ವನಿತೆಯರಿಗೆ ಹೀನಾಯ ಸೋಲು

ಮೊದಲ ಟ್ವೆಂಟಿ-20 ಬೆಮೌಂಟ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ4 March 2019 11:40 PM IST
share
ಭಾರತದ ವನಿತೆಯರಿಗೆ ಹೀನಾಯ ಸೋಲು

ಗುವಾಹಟಿ, ಮಾ.4: ಸ್ಮತಿ ಮಂಧಾನಾ ಮೊದಲ ಬಾರಿ ನಾಯಕತ್ವ ವಹಿಸಿದ್ದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 41 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಇಂಗ್ಲೆಂಡ್ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪ್ರವಾಸಿ ತಂಡ ಟ್ಯಾಮಿ ಬೆವೌಂಟ್ (62, 57 ಎಸೆತ) ಹಾಗೂ ನಾಯಕಿ ಹೀದರ್ ನೈಟ್ (40, 20 ಎಸೆತ) ಉತ್ತಮ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 160 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಜಮೆ ಮಾಡಿತು. ಆ ಬಳಿಕ ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಇಂಗ್ಲೆಂಡ್ ತಂಡಕ್ಕೆ ಬೆವೌಂಟ್ ಹಾಗೂ ಡ್ಯಾನಿಲ್ಲೆ ವ್ಯಾಟ್(35, 34 ಎಸೆತ)ಮೊದಲ ವಿಕೆಟ್ ಜೊತೆಯಾಟದಲ್ಲಿ ಭರ್ಜರಿ 89 ರನ್‌ಗಳ ಕೊಡುಗೆ ನೀಡಿದರು. ಇನಿಂಗ್ಸ್ ಕೊನೆಯಲ್ಲಿ ಮಿಂಚು ಹರಿಸಿದ ನಾಯಕಿ ಹೀದರ್ ನೈಟ್ 7 ಬೌಂಡರಿ ಬಾರಿಸಿ ತಮ್ಮ ತಂಡ ಉತ್ತಮ ಸ್ಥಿತಿಯಲ್ಲಿರುವಂತೆ ನೋಡಿಕೊಂಡರು. 161 ರನ್ ಗುರಿ ಬೆನ್ನಟ್ಟಿದ ಭಾರತದ ಆರಂಭವೇ ಉತ್ತಮವಾಗಿರಲಿಲ್ಲ. 23 ರನ್ ಆಗುವಷ್ಟರಲ್ಲಿ ಮೂವರು ಬ್ಯಾಟ್ಸ್ ವುಮನ್‌ಗಳು ಪೆವಿಲಿಯನ್ ಸೇರಿದ್ದರು. ಫಾರ್ಮ್‌ನಲ್ಲಿರುವ ಆಟಗಾರ್ತಿ ನಾಯಕಿ ಮಂಧಾನಾ (2) ಹಾಗೂ ಹಿರಿಯ ಆಟಗಾರ್ತಿ ಮಿಥಾಲಿ ರಾಜ್(7, 11 ಎಸೆತ) ಕೂಡ ಭಾರೀ ವೈಫಲ್ಯ ಕಂಡರು.

ವೇದಾ ಕೃಷ್ಣಮೂರ್ತಿ(15), ದೀಪ್ತಿ ಶರ್ಮಾ (ಅಜೇಯ 22) ಅರುಂಧತಿ ರೆಡ್ಡಿ (18) ಹಾಗೂ ಶಿಖಾ ಪಾಂಡೆ(23) ಉತ್ತಮ ಬ್ಯಾಟಿಂಗ್ ನಡೆಸಿದರೂ ಅದು ಗೆಲುವಿಗೆ ಸಾಕಾಗಲಿಲ್ಲ. ಇನ್ನೊಂದು ಅಚ್ಚರಿಯ ಅಂಶವೆಂದರೆ ಇಂಗ್ಲೆಂಡ್ ಭಾರತದ ಇನಿಂಗ್ಸ್ ನಲ್ಲಿ 22 ಇತರ ರನ್‌ಗಳ ಕೊಡುಗೆ ನೀಡಿದೆ. 18 ವೈಡ್‌ಗಳನ್ನು ಎಸೆದಿದ್ದರೂ ಅದನ್ನು ಭಾರತ ಸೂಕ್ತವಾಗಿ ಬಳಸಿಕೊಳ್ಳಲಿಲ್ಲ.

►ಟಿ-20ಯಲ್ಲಿ ಸತತ 5ನೇ ಸೋಲು

ಟಿ20ಯಲ್ಲಿ ಭಾರತ ಸತತ 5ನೇ ಪಂದ್ಯದಲ್ಲಿ ಸೋಲು ಕಂಡಿದ್ದು ಮುಂದಿನ ವರ್ಷ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಕೋಚ್ ಡಬ್ಲು. ವಿ. ರಾಮನ್ ಮಾರ್ಗದರ್ಶನದಲ್ಲಿ ತಂಡ ಕಠಿಣ ಪರಿಶ್ರಮಪಡಬೇಕಾದ ಅಗತ್ಯವನ್ನು ಸಾಕ್ಷೀಕರಿಸಿದೆ.

ನ್ಯೂಝಿಲೆಂಡ್ ತಂಡದ ವಿರುದ್ಧ ಅದರದ್ದೇ ನೆಲದಲ್ಲಿ ಭಾರತ ಏಕದಿನ ಸರಣಿ ಗೆದ್ದ ಬಳಿಕ ನಡೆದ ಟಿ20 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಅದೇ ರೀತಿಯಲ್ಲಿ ಇಂಗ್ಲೆಂಡ್ ತಂಡದ ವಿರುದ್ಧವೂ ಏಕದಿನ ಸರಣಿ ಗೆದ್ದ ಆತಿಥೇಯರು ಮೊದಲ ಟಿ20 ಪಂದ್ಯದಲ್ಲಿ ಸೋಲು ಕಂಡಿದ್ದಾರೆ.

ಭಾರತ ಟಿ20 ತಂಡದ ಅತಿ ಕಿರಿಯ ವಯಸ್ಸಿನ ನಾಯಕಿಯಾಗಿರುವ 22 ವರ್ಷದ ಮಂಧಾನಾ, ‘‘ಡೆತ್ ಓವರ್‌ಗಳಲ್ಲಿ ಭಾರತದ ಬೌಲಿಂಗ್ ಬಲಿಷ್ಠವಾಗಬೇಕಿದೆ’’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X