Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿಂಧುಗೆ ಪ್ರಥಮ ಸುತ್ತಿನಲ್ಲೇ ಸೋಲಿನ...

ಸಿಂಧುಗೆ ಪ್ರಥಮ ಸುತ್ತಿನಲ್ಲೇ ಸೋಲಿನ ಆಘಾತ

ವಾರ್ತಾಭಾರತಿವಾರ್ತಾಭಾರತಿ6 March 2019 11:38 PM IST
share
ಸಿಂಧುಗೆ ಪ್ರಥಮ ಸುತ್ತಿನಲ್ಲೇ ಸೋಲಿನ ಆಘಾತ

ಬರ್ಮಿಂಗ್‌ಹ್ಯಾಮ್, ಮಾ.6: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಬುಧವಾರ ನಡೆದ ಪ್ರಥಮ ಸುತ್ತಿನ ಪಂದ್ಯದಲ್ಲೇ ಸೋಲಿನ ಆಘಾತಕ್ಕೆ ಒಳಗಾಗಿದ್ದಾರೆ. ಟೂರ್ನಿಯಲ್ಲಿ 5ನೇ ಶ್ರೇಯಾಂಕ ಪಡೆದಿದ್ದ ಸಿಂಧು, ಮಹಿಳಾ ಸಿಂಗಲ್ಸ್‌ನಲ್ಲಿ ಕೊರಿಯದ ಎದುರಾಳಿ ಸಂಗ್ ಜಿ ಹ್ಯೂನ್ ವಿರುದ್ಧ 16-21, 22-20, 18-21 ಗೇಮ್‌ಗಳಿಂದ ಮಣಿದು ಭಾರೀ ನಿರಾಸೆ ಉಂಟುಮಾಡಿದರು. ಪ್ರಬಲ ಹೋರಾಟ ಕಂಡುಬಂದ ಪಂದ್ಯವು ಸುಮಾರು 1 ತಾಸು 20 ನಿಮಿಷಗಳ ಕಾಲ ನಡೆಯಿತು.

ಪ್ರಥಮ ಗೇಮ್‌ನ್ನು ಕಳೆದುಕೊಂಡ ಬಳಿಕ ಎರಡನೇ ಗೇಮ್‌ನಲ್ಲಿ ಭರ್ಜರಿ ವಾಪಸಾತಿ ಮಾಡಿದರು ಹೈದರಾಬಾದ್ ಬೆಡಗಿ ಸಿಂಧು. ಎರಡನೇ ಗೇಮ್‌ನಲ್ಲಿ ವಿಶ್ವ ನಂ.6 ಆಟಗಾರ್ತಿ ಮೂರು ಮ್ಯಾಚ್‌ಪಾಯಿಂಟ್‌ಗಳನ್ನು ಉಳಿಸಿಕೊಂಡು 22-20ರಿಂದ ಗೇಮ್‌ನ್ನು ವಶಪಡಿಸಿಕೊಂಡರು.

ಪ್ರಥಮ ಎರಡು ಗೇಮ್‌ನಂತೆಯೇ ವಿಶ್ವ ನಂ.10 ಆಟಗಾರ್ತಿ ಸಂಗ್ ಮೂರನೇ ಗೇಮ್‌ನಲ್ಲೂ ಪಾರಮ್ಯ ಮೆರೆದೆರು. ಮೂರನೇ ಗೇಮ್‌ನಲ್ಲಿ 20-13ರಿಂದ ಭಾರೀ ಮುನ್ನಡೆ ಪಡೆದಿದ್ದ ಸಂಗ್, ಆ ಬಳಿಕ ಸಿಂಧು ಆ ಮುನ್ನಡೆಯನ್ನು 18-20ಕ್ಕೆ ತಗ್ಗಿಸಿದಾಗ ಅಲ್ಪ ವಿಚಲಿತರಾದರು. ಆದರೆ ಕೊರಿಯ ಆಟಗಾರ್ತಿ 21-18ರಿಂದ ಗೇಮ್‌ನ್ನು ವಶಪಡಿಸಿಕೊಳ್ಳುವುದನ್ನು ಸಿಂಧುಗೆ ತಡೆಯಲಾಗಲಿಲ್ಲ.

ಸಿಂಧು ವಿರುದ್ಧ ಗೆಲುವು ಕಂಡ ಸಂಗ್ ಜಿ ತಮ್ಮ ಮುಂದಿನ ಪಂದ್ಯದಲ್ಲಿ ಹಾಂಕಾಂಗ್‌ನ ಚೆಂಗ್ ಗಾನ್ ಯಿ ಅವರನ್ನು ಎದುರಿಸಲಿದ್ದಾರೆ.

►ಮಹಿಳಾ ಡಬಲ್ಸ್‌ನಲ್ಲಿ ಮೇಘನಾ- ಪೂರ್ವಿಶಾ ಪರಾಭವ

ಟೂರ್ನಿಯ ಮಹಿಳಾ ಡಬಲ್ಸ್‌ನಲ್ಲಿ ಭಾರತದ ಮೇಘನಾ ಜಕ್ಕಂಪುಡಿ ಹಾಗೂ ಪೂರ್ವಿಶಾ ಎಸ್. ರಾಮ್ ಜೋಡಿಯು ಅತ್ಯಂತ ಪೈಪೋಟಿ ಕಂಡುಬಂದ ಪಂದ್ಯದಲ್ಲಿ ರಶ್ಯದ ಏಕಟೆರಿನಾ ಬೊಲೊಟೊವಾ ಹಾಗೂ ಅಲಿನಾ ಡೆವೆಲ್ಟೊವಾ ಜೋಡಿಗೆ 21-18, 12-21, 12-21ರಿಂದ ಮಣಿಯಿತು. ಮೊದಲ ಗೇಮ್‌ನಲ್ಲಿ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದ ಭಾರತೀಯ ಆಟಗಾರ್ತಿಯರಿಗೆ ಅದೇ ಪ್ರದರ್ಶನವನ್ನು ಮುಂದುವರಿಸಲು ಆಗಲಿಲ್ಲ.

►ಸಾಯಿ ಪ್ರಣೀತ್ ಎರಡನೇ ಸುತ್ತಿಗೆ

ಪ್ರಥಮ ಸುತ್ತಿನ ಪಂದ್ಯದಲ್ಲಿ ತಮ್ಮದೇ ದೇಶದ ಎಚ್.ಎಸ್.ಪ್ರಣಯ್ ಅವರನ್ನು ಸೋಲಿಸಿದ ಭಾರತದ ಸಾಯಿ ಪ್ರಣೀತ್ ಇಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.

52 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ 21-19, 21-19 ನೇರ ಗೇಮ್‌ಗಳಿಂದ ಪ್ರಣಯ್‌ರನ್ನು ಮಣಿಸಿದ ಪ್ರಣೀತ್ ದ್ವಿತೀಯ ಸುತ್ತಿಗೆ ಕಾಲಿಟ್ಟರು. ತಮ್ಮ ಮುಂದಿನ ಪಂದ್ಯದಲ್ಲಿ ಅವರು ಹಾಂಕಾಂಗ್‌ನ ಎನ್‌ಜಿ ಕಾ ಲಾಂಗ್ ಆ್ಯಂಗಸ್ ಅವರ ಸವಾಲನ್ನು ಎದುರಿಸಲಿದ್ದಾರೆ. ಮತ್ತೊಂದೆಡೆ ಆ್ಯಂಗಸ್ ಅವರು ಇಂಡೋನೇಶ್ಯದ ಅಂತೋನಿ ಸಿನಿಸುಕ ಗಿಂಟಿಂಗ್ ಅವರನ್ನು 21-18, 13-21, 21-11ರಿಂದ ಮಣಿಸಿದರು.

ಈ ಗೆಲುವಿನೊಂದಿಗೆ ಪ್ರಣೀತ್ ಅವರು ಪ್ರಣಯ್ ಅವರೊಂದಿಗಿನ ಹೆಡ್ ಟು ಹೆಡ್ ಗೆಲುವಿನ ದಾಖಲೆಯನ್ನು 2-2 ರಿಂದ ಸಮಗೊಳಿಸಿದರು. 2013 ಹಾಗೂ 2011ರಲ್ಲಿ ಎರಡು ಪಂದ್ಯಗಳಲ್ಲಿ ಪ್ರಣೀತ್ ಅವರು ಪ್ರಣಯ್‌ಗೆ ಸೋತಿದ್ದರು. ಆದರೆ ಬುಧವಾರ ಉತ್ತಮ ಪ್ರದರ್ಶನದ ಮೂಲಕ ಸುಧಾರಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X