Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ನೇತೃತ್ವದಷ್ಟು ಶಕ್ತಿಯುತವಾದ...

ಮೋದಿ ನೇತೃತ್ವದಷ್ಟು ಶಕ್ತಿಯುತವಾದ ಸರ್ಕಾರ ಮತ್ತೊಂದಿಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ6 March 2019 10:50 PM IST
share
ಮೋದಿ ನೇತೃತ್ವದಷ್ಟು ಶಕ್ತಿಯುತವಾದ ಸರ್ಕಾರ ಮತ್ತೊಂದಿಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಮೈಸೂರು,ಮಾ.6: ಸ್ವಾತಂತ್ರ್ಯ ಬಂದಾಗಿನಿಂದ ಇಷ್ಟೊಂದು ಶಕ್ತಿಯುತವಾಗಿ ಕೆಲಸ ಮಾಡಿರುವ ಸರ್ಕಾರ ಮತ್ತೊಂದಿಲ್ಲ ಎಂದು ಕೇಂದ್ರದ ಪ್ರಧಾನಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡರು.

ಖಾಸಗಿ ಹೋಟೆಲ್‍ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ವೇಗವನ್ನು ನಾವು ಹಿಂಬಾಲಿಸುತ್ತಿದ್ದೇವೆ. ಇತಿಹಾಸದಲ್ಲಿ ಬೇರೆ ಯಾವುದೇ ಸರ್ಕಾರವೂ ಇಷ್ಟೊಂದು ಶಕ್ತಿಯುತವಾಗಿ ಕೆಲಸ ಮಾಡಿಲ್ಲ. 1947 ರಿಂದ ಇಷ್ಟು ಶ್ರಮವಹಿಸಿ ಕೆಲಸ ಮಾಡಿದ ಉದಾಹರಣೆ ಇಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಇದೆ. ಇತಿಹಾಸದಲ್ಲಿ ಬೇರೆ ಯಾವುದೇ ಸರ್ಕಾರವೂ ಮಾಡದ ಕೆಲಸವನ್ನ ಶಕ್ತಿಯುತವಾಗಿ ನಮ್ಮ ಸರ್ಕಾರ ಮಾಡಿದೆ. ರೈತರು ಸೇರಿದಂತೆ ಎಲ್ಲಾ ವರ್ಗದವರನ್ನು ನಾವು ತಲುಪಿದ್ದೇವೆ. ಯುಪಿಎ ಸಮಯದಲ್ಲಿ ಬೆಲೆ ಏರಿಕೆಯಾಗಿತ್ತು. ಬೇಳೆ 200 ಕೆಜಿ ತರಕಾರಿ 80 ರಿಂದ 150. ಎಲ್ಲದರ ಕೊರತೆ ಉಂಟಾಗಿತ್ತು. ಸಾರ್ವಜನಿಕ ವಲಯದ ಅನೇಕ ಉದ್ಯಮಗಳು ಬಂದ್ ಆಗಿದ್ದವು. ಜನರು ಅಸಹಾಯಕರಾಗಿದ್ದರು. ಈ ದೇಶದ ಬದಲಾಯಿಸಲಾಗುವುದಿಲ್ಲ ಅನ್ನೋ ಹಂತ ತಲುಪಿದ್ದರು. ಯಾವ ರೀತಿ ಸುಧಾರಣೆಯಾಗುತ್ತೆ ಅನ್ನುವ ಪರಿಸ್ಥಿತಿ ಇತ್ತು. ಕೇಳುವ ಕೆಲಸ ಮಾಡುವ ಸರ್ಕಾರ ಬೇಕಾಗಿತ್ತು. ಅದನ್ನು ಮೋದಿ ಸರ್ಕಾರ ಮಾಡಿದೆ ಎಂದು ಹೇಳಿದರು.

ಭ್ರಷ್ಟಾಚಾರದ ಒಂದೂ ಆರೋಪ ಕೇಳಿ ಬಂದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ರಫೇಲ್ ಬಗ್ಗೆ ಅರ್ಥವೇ ಆಗಿಲ್ಲ. ರಾಷ್ಟ್ರೀಯ ಹಿತಾಸಕ್ತಿಗೆ ಕೆಲಸ ಮಾಡೋದು ಅವರಿಗೆ ಗೊತ್ತಿಲ್ಲ. ಡಿಫೆನ್ಸ್ ಕಾರ್ಯವೈಖರಿ ಗೊತ್ತಿಲ್ಲ. ಎಲ್ಲವನ್ನೂ ಒಂದು ಪೈಸೆ ಕಿಕ್ ಬ್ಯಾಕ್ ನೀಡದೆ ಖರಿದೀಸಿದ್ದೇವೆ ಎಂದು ಹೇಳಿದರು.

ಶತ್ರುಗಳು ನಮ್ಮ ನಿರ್ಧಾರವನ್ನು ಇಷ್ಟಪಟ್ಟಿಲ್ಲ. ಅದಕ್ಕಾಗಿ ತಪ್ಪು ಮಾಹಿತಿಗಳನ್ನು ಹರಡುತ್ತಿದ್ದಾರೆ. ಇಂತಹದನ್ನು ನಂಬಿದರೆ ಮತ್ತಷ್ಟು ಅಟ್ಯಾಕ್‍ಗಳು ಆಗುತ್ತವೆ. ಆತ್ಮಹತ್ಯಾ ದಾಳಿಗಳಾಗುತ್ತವೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ. ನಾವು ಭಯೋತ್ಪಾದಕ ಕ್ಯಾಂಪ್ ಮೇಲೆ ಮಾಡಿದ ದಾಳಿ ಗುಪ್ತಚರ ವರದಿ ಆಧಾರಿತ ದಾಳಿ. ನಾವು ಹೋಗಿ ಮಾಡಿದ್ದಲ್ಲ, ಸೇನೆ ಮಾಡಿದ್ದು. ಹಿಂದಿನಿಂದಲೂ ದೇಶದಲ್ಲಿ ಆದ ದಾಳಿ ಬಗ್ಗೆ ಪಾಕಿಸ್ಥಾನಕ್ಕೆ ನಿರಂತರವಾಗಿ ಸಾಕ್ಷ್ಯ ನೀಡುತ್ತಿದ್ದೇವೆ. ಅವರೂ ಏನು ಮಾಡುತ್ತಿಲ್ಲ. ಪುಲ್ವಾಮ ದಾಳಿ ಆದ 10 ದಿನದ ನಂತರವೂ ಪಾಕಿಸ್ಥಾನ ಏನು ಮಾಡಲಿಲ್ಲ. ಅದಕ್ಕಾಗಿ ಭಯೋತ್ಪಾದಕರ ಕ್ಯಾಂಪ್ ಮೇಲೆ ದಾಳಿ ಮಾಡಿದ್ದೇವೆ. ಹಿಂದೆ ಏನೂ ಮಾಡದವರು ಈಗ ಸಾಕ್ಷಿ ಕೇಳುತ್ತಿದ್ದಾರೆ. 26/11 ಅಟ್ಯಾಕ್ ಆದಾಗ ಏನು ಮಾಡದವರು ಸಾಕ್ಷಿ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X