Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾದಿಗ ಸಮುದಾಯದ ಪ್ರತಿನಿಧಿಗಳು ಸಮ್ಮಿಶ್ರ...

ಮಾದಿಗ ಸಮುದಾಯದ ಪ್ರತಿನಿಧಿಗಳು ಸಮ್ಮಿಶ್ರ ಸರಕಾರದಿಂದ ಹೊರಬರಲಿ: ಮಾದಿಗ ಮಹಾಸಭಾ ಆಗ್ರಹ

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಳಿಸದ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ8 March 2019 9:31 PM IST
share

ಬೆಂಗಳೂರು, ಮಾ. 8: ನ್ಯಾ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುತ್ತೇವೆ ಎಂದು ಹೇಳಿ ಮಾತು ತಪ್ಪಿದ ಸಮ್ಮಿಶ್ರ ಸರಕಾರದಿಂದ ರಾಜ್ಯ ಮಾದಿಗ ಸಮುದಾಯದ ಪ್ರತಿನಿಧಿಗಳು ಹೊರ ಬರುವಂತೆ ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಸಂಚಾಲಕ ಅಂಬಣ್ಣ ಅರೋಲಿಕರ್, ಸದಾಶಿವ ಆಯೋಗದ ವರದಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸನ್ನು ಲೋಕಸಭಾ ಚುನಾವಣೆ ಪೂರ್ವದಲ್ಲಿ ಮಾಡಬೇಕು ಅಥವಾ ರಾಜ್ಯ ಸರಕಾರ ಈಗಿರುವ 101 ಪರಿಶಿಷ್ಟ ಜಾತಿಗಳ ಪಟ್ಟಿಯನ್ನು ವಿಸರ್ಜಿಸಿ, 1932ರ ಆಶಯದಂತೆ ಕೇರಳ ಮಾದರಿಯಂತೆ ರಾಜ್ಯದಲ್ಲಿರುವ ಪರಿಶಿಷ್ಟರ ಪಟ್ಟಿಯನ್ನು ಹೊಸದಾಗಿ ತಯಾರಿಸಬೇಕು. ಮಾಡದಿದ್ದಲ್ಲಿ, ಲೋಕಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯದವರು ಕಾಂಗ್ರೆಸ್‌ನಿಂದ ಹೊರಬಂದು ಅನ್ಯ ಪಕ್ಷಕ್ಕೆ ಬೆಂಬಲ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಎರಡೂವರೆ ದಶಕಗಳಿಂದ ನಮ್ಮ ಸಮುದಾಯವು ನಿರಂತರವಾಗಿ ಹೋರಾಟವನ್ನು ಕೈಗೆತ್ತಿಕೊಂಡಿದ್ದು, ಹಿಂದುಳಿದ ವರ್ಗಗಳಲ್ಲಿ ಪ್ರವರ್ಗ 1, 2, 3 ವರ್ಗಿಕರಿಸಿದಂತೆ ಪರಿಶಿಷ್ಟ ಜಾತಿಯಲ್ಲೂ ಜನಸಂಖ್ಯಾಧಾರಿತ ಒಳ ಮೀಸಲಾತಿಯನ್ನು ವರ್ಗಿಕರಿಸದಿದ್ದರೆ, ತಳ ಸಮುದಾಯಗಳಲ್ಲಿ ಅಕ್ರಮವಾಗಿ ನುಸುಳುತ್ತಿರುವ ಕೆಲ ಬಲಾಢ್ಯ ಕೋಮುಗಳು ಮೀಸಲಾತಿಯ ಸಿಂಹಪಾಲು ಪಡೆದು, ನೈಜ ಫಲಾನುಭವಿಗಳಾದ ಅಸ್ಪಶ್ಯ ಸಮುದಾಯಗಳು ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೊಳಪಟ್ಟಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಆಯೋಗದ ವರದಿಯನ್ನು ಅಂಗೀಕರಿಸುವ ವಿಚಾರದಲ್ಲಿ ಬೋವಿ, ಲಂಬಾಣಿ, ಕೊರಮ ಹಾಗೂ ಮಾದಿಗ ಸಮುದಾಯದಲ್ಲಿ ರಾಜಕೀಯ ನಾಯಕರು ಗೊಂದಲಗಳನ್ನು ಸೃಷ್ಟಿಮಾಡಿ ಸಮುದಾಯಗಳಲ್ಲಿ ಸಾಮರಸ್ಯತೆಯನ್ನು ಕದಡುತ್ತಿದ್ದು, ಅದಕ್ಕಾಗಿ ವರದಿಯ ಸತ್ಯಾಂಶ ಬಹಿರಂಗಪಡಿಸುವ ಮುಖಾಂತರ ಪರಿಶಿಷ್ಟ ಸಮುದಾಯಗಳಲ್ಲಿ ಒಗ್ಗಟ್ಟನ್ನು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಅಲ್ಲದೆ, ಸಂವಿಧಾನ ಪರಿಚ್ಚೇದ 162, 16(4)ರನ್ವಯ ರಾಜ್ಯ ಸರಕಾರ ಸರಿಯಾಗಿ ಸಮಾನವಾದ ತಾರತಮ್ಯವಾಗದಂತೆ ನೋಡಿಕೊಳ್ಳುವ ಅಧಿಕಾರವು ರಾಜ್ಯ ಸರಕಾರಕ್ಕೆ ಇದೆ. ಇಂತಹ ವಿಚಕ್ಷಣಾಯುತ ಅಧಿಕಾರದಿಂದಲೇ ಬೇರೆ ರಾಜ್ಯಗಳು ಒಳ ಮೀಸಲಾತಿ ವರ್ಗಿಕರಣ ಜಾರಿ ಮಾಡಿವೆ. ಆದ್ದರಿಂದ ಕರ್ನಾಟಕ ಘನ ಸರಕಾರವು ಪರಿಶಿಷ್ಟ ಜಾತಿ ಸಮುದಾಯದಲ್ಲಿರುವ ಶೇ.15ರ ಮೀಸಲಾತಿಯಲ್ಲಿ ಜನಸಂಖ್ಯಾ ಆಧರಿತ ವರ್ಗಿಕರಣ ಮಾಡಲು ಯಾವ ನ್ಯಾಯಿಕ ಉಲ್ಲಂಘನೆಯೂ ಆಗುವುದಿಲ್ಲ ಎಂದು ಹೇಳಿದರು.

ಹೀಗಾಗಿ, ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳಲ್ಲಿ ಆರ್ಥಿಕ, ಸಾಮಾಜಿಕ ಹಿಂದುಳಿಯುವಿಕೆ ಹಿನ್ನೆಲೆಯಲ್ಲಿ ಜನಸಂಖ್ಯಾವಾರು ಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಶಾಸನಬದ್ಧವಾಗಿರುವ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯ ತಕ್ಕಪಾಠ ಕಲಿಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಸಂಚಾಲಕರಾದ ನಾಗರಾಜ ಕೋಡಿಗೇಹಳ್ಳಿ, ಶಿವಾನಂದ ಬಿಸನಾಳ, ಸುಬ್ಬಣ್ಣ ಹೊಸಕೋಟೆ, ಮುರುಳಿ ಮೇಲಿಮನಿ, ಮತ್ತಣ್ಣ ಬೆಣ್ಣೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X