Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಸಶಸ್ತ್ರ ಪಡೆಗೆ ‘ಕೊಹ್ಲಿ ಪಡೆ’...

ಭಾರತದ ಸಶಸ್ತ್ರ ಪಡೆಗೆ ‘ಕೊಹ್ಲಿ ಪಡೆ’ ವಿಶೇಷ ಗೌರವ ಸಲ್ಲಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ8 March 2019 7:15 PM IST
share
ಭಾರತದ ಸಶಸ್ತ್ರ ಪಡೆಗೆ ‘ಕೊಹ್ಲಿ ಪಡೆ’ ವಿಶೇಷ ಗೌರವ ಸಲ್ಲಿಸಿದ್ದು ಹೀಗೆ…

ರಾಂಚಿ, ಮಾ.8: ಪುಲ್ವಾಮ ಭಯೋತ್ಪಾದಕ ದಾಳಿಗೆ ಪ್ರಾಣ ಕಳೆದುಕೊಂಡಿರುವ ಸಿಆರ್‌ಪಿಎಫ್ ಯೋಧರಿಗೆ ಗೌರವ ಸಲ್ಲಿಕೆಯ ದ್ಯೋತಕವಾಗಿ ಭಾರತೀಯ ಕ್ರಿಕೆಟಿಗರು ಶುಕ್ರವಾರ ಆಸ್ಟ್ರೇಲಿಯ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ವಿಶೇಷ ಮಿಲಿಟರಿ ಕ್ಯಾಪನ್ನು ಧರಿಸಿದರು. ಆಟಗಾರರು ಈ ಪಂದ್ಯದಲ್ಲಿ ಪಡೆಯುವ ಶುಲ್ಕವನ್ನು ರಾಷ್ಟ್ರೀಯ ರಕ್ಷಣಾ ನಿಧಿಗೆ ದೇಣಿಗೆ ನೀಡಲಿದ್ದಾರೆ.

ನಾಯಕ ವಿರಾಟ್ ಕೊಹ್ಲಿ ಟಾಸ್ ಚಿಮ್ಮಿಸುವ ವೇಳೆಗೆ ಮಿಲಿಟರಿ ಕ್ಯಾಪ್ ಧರಿಸಿಕೊಂಡು ಮೈದಾನಕ್ಕೆ ಇಳಿದರು. ಈ ಕ್ಯಾಪ್‌ನಲ್ಲಿ ಬಿಸಿಸಿಐನ ಲಾಂಛನವಿದೆ. ಇದೊಂದು ಹುತಾತ್ಮ ಯೋಧರಿಗೆ ನೀಡಿದ ಗೌರವ ಎಂದು ಸ್ಪಷ್ಟಪಡಿಸಿರುವ ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಇದು ಪ್ರತಿ ವರ್ಷ ನಡೆಯಲಿದೆ ಎಂಬ ಮಾಧ್ಯಮ ವರದಿಯನ್ನು ನಿರಾಕರಿಸಿದರು.

ಪ್ರತಿಯೊಬ್ಬರೂ ರಾಷ್ಟ್ರೀಯ ರಕ್ಷಣಾ ನಿಧಿಗೆ ಕೊಡುಗೆ ನೀಡಬೇಕು ಎಂದು ವಿನಂತಿಸಿಕೊಂಡ ಕೊಹ್ಲಿ, ಈ ನಿಧಿ ಹುತಾತ್ಮ ಸಿಆರ್‌ಪಿಎಫ್ ಯೋಧರ ಕುಟುಂಬ ಸದಸ್ಯರ ಕಲ್ಯಾಣಕ್ಕೆ ವಿನಿಯೋಗವಾಗಲಿದೆ ಎಂದರು.

‘‘ಇದೊಂದು ವಿಶೇಷ ಟೋಪಿ. ಇದು ಸಶಸ್ತ್ರ ಪಡೆಗಳಿಗೆ ಸಲ್ಲಿಸುವ ಗೌರವವಾಗಿದೆ. ನಾವೆಲ್ಲರೂ 3ನೇ ಪಂದ್ಯದ ಶುಲ್ಕವನ್ನು ರಾಷ್ಟ್ರೀಯ ರಕ್ಷಣಾ ನಿಧಿಗೆ ದೇಣಿಗೆ ನೀಡುತ್ತೇವೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಈ ಕೆಲಸಕ್ಕೆ ಕೈಜೋಡಿಸಬೇಕೆಂದು ಕೇಳಿಕೊಳ್ಳುತ್ತೇನೆ’’ ಎಂದು ಕೊಹ್ಲಿ ಹೇಳಿದ್ದಾರೆ.

ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ರ್ಯಾಂಕ್ ಪಡೆದಿರುವ ಮಾಜಿ ನಾಯಕ ಎಂ.ಎಸ್. ಧೋನಿ ಸೈನಿಕರಿಗೆ ಈ ರೀತಿಯ ಗೌರವ ನೀಡುವ ಯೋಚನೆ ಬಂದಿತ್ತು ಎಂದು ತಿಳಿದುಬಂದಿದೆ.

 ಧೋನಿ ಮಿಲಿಟರಿ ಕ್ಯಾಪ್‌ಗಳನ್ನು ತನ್ನ ಸಹ ಆಟಗಾರರಿಗೆ ಹಾಗೂ ಭಾರತೀಯ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಾಕಿದ್ದಾರೆ.

ಭಾರತದ ಆಡುವ 11ರ ಬಳಗದಲ್ಲಿರುವ ಸದಸ್ಯರು ಪ್ರತಿ ಏಕದಿನ ಪಂದ್ಯಕ್ಕೆ 8 ಲಕ್ಷ ರೂ. ಸಂಭಾವನೆ ಪಡೆಯುತ್ತಾರೆ. ಮೀಸಲು ಆಟಗಾರರು 4 ಲಕ್ಷ ರೂ. ಶುಲ್ಕ ಪಡೆಯುತ್ತಾರೆ. ಐಪಿಎಲ್ ಉದ್ಘಾಟನಾ ಸಮಾರಂಭದ ಇಡೀ ಆಯವ್ಯಯವನ್ನು ಉಗ್ರಗಾಮಿಗಳ ದಾಳಿಗೆ ತುತ್ತಾಗಿರುವ ಯೋಧರ ಕುಟುಂಬಕ್ಕೆ ದಾನ ನೀಡುವುದಾಗಿ ಬಿಸಿಸಿಐ ಈಗಾಗಲೇ ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X