Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ಯಾಟ್ ಒಪ್ಪಂದ ದೇಶದ ಸಾರ್ವಭೌಮತೆಗೆ...

ಗ್ಯಾಟ್ ಒಪ್ಪಂದ ದೇಶದ ಸಾರ್ವಭೌಮತೆಗೆ ಕುತ್ತು ತಂದಿದೆ: ಸಾಮಾಜಿಕ ಕಾರ್ಯಕರ್ತ ದಿಲೀಪ್ ಕಾಮತ್

ಸಮುದಾಯ ಕಲಿಕಾ ಆಂದೋಲನ ತರಬೇತಿದಾರರ ಕೈಪಿಡಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ6 March 2019 11:37 PM IST
share
ಗ್ಯಾಟ್ ಒಪ್ಪಂದ ದೇಶದ ಸಾರ್ವಭೌಮತೆಗೆ ಕುತ್ತು ತಂದಿದೆ: ಸಾಮಾಜಿಕ ಕಾರ್ಯಕರ್ತ ದಿಲೀಪ್ ಕಾಮತ್

ಬೆಂಗಳೂರು, ಮಾ.6: ಗ್ಯಾಟ್(ವಿಶ್ವ ವಾಣಿಜ್ಯ ಒಪ್ಪಂದ) ಒಪ್ಪಂದ ಭಾರತದ ಸಾರ್ವಭೌಮತೆಗೆ ಕುತ್ತು ತಂದಿದೆ. ಇದು ಸರಿಯಾಗಬೇಕಾದರೆ ಶ್ರಮಿಕ ವರ್ಗದಿಂದ ಮಾತ್ರ ಸಾಧ್ಯ ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ದಿಲೀಪ್ ಕಾಮತ್ ತಿಳಿಸಿದರು.

ಬುಧವಾರ ಎಚ್‌ಐಡಿ ಫೋರಂ ವತಿಯಿಂದ ನಗರದ ಎಸಿಎಂ ಹೌಸ್‌ನಲ್ಲಿ ಆಯೋಜಿಸಿದ್ದ ‘ಸಮುದಾಯ ಕಲಿಕಾ ಆಂದೋಲನ ತರಬೇತಿದಾರರ ಕೈಪಿಡಿ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವಿಶ್ವ ವಾಣಿಜ್ಯ ಒಪ್ಪಂದ(ಗ್ಯಾಟ್)ದಿಂದಾಗಿ ಕೇವಲ ಬಂಡವಾಳಶಾಹಿಗಳಿಗೆ ಅನುಕೂಲವಾಗಿದೆಯೆ ವಿನಃ ಈ ದೇಶದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾ ಸಾಗಿದ್ದೇವೆ. ಜಾಗತೀಕರಣ ಹಾಗೂ ಆಧುನೀಕರಣದ ಪರಿಣಾಮವಾಗಿ ದೇಶದ ಮೂಲಭೂತ ಲಕ್ಷಣಗಳೆ ಕಳೆದು ಹೋಗಿದೆ ಎಂದು ಅವರು ವಿಷಾದಿಸಿದರು.

ಬಂಡವಾಳಶಾಹಿಗಳಿಗೆ ಪರ್ಯಾಯವಾಗಿ ಶ್ರಮಿಕ ವರ್ಗವನ್ನು ಒಂದು ಶಕ್ತಿಯಾಗಿ ರೂಪಿಸುವಲ್ಲಿ ಕಮ್ಯುನಿಸ್ಟ್ ಕಾರ್ಮಿಕ ಸಂಘಟನೆಗಳು ವಿಫಲವಾಗಿವೆ. ಮಾರ್ಕ್ಸ್ ಸಿದ್ಧಾಂತಗಳ ತಪ್ಪು ಆಚರಣೆಯಿಂದಾಗಿ ಬಂಡವಾಳಶಾಹಿಗಳಿಗೆ ಪೂರಕವಾಗುವಂತಹ ಪ್ರಕ್ರಿಯೆಯಲ್ಲಿ ಕಾರ್ಮಿಕ ಸಂಘಟನೆಗಳು ತೊಡಗಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ದೇಶದ ಸ್ವಾತಂತ್ರ ನಂತರದ ಆರಂಭ ಘಟ್ಟದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟವು ಸರಿಯಾದ ದಾರಿಯಲ್ಲಿಯೆ ಸಾಗುತ್ತಿತ್ತು. ಜನರ ನಿಜವಾದ ಆಶಯಗಳು ಸರಿಯಾಗಿ ಗ್ರಹಿಸುವುದು ಹಾಗೂ ಸರಕಾರದ ಮೇಲೆ ಒತ್ತಡ ತಂದು ಜನಪರ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರತರಾಗುತ್ತಿದ್ದವು. ಆದರೆ, ಗ್ಯಾಟ್ ಒಪ್ಪಂದದ ನಂತರ ಸ್ವಯಂ ಸೇವಾ ಸಂಸ್ಥೆಗಳು ಎನ್‌ಜಿಒಗಳಾಗಿ ಪರಿವರ್ತನೆಗೊಂಡವು ಹಾಗೂ ತಮ್ಮ ಚಿಂತನೆಗಳ ಸ್ವರೂಪವನ್ನು ಆಮೂಲಾಗ್ರವಾಗಿ ಬದಲಾಯಿಸಿಕೊಂಡವು ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಸರಕಾರ ಅನ್ನಭಾಗ್ಯ ಸೇರಿದಂತೆ ಆರ್ಥಿಕವಾಗಿ ಸುಧಾರಿಸುವಂತಹ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿವೆ. ಆದರೆ, ಕೇವಲ ಆರ್ಥಿಕ ಸ್ವಾವಲಂಬನೆಯಿಂದ ಎಲ್ಲವು ಬದಲಾಗುವುದಿಲ್ಲ. ಅದರಲ್ಲೂ ಜನತೆಯ ದುಡಿಮೆಗೆ ಬೇಕಾದ ವಾತಾವರಣ ನಿರ್ಮಿಸದೆ ಕೇವಲ ಉಚಿತವಾಗಿ ಅಕ್ಕಿ, ಹಾಲು, ಸವಲತ್ತುಗಳನ್ನು ಕೊಟ್ಟು, ಪರಾವಲಂಬಿಗಳನ್ನಾಗಿ ಮಾಡುವುದು ದೇಶದ ಅಭಿವೃದ್ಧಿಗೆ ಮಾರಕವಾದದ್ದೆಂದು ಅವರು ಅಭಿಪ್ರಾಯಿಸಿದರು.

ದೇಶದ ಎಲ್ಲ ಸಮುದಾಯಗಳು ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ಸಮಾನತೆ ಕಾಣದ ಹೊರತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುವುದಿಲ್ಲ. ಈ ನಿಟ್ಟಿನಲ್ಲಿ ಎಚ್‌ಐಡಿ ಫೋರಂ ಸಂಸ್ಥೆಯು ರಾಜ್ಯದ, ದೇಶದ ಪ್ರತಿಯೊಬ್ಬರು ಜೀವನಾಧಾರಿತ ಕೌಶಲ್ಯ, ಬದುಕಿನ ಮೌಲ್ಯ ಹಾಗೂ ಸಂಘಟಿತವಾಗಿ ಬದುಕುವ ರೀತಿಯನ್ನು ಕಲಿಯುವಂತಹ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದರು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡಿ ಸಂಸ್ಥೆಯ ಪ್ರಾಧ್ಯಾಪಕಿ ವಾಸವಿ ಮಾತನಾಡಿ, ಕಳೆದ ಎರಡು ದಶಕಗಳಿಂದೀಚೆಗೆ ದೇಶದಲ್ಲಿ ರೈತರ ಆದಾಯ ಶೇ.19ರಷ್ಟು ಹೆಚ್ಚಳವಾದರೆ, ಸರಕಾರಿ ನೌಕರರ ಸಂಬಳ ಶೇ.400, 500ಪಟ್ಟು ಹೆಚ್ಚಳವಾಗಿದೆ. ಹಾಗೂ ಕಾರ್ಪೊರೇಟ್ ಕಂಪೆನಿ ನೌಕರರ ಸಂಬಳ ಶೇ.1000ಪಟ್ಟು ಹೆಚ್ಚಾಗಿದೆ. ಇಷ್ಟು ತಾರತಮ್ಯ ಇರುವ ಸಮಾಜದಲ್ಲಿ ಎಲ್ಲರನ್ನು ಸಮಾನತೆಯಡೆಗೆ ತರುವುದು ಸವಾಲಿನ ಸಂಗತಿಯಾಗಿದೆ ಎಂದು ತಿಳಿಸಿದರು.

ಹಳ್ಳಿಗಳಲ್ಲಿ ಹಿಂದಿಗಿಂತಲೂ ಇತ್ತೀಚಿನ ದಶಕಗಳಲ್ಲಿ ಸ್ವಜಾತಿ ಹಿತಾಸಕ್ತಿಗಳು ಹೆಚ್ಚಾಗುತ್ತಿದೆ. ಹಳ್ಳಿಗಳಲ್ಲಿ ಎಲ್ಲರು ಕೂಡಿ ಆಟವಾಡುತ್ತಿದ್ದ ಮಕ್ಕಳು ಈಗ ಜಾತಿವಾರು ಆಟದಲ್ಲಿ ತೊಡಗಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಈ ಪ್ರಕ್ರಿಯೆಯನ್ನು ಬದಲಾಯಿಸುವ ನಿಟ್ಟಿನಲ್ಲಿ ಸಮುದಾಯ ಕಲಿಕಾ ಆಂದೋಲನ ತರಬೇತಿ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಎಚ್‌ಎಂಡಿ ಫೋರಂ ನಿರ್ದೇಶಕ ವೆಂಕಟೇಶ್, ಚಂದ್ರು, ವಿಆರ್‌ಡಿಎಸ್ ಸಂಸ್ಥೆಯ ಮುಖ್ಯಸ್ಥ ಬಳಿಗಾರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X