ಸಜಿಪಮುನ್ನೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ: ಖಾಲಿ ಕೊಡ ಪ್ರದರ್ಶಿಸಿ ಎಸ್ಡಿಪಿಐ ಧರಣಿ

ಬಂಟ್ವಾಳ, ಮಾ.6: ಸಜಿಪಮುನ್ನೂರು ಗ್ರಾಮದಲ್ಲಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಎಸ್ಡಿಪಿಐ ಸಜಿಪ ಮುನ್ನೂರು ಗ್ರಾಮ ಸಮಿತಿಯ ವತಿಯಿಂದ ಇಲ್ಲಿನ ಗ್ರಾಪಂ ಮುಂಭಾಗದಲ್ಲಿ ಖಾಲಿ ಕೊಡ ಪ್ರದರ್ಶಿಸಿ ಬುಧವಾರ ಅನಿರ್ದಿಷ್ಟಾವಧಿ ಧರಣಿ ನಡೆಯಿತು.
ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಸಜಿಪ ಮುನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ 23 ವಾರ್ಡ್ಗಳಿದ್ದು, ಈ ಪ್ರದೇಶದ ಜನರು ಮೂಲಭೂತ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಸಜೀಪ ಮುನ್ನೂರು ಗ್ರಾಮದ 3ನೇ ಬ್ಲಾಕ್ನಲ್ಲಿರುವ ನೀರು ಶುದ್ಧೀಕರಣ ಘಟಕವು ಹಾಳಾಗಿದ್ದು, ನೇರವಾಗಿ ನದಿಯ ಮೂಲಕವೇ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕುಡಿಯಲು ಅಯೋಗ್ಯವಾಗಿದ್ದು, ಇದರಿಂದ ಜನರು ರೋಗದ ಭೀತಿ ಎದುರಿಸುತ್ತಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಅನುದಾನದಡಿ ಸುಮಾರು 28 ಲಕ್ಷ ರೂ. ವೆಚ್ಚದಲ್ಲಿ ಸಜಿಪ ಮುನ್ನೂರು ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ. ಆದರೆ ಇದರ ಕಾಮಗಾರಿ ಕಳಪೆ ಹಾಗೂ ಅಪೂರ್ಣವಾಗಿದ್ದು, ಘಟಕವು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ. ಇದರಿಂದ ಜನರಿಗೆ ಕುಡಿಯಲು ನೇರವಾಗಿ ನದಿಯಿಂದಲೇ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕಲುಷಿತವಾಗಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. ಇದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಅಭಾವ ಉಂಟಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಎಸ್ಡಿಪಿಐ ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ ಮಾತನಾಡಿ, ಈ ಶುದ್ಧೀಕರಣ ಘಟಕವನ್ನು ಸ್ಥಳೀಯ ಗ್ರಾಮ ಪಂಚಾಯತ್ಗೆ ಹಸ್ತಾಂತರ ಮಾಡಿಲ್ಲ. ಕುಡಿಯುವ ನೀರಿನ ಸಮಸ್ಯೆ ಹಾಗೂ ಘಟಕದ ಕಳಪೆ ಕಾಮಗಾರಿಯ ಬಗ್ಗೆ ಶಾಸಕ, ಜಿಲ್ಲಾಧಿಕಾರಿ, ಗ್ರಾಪಂ ಅಧ್ಯಕ್ಷ, ಪಿಡಿಒ ಸಹಿತ ಜಿಪಂ ಇಂಜಿನಿಯರ್ಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಿದರು.
ಈ ಶುದ್ಧೀಕರಣ ನೀರಿನ ಘಟಕದಿಂದ 75 ಮನೆಗಳಿಗೆ ಮಾತ್ರ ನೀರು ಸರಬರಾಜು ಆಗುತ್ತಿದೆ. ಸಜಿಪ ಮುನ್ನೂರು ಗ್ರಾಮದಲ್ಲಿ ಸುಮಾರು 356 ಮನೆಗಳಿಗೆ ತಲುಪುತ್ತಿಲ್ಲ ಎಂದು ಅವರು, ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಧರಣಿಂುಲ್ಲಿ ಎಸ್ಡಿಪಿಐ ಕ್ಷೇತ್ರ ಉಪಾಧ್ಯಕ್ಷ ಖಲಂದರ್ ಪರ್ತಿಪ್ಪಾಡಿ, ಸಜಿಪಮುನ್ನೂರು ಗ್ರಾಪಂ ಸದಸ್ಯರಾದ ಹಂಝ ನಂದಾವರ, ಮಜೀದ್, ಮುಸ್ತಫ ಉಪಸ್ಥಿತರಿದ್ದರು. ಎಸ್ಡಿಪಿಐ ಗ್ರಾಮ ಸಮಿತಿಯ ಸದಸ್ಯ ಮಲಿಕ್ ಕೊಳಕೆ ಸ್ವಾಗತಿಸಿ, ನಿರೂಪಿಸಿದರು






.gif)
.gif)

