Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ರಾಷ್ಟ್ರ ನಿರ್ಮಾಣದಲ್ಲಿ ನನ್ನ ಪಾತ್ರ'...

'ರಾಷ್ಟ್ರ ನಿರ್ಮಾಣದಲ್ಲಿ ನನ್ನ ಪಾತ್ರ' ಮತದಾರರ ಜಾಗೃತಿ ಕಾರ್ಯಕ್ರಮ

ಮತದಾರರ ಪಟ್ಟಿಯಲ್ಲಿ ಹೆಸರು ಖಾತರಿಪಡಿಸಿ: ಸಿಇಒ

ವಾರ್ತಾಭಾರತಿವಾರ್ತಾಭಾರತಿ6 March 2019 7:44 PM IST
share
ರಾಷ್ಟ್ರ ನಿರ್ಮಾಣದಲ್ಲಿ ನನ್ನ ಪಾತ್ರ ಮತದಾರರ ಜಾಗೃತಿ ಕಾರ್ಯಕ್ರಮ

ಮಂಗಳೂರು, ಮಾ.6: ದ.ಕ. ಜಿಲ್ಲೆಯ ಇತರ ತಾಲೂಕುಗಳಿಗಿಂತ ಮಂಗಳೂರು ತಾಲೂಕಿನಲ್ಲಿ ಮತ ಚಲಾಯಿಸುವ ಪ್ರಮಾಣ ಶೇ.10ರಷ್ಟು ಕಡಿಮೆ ಇದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡಿ ಹಕ್ಕು ಚಲಾಯಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಸ್ವೀಪ್ ಘಟಕದ ಅಧ್ಯಕ್ಷ ಹಾಗೂ ಜಿಪಂ ಸಿಇಒ ಡಾ.ಆರ್.ಸೆಲ್ವಮಣಿ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ 'ರಾಷ್ಟ್ರ ನಿರ್ಮಾಣದಲ್ಲಿ ನನ್ನ ಪಾತ್ರ' ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳಿ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನೆರವು ಬೇಕಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಂಪರ್ಕ ಕೇಂದ್ರ ಆರಂಭಿಸಲಾಗಿದೆ. ಮತದಾರರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರು ದೂರವಾಣಿಯ ಮೂಲಕ ಅಥವಾ ಮೊಬೈಲ್ ಮೂಲಕ 1950ಗೆ ಸಂಪರ್ಕಿಸಬಹುದು. ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನೀಡಲಾಗುವ ಮತದಾರರ ಚೀಟಿಯನ್ನು ಈ ಬಾರಿ ಮತದಾನ ಚಲಾಯಿಸುವ ಅಧಿಕೃತ ದಾಖಲಾತಿ ಎಂದು ಪರಿಗಣಿಸಲಾಗುವುದಿಲ್ಲ, ಮತದಾರರ ಚೀಟಿ ಜೊತೆ ಮತದಾರರ ಗುರುತಿನ ಚೀಟಿ ಅಥವಾ ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್, ಕೇಂದ್ರ ಸರಕಾರ/ ರಾಜ್ಯ ಸರಕಾರ/ ಸಾರ್ವಜನಿಕ ಸಂಸ್ಥೆಯಿಂದ ಪಡೆದ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿ ಪಾಸ್ ಪುಸ್ತಕ , ಪಾನ್ ಕಾರ್ಡ್ , ಸ್ಮಾಟ್ ಕಾರ್ಡ್, ಜಾಬ್ ಕಾರ್ಡ್, ಕಾರ್ಮಿಕ ಸಚಿವಾಲಯದಿಂದ ನೀಡಿದ ಆರೋಗ್ಯ ವಿಮೆ ಸ್ಮಾಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲಾತಿ, ಅಧಿಕೃತ ಗುರುತಿನ ಚೀಟಿ, ಆಧಾರ್ ಕಾರ್ಡ್ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಿ ಮತ ಚಲಾಯಿಸಲು ಅವಕಾಶವಿದೆ ಎಂದರು.

ಮಹಾನಗರ ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ, 'ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು' ಎನ್ನುವುದು ಪ್ರಸಕ್ತ ಚುನಾವಣಾ ಆಯೋಗದ ಧ್ಯೇಯವಾಕ್ಯವಾಗಿದೆ. ಪ್ರತಿಯೊಬ್ಬರು ಮತಚಲಾಯಿಸಿ ಸದೃಢ ರಾಷ್ಟ್ರ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸಬೇಕು. ಮತದಾರರು ಮತದಾನ ಮಾಡಲು ತಮ್ಮ ಹೆಸರು ಮತಪಟ್ಟಿಯಲ್ಲಿ ನೊಂದಣಿ ಆಗಿದೆಯಾ ಎಂದು ತಿಳಿಯಲು ತಮ್ಮ ಮೊಬೈಲ್‌ನಿಂದ KAEPIC (epic card no)  ಎಂದು ಟೈಪ್ ಮಾಡಿ ಮೊ. 9731979899ಕ್ಕೆ ಎಸ್‌ಎಂಎಸ್ ಕಳುಹಿಸಿ ಖಚಿತಪಡಿಸಿಕೊಳ್ಳಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X