ಬೇಳೂರು ಗೋಪಾಲಕೃಷ್ಣ ಬಂಧನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು, ಮಾ.6: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಅವರನ್ನು ಬಂಧಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
ಬುಧವಾರ ನಗರದ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರಿಗೆ ದೂರು ಸಲ್ಲಿಸಿದ ಬಿಜೆಪಿ ಮುಖಂಡರು, ಬೇಳೂರು ಗೋಪಾಲಕೃಷ್ಣ ಉದ್ದೇಶ ಪೂರ್ವಕವಾಗಿಯೇ ನರೇಂದ್ರ ಮೋದಿ ಹತ್ಯೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ನಾರಾಯಣ ಸ್ವಾಮಿ, ರಾಜ್ಯ ಪೊಲೀಸರು, ಗೋಪಾಲಕೃಷ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ, ಸುಮೋಟೊ ಆರೋದಪಡಿ ಮೊಕದ್ದಮೆ ದಾಖಲಿಸಬೇಕು. ಆದರೆ, ಸಮ್ಮಿಶ್ರ ಸರಕಾರದ ಒತ್ತಡಕ್ಕೆ ಮಣಿದು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ದೂರಿದರು.
Next Story